ಪಂಜಾಬ್ ಸಿಎಂ ಭಗವಂತ್ ಮಾನ್ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲು

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಬುಧವಾರ ತಡರಾತ್ರಿ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಗವಂತ್ ಮಾನ್
ಭಗವಂತ್ ಮಾನ್

ನವದೆಹಲಿ: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಬುಧವಾರ ತಡರಾತ್ರಿ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಎಂ ಭಗವಂತ್ ಮಾನ್ ಅವರು ಪ್ರಸ್ತುತ ರಾಷ್ಟ್ರ ರಾಜಧಾನಿಯ ಸರಿತಾ ವಿಹಾರ್ ಪ್ರದೇಶದ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಹೊಟ್ಟೆಯ ಸೋಂಕು ಇರುವುದು ಪತ್ತೆಯಾಗಿದೆ.

ಇದಕ್ಕೂ ಮುನ್ನ ರಾಜ್ಯದಲ್ಲಿ ಇಬ್ಬರು ದರೋಡೆಕೋರರ ವಿರುದ್ಧ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿದ ರಾಜ್ಯ ಪೊಲೀಸರು ಮತ್ತು ದರೋಡೆಕೋರರ ನಿಗ್ರಹ ಕಾರ್ಯಪಡೆಯನ್ನು ಪಂಜಾಬ್ ಸಿಎಂ ಅಭಿನಂದಿಸಿದ್ದಾರೆ. 

ಅಮೃತಸರದ ಭಕ್ನಾ ಗ್ರಾಮದಲ್ಲಿ ಪಂಜಾಬ್ ಪೊಲೀಸರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ದರೋಡೆಕೋರರಾದ ಜಗ್ರೂಪ್ ಸಿಂಗ್ ರೂಪ ಮತ್ತು ಮನ್‌ಪ್ರೀತ್ ಸಿಂಗ್, ಅಲಿಯಾಸ್ ಮಣ್ಣು ಕುಸಾ ಹತ್ಯೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com