ಆಧಾರ್- ವೋಟರ್ ಐಡಿ ಲಿಂಕ್ ಕಾನೂನು ವಿರೋಧಿಸಿ ಅರ್ಜಿ: ನಾಳೆ ಸುಪ್ರೀಂಕೋರ್ಟಲ್ಲಿ ವಿಚಾರಣೆ

ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ಲಿಂಕ್ ಮಾಡುವ ವಿವಾದಾತ್ಮಕ ಕಾನೂನನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದ್ದು, ಅದನ್ನು ರದ್ದುಗೊಳಿಸಬೇಕು ಎಂದು ಕಾಂಗ್ರೆಸ್‌ನ ರಣದೀಪ್ ಸಿಂಗ್ ಸುರ್ಜೇವಾಲಾ ಒತ್ತಾಯಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ಲಿಂಕ್ ಮಾಡುವ ವಿವಾದಾತ್ಮಕ ಕಾನೂನನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದ್ದು, ಅದನ್ನು ರದ್ದುಗೊಳಿಸಬೇಕು ಎಂದು ಕಾಂಗ್ರೆಸ್‌ನ ರಣದೀಪ್ ಸಿಂಗ್ ಸುರ್ಜೇವಾಲಾ ಒತ್ತಾಯಿಸಿದ್ದಾರೆ. ತಮ್ಮ ಅರ್ಜಿಯಲ್ಲಿ ಸುರ್ಜೆವಾಲಾ ಕಾನೂನನ್ನು ಅಸಂವಿಧಾನಿಕ ಮತ್ತು ಗೌಪ್ಯತೆ ಮತ್ತು ಸಮಾನತೆಯ ಹಕ್ಕುಗಳ ಉಲ್ಲಂಘನೆ ಎಂದು ಕರೆದಿದ್ದಾರೆ. ಸುಪ್ರೀಂ ಕೋರ್ಟ್ ನಾಳೆ ಪ್ರಕರಣದ ವಿಚಾರಣೆ ನಡೆಸಲಿದೆ.

ಚುನಾವಣಾ ಸುಧಾರಣಾ ಪ್ರಕ್ರಿಯೆಯ ಭಾಗವಾಗಿ ಚುನಾವಣಾ ಆಯೋಗವು ಚುನಾವಣಾ ಡೇಟಾದೊಂದಿಗೆ ಆಧಾರ್ ಅನ್ನು ಲಿಂಕ್ ಮಾಡುವ ಯೋಜನೆಯನ್ನು ಪ್ರಾರಂಭಿಸಿತು. ಮತದಾರರ ಪಟ್ಟಿಯಲ್ಲಿ ಬಹು ನಮೂದುಗಳನ್ನು ನಿಲ್ಲಿಸುವುದು ಮತ್ತು ಅವುಗಳನ್ನು ದೋಷ ಮುಕ್ತಗೊಳಿಸುವುದು ಇದರ ಉದ್ದೇಶವಾಗಿತ್ತು.

ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆಯು ಗುರುತಿಸುವಿಕೆಯನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಮತದಾರರಾಗಿ ನೋಂದಾಯಿಸಲು ಬಯಸುವ ಜನರ ಆಧಾರ್ ಸಂಖ್ಯೆಯನ್ನು ಪಡೆಯಲು ಚುನಾವಣಾ ನೋಂದಣಿ ಅಧಿಕಾರಿಗಳಿಗೆ ಅವಕಾಶ ನೀಡುತ್ತದೆ. ಅನೇಕ ರಾಜ್ಯಗಳಲ್ಲಿ ಮತದಾರರ ಪಟ್ಟಿಯಲ್ಲಿ ಜನರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದನ್ನು ನಿಲ್ಲಿಸುವ ಮೂಲಕ ನಕಲಿ ಮತದಾರರನ್ನು ತೆಗೆದುಹಾಕಲು ಉದ್ದೇಶಿಸಲಾಗಿದೆ ಎಂದು ಸರ್ಕಾರ ವಾದಿಸಿದೆ.

ಆಧಾರ್-ವೋಟರ್ ಐಡಿ ಲಿಂಕ್ ಅನ್ನು ಅನುಮತಿಸುವುದರಿಂದ ದೇಶದಲ್ಲಿ ಹೆಚ್ಚು ನಾನ್ ಸಿಟಿಜನ್ ಗಳ ಮತದಾನಕ್ಕೆ ಕಾರಣವಾಗಬಹುದು ಎಂದು ಪ್ರತಿಪಕ್ಷವು ವಾದಿಸಿದೆ. ಸಂಭಾವ್ಯ ನ್ಯೂನತೆಗಳ ಬಗ್ಗೆ ಯಾವುದೇ ನೈಜ ಚರ್ಚೆಯಿಲ್ಲದೆ ಚಳಿಗಾಲದ ಅಧಿವೇಶನದಲ್ಲಿ ಸಂಸತ್ತಿನಲ್ಲಿ ಮಸೂದೆಯನ್ನು ತುರ್ತಾಗಿ ತರಲಾಯಿತು ಎಂದು ಆರೋಪಿಸಿ ಕಾಂಗ್ರೆಸ್ ಮಸೂದೆಯನ್ನು ವಿರೋಧಿಸುತ್ತಿದೆ. 24 ಗಂಟೆಯೊಳಗೆ ಉಭಯ ಸದನಗಳಲ್ಲಿ ಕಾನೂನನ್ನು ಅಂಗೀಕರಿಸಲಾಯಿತು.

ಕಾಂಗ್ರೆಸ್ ಅಲ್ಲದೆ, ಎಂಕೆ ಸ್ಟಾಲಿನ್ ಅವರ ಡಿಎಂಕೆ, ಶರದ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ತೃಣಮೂಲ ಕಾಂಗ್ರೆಸ್, ಶಿವಸೇನೆ ಮತ್ತು ಬಿಎಸ್‌ಪಿ ಹೊಸ ಕಾನೂನುಗಳನ್ನು ವಿರೋಧಿಸಿವೆ. ಆಧಾರ್ ನಿವಾಸದ ಪುರಾವೆಗಾಗಿ ಉದ್ದೇಶಿಸಲಾಗಿತ್ತು, ಪೌರತ್ವ ಅಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com