social_icon

ನಾನು ಬೆಂಬಲ ಕೇಳಲು ಯತ್ನಿಸಿದಾಗ ಕರೆ ಸ್ವೀಕರಿಸಲೂ ನಿತೀಶ್ ನಿರಾಕರಿಸಿದ್ದರು: ರಾಷ್ಟ್ರಪತಿ ಅಭ್ಯರ್ಥಿ ಯಶ್ವಂತ್ ಸಿನ್ಹಾ

ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಅಭ್ಯರ್ಥಿಯಾಗಿರುವ ಯಶ್ವಂತ್ ಸಿನ್ಹಾ ಬಿಹಾರ ಸಿಎಂ ನಿತೀಶ್ ಕುಮಾರ್ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Published: 16th July 2022 01:38 AM  |   Last Updated: 16th July 2022 01:23 PM   |  A+A-


ಯಶ್ವಂತ್ ಸಿನ್ಹಾ

Posted By : srinivasrao
Source : The New Indian Express

ಪಾಟ್ನ: ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಅಭ್ಯರ್ಥಿಯಾಗಿರುವ ಯಶ್ವಂತ್ ಸಿನ್ಹಾ ಬಿಹಾರ ಸಿಎಂ ನಿತೀಶ್ ಕುಮಾರ್ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

"ನಾನು ರಾಷ್ಟ್ರಪತಿ ಚುನಾವಣೆಯಲ್ಲಿ ಬೆಂಬಲ ಕೇಳಲು ಯತ್ನಿಸಿದಾಗ ಬಿಹಾರ ಸಿಎಂ ನಿತೀಶ್ ಕುಮಾರ್ ನನ್ನ ಕರೆ ಸ್ವೀಕರಿಸುವುದಕ್ಕೂ ನಿರಾಕರಿಸಿದ್ದರು" ಎಂದು ಯಶ್ವಂತ್ ಸಿನ್ಹಾ ಬೇಸರ ವ್ಯಕ್ತಪಡಿಸಿದ್ದಾರೆ. 

ಸಿನ್ಹಾ ಹಾಗೂ ನಿತೀಶ್ ಕುಮಾರ್ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಸಂಪುಟ ಸಹೋದ್ಯೋಗಿಗಳಾಗಿದ್ದರು. 

ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಒಡಿಶಾ ಮೂಲದವರಾಗಿದ್ದು ರಾಜ್ಯದ ಮಗಳೆಂಬ ಕಾರಣಕ್ಕಾಗಿ ಸಿಎಂ ನವೀನ್ ಪಟ್ನಾಯಕ್ ಮುರ್ಮುಗೆ ಬೆಂಬಲ ಘೋಷಿಸಿದ್ದಾರೆ. ಆದರೆ ನಾನು ಬಿಹಾರದವನಾಗಿದ್ದರೂ ಬಿಹಾರ ಸಿಎಂ ನಿತೀಶ್ ಕುಮಾರ್ ನನಗೆ ಬೆಂಬಲ ನೀಡಲು ಮುಂದಾಗಿಲ್ಲ ಎಂದು ಯಶ್ವಂತ್ ಸಿನ್ಹಾ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಯಲ್ಲೂ 'ಆಪರೇಷನ್ ಕಮಲ': ಬಿಜೆಪಿ ಹಣಬಲದ ಆಟವಾಡುತ್ತಿದೆ ಎಂದ ಯಶವಂತ್ ಸಿನ್ಹಾ

"ನನ್ನನ್ನು ವಿಪಕ್ಷಗಳು ರಾಷ್ಟ್ರಪತಿ ಅಭ್ಯರ್ಥಿ ಎಂದು ಘೋಷಿಸಿದಾಗ ನಾನು ಬೆಂಬಲ ಕೇಳಲು ನಿತೀಶ್ ಕುಮಾರ್ ಅವರಿಗೆ ಹಲವು ಬಾರಿ ಕರೆ ಮಾಡಲು ಯತ್ನಿಸಿದೆ. ಆದರೆ ಅವರು ಕರೆ ಸ್ವೀಕರಿಸಲೇ ಇಲ್ಲ" ಎಂದು ಮನನೊಂದ ಸಿನ್ಹಾ ಹೇಳಿದ್ದಾರೆ. 

ಜು.18 ರಂದು ನಡೆಯಲಿರುವ ಚುನಾವಣೆಗೆ ಯಶ್ವಂತ್ ಸಿನ್ಹಾ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು. ಈ ವೇಳೆ ಬಿಹಾರ ವಿಪಕ್ಷ ನಾಯಕ ತೇಜಸ್ವಿ ಯಾದವ್, ಶತೃಘ್ನ ಸಿನ್ಹಾ, ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾನಿ ಅವರ ಆಪ್ತ ಸುಧೀಂದ್ರ ಕುಲಕರ್ಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

60 ವರ್ಷಗಳ ಬಳಿಕ, ರಾಜೇಂದ್ರ ಪ್ರಸಾದ್ ಅವರ ನಂತರ ಈ ನೆಲದಿಂದ ಒಬ್ಬರು ರಾಷ್ಟ್ರಪತಿಯಾದರೆ ಅದು ಬಿಹಾರಕ್ಕೆ ಒಳಿತು ಮಾಡುತ್ತದೆ. ಈ ನಗರದಲ್ಲೇ ನಾನು ಹುಟ್ಟಿ ಬೆಳೆದಿದ್ದು, ನನ್ನ ವಿದ್ಯಾಭ್ಯಾಸವಾಗಿದ್ದು ಪಾಟ್ನ ವಿಶ್ವವಿದ್ಯಾನಿಲಯದಲ್ಲಿ ಬಿಹಾರ ಕೇಡರ್ ನ ಐಎಎಸ್ ಅಧಿಕಾರಿಯಾಗಿಯೂ ನಾನು ಕಾರ್ಯನಿರ್ವಹಿಸಿದ್ದೇನೆ ಎಂದು ಸಿನ್ಹಾ ಹೇಳಿದ್ದಾರೆ. 


Stay up to date on all the latest ದೇಶ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp