social_icon

ನಾಳೆ ರಾಷ್ಟ್ರಪತಿ ಚುನಾವಣೆ: ಮುರ್ಮು ಬಹುತೇಕ ಗೆಲುವು ಸಾಧ್ಯತೆ

ನಾಳೆ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ದೇಶದ ಸುಮಾರು 4,800 ಚುನಾಯಿತ ಜನ ಪ್ರತಿನಿಧಿಗಳು 15ನೇ ರಾಷ್ಟ್ರಪತಿ ಆಯ್ಕೆ ಮಾಡಲು ಸೋಮವಾರ ಮತದಾನ ಮಾಡಲಿದ್ದಾರೆ.

Published: 17th July 2022 10:30 AM  |   Last Updated: 17th July 2022 10:34 AM   |  A+A-


Murmu1

ದ್ರೌಪದಿ ಮುರ್ಮು

Posted By : nagaraja
Source : PTI

ನವದೆಹಲಿ: ನಾಳೆ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ದೇಶದ ಸುಮಾರು 4,800 ಚುನಾಯಿತ ಜನ ಪ್ರತಿನಿಧಿಗಳು 15ನೇ ರಾಷ್ಟ್ರಪತಿ ಆಯ್ಕೆ ಮಾಡಲು ಸೋಮವಾರ ಮತದಾನ ಮಾಡಲಿದ್ದಾರೆ. ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಶೇಕಡಾ 60 ರಷ್ಟು ಮತಗಳನ್ನು ಪಡೆದು ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಸೋಲಿಸುವ ಸಾಧ್ಯತೆ ಹೆಚ್ಚಾಗಿದೆ.

ಸಂಸತ್ ಭವನ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮತದಾನ ನಡೆಯಲಿದ್ದು, ಬ್ಯಾಲೆಟ್ ಬಾಕ್ಸ್ ಗಳು ಈಗಾಗಲೇ ಅಲ್ಲಿಗೆ ತಲುಪಿವೆ. ಜುಲೈ 21 ರಂದು ಸಂಸತ್ ಭವನದಲ್ಲಿ ಮತ ಎಣಿಕೆ ನಡೆಯಲಿದ್ದು, ಜುಲೈ 25 ರಂದು ಮುಂದಿನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ: ಉಪ ರಾಷ್ಟ್ರಪತಿ ಚುನಾವಣೆ: ಪ.ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ಎನ್ ಡಿಎ ಅಭ್ಯರ್ಥಿ

ಪ್ರಾದೇಶಿಕ ಪಕ್ಷಗಳಾದ ಬಿಜು ಜನತಾ ದಳ, ವೈಎಸ್‌ಆರ್ ಕಾಂಗ್ರೆಸ್ , ಬಹುಜನ ಸಮಾಜ ಪಕ್ಷ, ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ, ತೆಲುಗು ದೇಶಂ ಪಕ್ಷ, ಜನತಾ ದಳ-ಜಾತ್ಯತೀತ, ಶಿರೋಮಣಿ ಅಕಾಲಿದಳ, ಶಿವಸೇನೆ ಮುಂತಾದವುಗಳ ಬೆಂಬಲದೊಂದಿಗೆ ಮುರ್ಮು ಅವರ ಮತ ಹಂಚಿಕೆಯು ಸುಮಾರು ಮೂರನೇ ಎರಡರಷ್ಟು ತಲುಪುವ ಸಾಧ್ಯತೆಯಿದೆ ಮತ್ತು ಅವರು ಬುಡಕಟ್ಟು ಸಮುದಾಯದಿಂದ ಉನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸುತ್ತಿರುವ ಮೊದಲ ಮಹಿಳೆಯಾಗಲಿದ್ದಾರೆ.

ಒಟ್ಟು 10,86,431 ಮತಗಳ ಪೈಕಿ ವಿವಿಧ ಪ್ರಾದೇಶಿಕ ಪಕ್ಷಗಳ ಬೆಂಬಲದ ನಂತರ ಎನ್ ಡಿಎ ಅಭ್ಯರ್ಥಿ ಈಗ 6.67 ಲಕ್ಷಕ್ಕೂ ಹೆಚ್ಚು ಮತಗಳನ್ನು ಹೊಂದಿದ್ದಾರೆ. ಪ್ರಾತಿನಿಧ್ಯ ವ್ಯವಸ್ಥೆಯ ಮೂಲಕ ರಾಷ್ಟ್ರಪತಿ ಆಯ್ಕೆ ನಡೆಯಲಿದ್ದು, ಚುನಾಯಿತ ಸಂಸದರು ಮತ್ತು ರಾಜ್ಯ ಶಾಸಕಾಂಗ ಸಭೆಗಳ ಸದಸ್ಯರು ಮತದಾನ ಮಾಡಲು ಅರ್ಹರಾಗಿದ್ದಾರೆ.  ನಾಮನಿರ್ದೇಶಿತ ಸಂಸದರು ಮತ್ತು ಶಾಸಕರು ಮತ್ತು ವಿಧಾನ ಪರಿಷತ್ತಿನ ಸದಸ್ಯರು ಈ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿರುವುದಿಲ್ಲ.


Stay up to date on all the latest ದೇಶ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp