social_icon

ಧನಬಾದ್‌ ಹಿಟ್ ಅಂಡ್ ರನ್, ನ್ಯಾಯಾಧೀಶರ ಹತ್ಯೆ ಪ್ರಕರಣ: ಇಬ್ಬರು ದೋಷಿ, ಆ.6ರಂದು ಶಿಕ್ಷೆ ಪ್ರಮಾಣ ಘೋಷಣೆ

ಕಳೆದ ವರ್ಷ ಜಾರ್ಖಂಡ್‌ನ ಧನಬಾದ್‌ನಲ್ಲಿ ನಡೆದಿದ್ದ ನ್ಯಾಯಾಧೀಶ ಉತ್ತಮ್ ಆನಂದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ವಿಶೇಷ ಸಿಬಿಐ ನ್ಯಾಯಾಲಯ ಗುರುವಾರ ತೀರ್ಪು ನೀಡಿದ್ದು, ಪ್ರಕರಣದ ಆರೋಪಿಗಳಾಗಿದ್ದ ಆಟೋರಿಕ್ಷಾ ಚಾಲಕ ಮತ್ತು ಇನ್ನೊಬ್ಬನನ್ನು ದೋಷಿ ಎಂದು ಮಹತ್ವದ ತೀರ್ಪು ನೀಡಿದೆ.

Published: 28th July 2022 10:47 PM  |   Last Updated: 29th July 2022 03:18 PM   |  A+A-


Dhanbad hit-and-run case

ಧನ್ ಬಾದ್ ಹಿಂಟ್ ಅಂಡ್ ರನ್ ಕೇಸ್

Posted By : srinivasamurthy
Source : The New Indian Express

ರಾಂಚಿ: ಕಳೆದ ವರ್ಷ ಜಾರ್ಖಂಡ್‌ನ ಧನಬಾದ್‌ನಲ್ಲಿ ನಡೆದಿದ್ದ ನ್ಯಾಯಾಧೀಶ ಉತ್ತಮ್ ಆನಂದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ವಿಶೇಷ ಸಿಬಿಐ ನ್ಯಾಯಾಲಯ ಗುರುವಾರ ತೀರ್ಪು ನೀಡಿದ್ದು, ಪ್ರಕರಣದ ಆರೋಪಿಗಳಾಗಿದ್ದ ಆಟೋರಿಕ್ಷಾ ಚಾಲಕ ಮತ್ತು ಇನ್ನೊಬ್ಬನನ್ನು ದೋಷಿ ಎಂದು ಮಹತ್ವದ ತೀರ್ಪು ನೀಡಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾಗಿದ್ದ ಆನಂದ್ ಹತ್ಯೆ ಪ್ರಕರಣದಲ್ಲಿ ಆಟೋರಿಕ್ಷಾ ಚಾಲಕ ಲಖನ್ ವರ್ಮಾ ಮತ್ತು ಆತನ ಸಹಚರ ರಾಹುಲ್ ವರ್ಮಾ ತಪ್ಪಿತಸ್ಥರೆಂದು ಸಿಬಿಐ ನ್ಯಾಯಾಲಯದ ನ್ಯಾಯಾಧೀಶ ರಜನಿಕಾಂತ್ ಪಾಠಕ್ ತೀರ್ಪು ನೀಡಿದ್ದು, ಇಬ್ಬರು ಅಪರಾಧಿಗಳ ಶಿಕ್ಷೆಯ ಪ್ರಮಾಣವನ್ನು ಆಗಸ್ಟ್ 6 ರಂದು ಪ್ರಕಟಿಸಲಾಗುತ್ತದೆ ಎಂದು ಕೋರ್ಟ್‌ ಹೇಳಿದೆ.

ಇದನ್ನೂ ಓದಿ: ಹಿಟ್ ಅಂಡ್ ರನ್ ನಲ್ಲಿ ನ್ಯಾಯಾಧೀಶರ ಸಾವು ಪ್ರಕರಣ ತನಿಖೆ ಸಿಬಿಐಗೆ!

ಏನಿದು ಪ್ರಕರಣ?
49 ವರ್ಷದ ನ್ಯಾಯಾಧೀಶ ಆನಂದ್ ಅವರನ್ನು ಕಳೆದ ವರ್ಷ ಜುಲೈ 28 ರಂದು ಜಾಗಿಂಗ್ ಮಾಡುತ್ತಿದ್ದಾಗ ಆಟೋ ರಿಕ್ಷಾದಿಂದ ಗುದ್ದಿ ಕೊಲ್ಲಲ್ಲಾಗಿತ್ತು. ನ್ಯಾಯಾಧೀಶ ಆನಂದ್ ಹತ್ಯೆ ಪ್ರಕರಣದ ವಿಚಾರಣೆ ಈ ವರ್ಷದ ಫೆಬ್ರವರಿಯಲ್ಲಿ ಪ್ರಾರಂಭವಾಗಿತ್ತು. ಧನ್‌ಬಾದ್‌ನ ರಣಧೀರ್ ವರ್ಮಾ ಚೌಕ್‌ನಲ್ಲಿ ನ್ಯಾಯಾಧೀಶರು ರಸ್ತೆಯ ಒಂದು ಬದಿಯಲ್ಲಿ ಜಾಗಿಂಗ್ ಮಾಡುತ್ತಿದ್ದಾಗ ಹಿಂದಿನಿಂದ ಬಂದ ಆಟೋರಿಕ್ಷಾ ಡಿಕ್ಕಿ ಹೊಡೆದು ಪರಾರಿಯಾಗಿರುವುದು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳಲ್ಲಿ ದಾಖಲಾಗಿತ್ತು. ಪ್ರಕರಣವನ್ನು ಜಾರ್ಖಂಡ್ ಸರ್ಕಾರವು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ)ಹಸ್ತಾಂತರಿಸಿತ್ತು. ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಗಿತ್ತು.

ಇದನ್ನೂ ಓದಿ: ಮೊಬೈಲ್ ಕಿತ್ತುಕೊಳ್ಳುವ ಯತ್ನದಲ್ಲಿ ಧನ್ಬಾದ್ ನ್ಯಾಯಾಧೀಶರಿಗೆ ಡಿಕ್ಕಿ ಸಾಧ್ಯತೆ: ಹೈಕೋರ್ಟ್‌ಗೆ ಸಿಬಿಐ ಮಾಹಿತಿ

ನ್ಯಾಯಾಧೀಶರೇ ಟಾರ್ಗೆಟ್ ಏಕೆ?
ನ್ಯಾಯಾಧೀಶ ಉತ್ತಮ್​ ಆನಂದ್​, ಇತ್ತೀಚೆಗೆ ಹೈಪ್ರೊಫೈಲ್ ಕೇಸ್​ವೊಂದರ ವಿಚಾರಣೆ ನಡೆಸಿದ್ದರು. ಅದರಲ್ಲಿ ಆರೋಪಿಗಳಿಗೆ ಜಾಮೀನು ನೀಡಲು ನಿರಾಕರಿಸಿದ್ದರು. ಇದೇ ಸಿಟ್ಟಿಗೆ ಹತ್ಯೆ ಮಾಡಿರಬಹುದೆಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದರು. ಇತ್ತೀಚೆಗಷ್ಟೇ ಮಾಜಿ ಶಾಸಕರ ಆಪ್ತರಾಗಿದ್ದ ರಂಜಯ್ ಕೊಲೆ ಪ್ರಕರಣದಂತಹ ಹಲವಾರು ಪ್ರಮುಖ ಪ್ರಕರಣಗಳ ವಿಚಾರಣೆ ನಡೆಸಿದ್ದರು. ಅಲ್ಲದೇ ಆರೋಪಿಗೆ ಜಾಮೀನು ಮಂಜೂರು ಮಾಡಲು ನಿರಾಕರಿಸಿದ್ದರು. ಹೀಗಿರುವಾಗಲೇ ಈ ಘಟನೆ ಸಂಭವಿಸಿದ್ದು, ಆಟೋ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿದೆ ಎಂದು ಮೃತ ನ್ಯಾಯಾಧೀಶರ ತಂದೆ ಸದಾನಂದ್ ಪ್ರಸಾದ್ ಆರೋಪಿಸಿದ್ದರು.
 


Stay up to date on all the latest ದೇಶ news
Poll
Railways Minister Ashwini Vaishnaw waves at a goods train as train services resume

ಒಡಿಶಾದಲ್ಲಿ ಭೀಕರ ರೈಲು ಅಪಘಾತದ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವರು ರಾಜೀನಾಮೆ ನೀಡಬೇಕೇ?


Result
ಹೌದು
ಬೇಡ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp