social_icon

ಪಳನಿಸ್ವಾಮಿಗೆ ಜಯ, ಪನ್ನೀರ್ ಸೆಲ್ವಂಗೆ ಹಿನ್ನಡೆ: ಎಐಎಡಿಎಂಕೆ ಮಹತ್ವದ ಸಭೆಗೆ ಮದ್ರಾಸ್ ಹೈಕೋರ್ಟ್ ಗ್ರೀನ್ ಸಿಗ್ನಲ್

ಎಐಎಡಿಎಂಕೆ ನಾಯಕ ಇ ಪಳನಿಸ್ವಾಮಿ ವನಗರಂನಲ್ಲಿರುವ ಪಕ್ಷದ ಕಚೇರಿಗೆ ಸಾಮಾನ್ಯ ಮಂಡಳಿ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದಾರೆ. ಮದ್ರಾಸ್ ಹೈಕೋರ್ಟ್ ಕೆಲವೇ ಕ್ಷಣಗಳ ಹಿಂದೆ ಎಡಿಎಂಕೆ ಸಾಮಾನ್ಯ ಮಂಡಳಿ ಸಭೆ ನಡೆಸಲು ಹಸಿರು ನಿಶಾನೆ ತೋರಿಸಿದೆ. 

Published: 11th July 2022 09:39 AM  |   Last Updated: 11th July 2022 01:31 PM   |  A+A-


Tussle for power in the AIADMK: O Panneerselvam and Edappadi K Palaniswamy

ಎಐಎಡಿಎಂಕೆಯಲ್ಲಿ ಅಧಿಕಾರಕ್ಕಾಗಿ ಹಣಾಹಣಿ: ಓ ಪನ್ನೀರಸೆಲ್ವಂ ಮತ್ತು ಎಡಪ್ಪಾಡಿ ಕೆ ಪಳನಿಸ್ವಾಮಿ

Posted By : sumana
Source : The New Indian Express

ಚೆನ್ನೈ: ಎಐಎಡಿಎಂಕೆ ನಾಯಕ ಇ ಪಳನಿಸ್ವಾಮಿ ವನಗರಂನಲ್ಲಿರುವ ಪಕ್ಷದ ಕಚೇರಿಗೆ ಸಾಮಾನ್ಯ ಮಂಡಳಿ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದಾರೆ. ಮದ್ರಾಸ್ ಹೈಕೋರ್ಟ್ (Madras high court) ಕೆಲವೇ ಕ್ಷಣಗಳ ಹಿಂದೆ ಎಡಿಎಂಕೆ ಸಾಮಾನ್ಯ ಮಂಡಳಿ ಸಭೆ (General council meeting) ನಡೆಸಲು ಹಸಿರು ನಿಶಾನೆ ತೋರಿಸಿದೆ. 

ಹಂಗಾಮಿ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಪುನರುಜ್ಜೀವನಗೊಳಿಸಲು, ಸಂಯೋಜಕ ಮತ್ತು ಜಂಟಿ ಸಂಯೋಜಕ ಹುದ್ದೆಗಳನ್ನು ರದ್ದುಗೊಳಿಸಲು ಪ್ರಸ್ತಾಪಿಸುವ ಸಭೆಯನ್ನು ಸ್ಥಗಿತಗೊಳಿಸುವಂತೆ ಓ ಪನ್ನೀರಸೆಲ್ವಂ ಮಾಡಿದ್ದ ಮನವಿಯನ್ನು ತಿರಸ್ಕರಿಸಿದೆ. ಈ ಮೂಲಕ ಪಳನಿಸ್ವಾಮಿಯವರಿಗೆ ಜಯ ಸಿಕ್ಕಿದ್ದು ಕಾನೂನು ಹೋರಾಟದಲ್ಲಿ ಪನ್ನೀರ್ ಸೆಲ್ವಂಗೆ ಹಿನ್ನಡೆಯಾಗಿದೆ. 

ಅದಕ್ಕೂ ಮುನ್ನ ಇಂದು ಚೆನ್ನೈಯ ಎಡಿಎಂಕೆ ಕಚೇರಿಯ ಮುಂದೆ ಭಾರೀ ಪ್ರತಿಭಟನೆ, ಹೈಡ್ರಾಮವೇ ನಡೆದುಹೋಯಿತು. ಜನರಲ್ ಕೌನ್ಸಿಲ್ ಸಭೆಗೂ ಮುನ್ನ ಪಕ್ಷದ ನಾಯಕರಾದ ಇ ಪಳನಿಸ್ವಾಮಿ (EPS) ಮತ್ತು ಒ ಪನ್ನೀರಸೆಲ್ವಂ (OPS) ಅವರ ಬೆಂಬಲಿಗರು ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳನ್ನು ಸುಟ್ಟು ಹಾಕಿರುವ ಘಟನೆ ನಡೆಯಿತು. ಇ ಪಳನಿಸ್ವಾಮಿ ಮತ್ತು ಒ ಪನ್ನೀರ್ ಸೆಲ್ವಂ ಅವರ ಬೆಂಬಲಿಗರ ಮಧ್ಯೆ ಘರ್ಷಣೆಯ ರೀತಿಯ ಪರಿಸ್ಥಿತಿ ನಡೆದುಹೋಯಿತು. ಕೊನೆಗೆ ಪೊಲೀಸರು ಬಂದು ಪರಿಸ್ಥಿತಿ ನಿಯಂತ್ರಿಸಿದರು.

ಇದನ್ನೂ ಓದಿ: ಎಐಎಡಿಎಂಕೆ ಜಿಸಿ ಮಹತ್ವದ ಸಭೆ: ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಇ ಪಳನಿಸ್ವಾಮಿ ನೇಮಕ, ಹಲವು ನಿರ್ಣಯ ಅಂಗೀಕಾರ

ಎಡಿಎಂಕೆ ಭವಿಷ್ಯ ನಿರ್ಧಾರ: ಇಂದು ಪಕ್ಷದ ಸಾಮಾನ್ಯ ಸಭೆಗೆ ನ್ಯಾಯಾಲಯ ಅನುಮತಿ ನೀಡಿದರೆ ಎಡಪ್ಪಾಡಿ ಪಳನಿಸ್ವಾಮಿಯವರನ್ನು ಪಕ್ಷದ ಮಧ್ಯಂತರ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸುವುದು ಬಹುತೇಕ ನಿಶ್ಚಿತವಾಗಿದೆ. ಅವರಿಗೆ ಪಕ್ಷದ ಸಾಮಾನ್ಯ ಮಂಡಳಿ ಸದಸ್ಯರಿದೆ ಬೆಂಬಲ ಅಧಿಕವಾಗಿದೆ. ಇದು ಪನ್ನೀರ್ ಸೆಲ್ವಂ ಬೆಂಬಲಿಗರನ್ನು ಉದ್ರೇಕಗೊಳಿಸಿ ತೀವ್ರ ಅಸಮಾಧಾನಕ್ಕೆ ಕಾರಣವಾಗಲಿದ್ದು ಮತ್ತೊಂದು ಸುತ್ತಿನ ಕಾನೂನು ಸಮರಕ್ಕೆ ಪಕ್ಷ ಹೋಗುವುದು ಬಹುತೇಕ ಖಚಿತವಾಗಿದೆ. 


Stay up to date on all the latest ದೇಶ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp