ಮಣಿಪುರ ಭೂಕುಸಿತ: ಸಾವಿನ ಸಂಖ್ಯೆ 29ಕ್ಕೆ ಏರಿಕೆ, 34 ಮಂದಿ ನಾಪತ್ತೆ, ರಕ್ಷಣಾ ಕಾರ್ಯಾಚರಣೆಗೆ ಮಳೆ ಅಡ್ಡಿ
ನೊನಿ: ಮಣಿಪುರದ ನೊನಿ ಜಿಲ್ಲೆಯ ರೈಲ್ವೆ ಕಾಮಗಾರಿ ಪ್ರದೇಶದಲ್ಲಿ ಭಾರಿ ಭೂಕುಸಿತದಿಂದಾಗಿ ಅವಶೇಷಗಳ ಅಡಿ ಸಿಲುಕಿದ್ದ 8 ಮೃತದೇಹಗಳನ್ನು ಶನಿವಾರ ಹೊರಕ್ಕೆ ತೆಗೆಯಲಾಗಿದ್ದು, ಸಾವನ್ನಪ್ಪಿದರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೂನ್ 29 ರ ರಾತ್ರಿ ತುಪುಲ್ ಯಾರ್ಡ್ ರೈಲ್ವೆ ನಿರ್ಮಾಣ ಶಿಬಿರದಲ್ಲಿ ಭಾರಿ ಭೂಕುಸಿತ ಸಂಭವಿಸಿದ ನಂತರ ಮೂವತ್ನಾಲ್ಕು ಜನರು ಇನ್ನೂ ನಾಪತ್ತೆಯಾಗಿದ್ದಾರೆ. ಪ್ರತಿಕೂಲ ಹವಾಮಾನ ರಕ್ಷಣಾ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ಪತ್ತೆಯಾದ ಎಂಟು ಮೃತದೇಹಗಳಲ್ಲಿ ಐವರು ಟೆರಿಟೋರಿಯಲ್ ಆರ್ಮಿ ಸಿಬ್ಬಂದಿ ಮತ್ತು ಒಬ್ಬರು ನಿರ್ಮಾಣ ಕಂಪನಿಯ ಉದ್ಯೋಗಿಯಾಗಿದ್ದಾರೆ. ಇನ್ನಿಬ್ಬರ ಗುರುತು ಪತ್ತೆಯಾಗಿಲ್ಲ. ತುಪುಲ್ನ ಭೂಕುಸಿತ ಪ್ರದೇಶದಲ್ಲಿ ಪರಿಸ್ಥಿತಿ ಇನ್ನೂ ಗಂಭೀರವಾಗಿದೆ. ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಿರಿಯ ಆಯೋಗದ ಅಧಿಕಾರಿ ಸೇರಿದಂತೆ 14 ರಕ್ಷಣಾ ಸಿಬ್ಬಂದಿಯ ಮೃತದೇಹಗಳನ್ನು ಅವರ ಊರಿಗೆ ಕಳುಹಿಸಲಾಗಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಮೃತದೇಹಗಳನ್ನು ಅವರ ಸ್ಥಳಗಳಿಗೆ ಕಳುಹಿಸುವ ಮೊದಲು ಇಂಫಾಲ್ನಲ್ಲಿ ಮೃತ ಸಿಬ್ಬಂದಿಗೆ ಸಂಪೂರ್ಣ ಮಿಲಿಟರಿ ಗೌರವವನ್ನು ನೀಡಲಾಯಿತು ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ