social_icon

ಬಜೆಟ್ ಅಧಿವೇಶನ 2022: ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯಕ್ಕೆ ಉತ್ತರಿಸಲಿರುವ ಪ್ರಧಾನಿ ನರೇಂದ್ರ ಮೋದಿ

ಸಂಸತ್ತಿನ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಆರಂಭ ದಿನ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉತ್ತರಿಸಲಿದ್ದಾರೆ.

Published: 07th February 2022 11:54 AM  |   Last Updated: 07th February 2022 01:48 PM   |  A+A-


PM Narendra Modi

ಪಿಎಂ ನರೇಂದ್ರ ಮೋದಿ

Posted By : Sumana Upadhyaya
Source : ANI

ನವದೆಹಲಿ: ಸಂಸತ್ತಿನ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಆರಂಭ ದಿನ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉತ್ತರಿಸಲಿದ್ದಾರೆ.

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆ ಸುಮಾರು 12 ಗಂಟೆಗಳ ಕಾಲ ನಡೆಯಿತು. ಈ ಮಧ್ಯೆ, ಕಳೆದ ವಾರ ರಾಜ್ಯಸಭೆಯು ಬಜೆಟ್ ಅಧಿವೇಶನ ಚರ್ಚೆಯಲ್ಲಿ ಶೇಕಡಾ 100 ರಷ್ಟು ಫಲವನ್ನು ಸಾಧಿಸಿದೆ. ಮೇಲ್ಮನೆ ಕಲಾಪ ಮುಂದೂಡಿಕೆಯಾಗದೇ, ಯಾವುದೇ ಗದ್ದಲ, ಕೋಲಾಹಲ ನಡೆಯದೆ ಸದ್ಭಳಕೆಯಾಗಿದೆ.

ಸಂಸತ್ತಿನ 2022 ರ ಬಜೆಟ್ ಅಧಿವೇಶನವು ಕಳೆದ ಜನವರಿ 31 ರಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಭಾಷಣದೊಂದಿಗೆ ಪ್ರಾರಂಭವಾಯಿತು. ಬಜೆಟ್ ಅಧಿವೇಶನದ ಮೊದಲ ಭಾಗ ಜನವರಿ 31 ರಿಂದ ಫೆಬ್ರವರಿ 11 ರವರೆಗೆ ನಡೆಯುತ್ತಿದ್ದು, ಎರಡನೇ ಭಾಗ ಮಾರ್ಚ್ 14 ರಿಂದ ಏಪ್ರಿಲ್ 8 ರವರೆಗೆ ನಡೆಯಲಿದೆ.

ಇದನ್ನೂ ಓದಿ: ಗಾನ ಕೋಗಿಲೆ ಲತಾ ಮಂಗೇಶ್ಕರ್'ಗೆ ರಾಜ್ಯಸಭೆಯಲ್ಲಿ ನಮನ: ಮೌನಾಚರಣೆ ಬಳಿಕ 1 ಗಂಟೆ ಕಲಾಪ ಮುಂದೂಡಿಕೆ

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಕಳೆದ ಜನವರಿ 31ರಂದು ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುತ್ತಾ, ಪ್ರಸಕ್ತ ಹಣಕಾಸು ವರ್ಷದ ಮೊದಲ ಏಳು ತಿಂಗಳಲ್ಲಿ 48 ಶತಕೋಟಿ ಡಾಲರ್ ಹೂಡಿಕೆಯ ಒಳಹರಿವು ಭಾರತದ ಬೆಳವಣಿಗೆಯಲ್ಲಿ ಜಾಗತಿಕ ಹೂಡಿಕೆದಾರ ಸಮುದಾಯವು ಹೊಂದಿರುವ ನಂಬಿಕೆಗೆ ಸಾಕ್ಷಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದರು.

ದೇಶದ ಹೆಚ್ಚುತ್ತಿರುವ ರಫ್ತುಗಳ ಕುರಿತು ಭಾಷಣದಲ್ಲಿ ಪ್ರಸ್ತಾಪಿಸಿದ್ದ ರಾಷ್ಟ್ರಪತಿಗಳು, ''ಭಾರತದ ವಿದೇಶಿ ವಿನಿಮಯ ಮೀಸಲು ಇಂದು 630 ಶತಕೋಟಿ ಡಾಲರ್‌ಗಳನ್ನು ಮೀರಿದೆ. ನಮ್ಮ ರಫ್ತು ಕೂಡ ವೇಗವಾಗಿ ಬೆಳೆದಿದೆ, ಹಲವಾರು ಹಿಂದಿನ ದಾಖಲೆಗಳನ್ನು ಮುರಿದಿದೆ. ಕಳೆದ ವರ್ಷ 2021 ಏಪ್ರಿಲ್‌ನಿಂದ ಡಿಸೆಂಬರ್ ಅವಧಿಯಲ್ಲಿ ನಮ್ಮ ಸರಕು-ರಫ್ತು 300 ಶತಕೋಟಿ ಡಾಲರ್‌ಗಳಷ್ಟಿದೆ. ಅಂದರೆ 22 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚಾಗಿದೆ, ಇದು 2020ರ ಅವಧಿಗಿಂತ ಒಂದೂವರೆ ಪಟ್ಟು ಹೆಚ್ಚಾಗಿದೆ ಎಂದಿದ್ದರು.


Stay up to date on all the latest ದೇಶ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp