ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಶಿವಸೇನೆ ಬೆಂಬಲ- ಉದ್ಧವ್ ಠಾಕ್ರೆ ಘೋಷಣೆ

ಇದೇ ತಿಂಗಳ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ಶಿವಸೇನೆ ತೀರ್ಮಾನಿಸಿದೆ. 
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ
Updated on

ಮುಂಬೈ: ಇದೇ ತಿಂಗಳ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ಶಿವಸೇನೆ ತೀರ್ಮಾನಿಸಿದೆ. 

ಈ ಕುರಿತು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ  ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆ, ಯಾವುದೇ ಒತ್ತಡವಿಲ್ಲದೆ ಮುರ್ಮು ಅವರನ್ನು ಬೆಂಬಲಿಸಲು ಶಿವಸೇನೆ ನಿರ್ಧರಿಸಿರುವುದಾಗಿ ತಿಳಿಸಿದರು. ಶಿವಸೇನಾ ಸಂಸದರ ಸಭೆಯಲ್ಲಿ ಯಾರೂ ಕೂಡಾ ನನ್ನಗೆ ಒತ್ತಡ ಹಾಕಲಿಲ್ಲ ಎಂದು ಅವರು ಹೇಳಿದರು.

ಇದೇ ಮೊದಲ ಬಾರಿಗೆ ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರು ರಾಷ್ಟ್ರಪತಿಯಾಗುವ  ಅವಕಾಶವಿರುವುದಾಗಿ ಪಕ್ಷದ ಬುಡಕಟ್ಟು ಮುಖಂಡರು ಹೇಳಿರುವುದಾಗಿ ತಿಳಿಸಿದರು. ಪ್ರಸ್ತುತ ನಡೆಯುತ್ತಿರುವ ರಾಜಕೀಯ ಪರಿಸ್ಥಿತಿಯಲ್ಲಿ ನಾನು ಮುರ್ಮು ಅವರನ್ನು ಬೆಂಬಲಸಬಾರದು. ಆದರೆ, ನಾವು ಸಣ್ಣ ಮನಸ್ಥಿತಿ ಹೊಂದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com