'ರಾಷ್ಟ್ರಪತ್ನಿ' ವಿವಾದ: ಅಧೀರ್ ರಂಜನ್‌ ಗೆ ಮಹಿಳಾ ಆಯೋಗ ನೋಟಿಸ್, ಕ್ರಮಕೈಗೊಳ್ಳುವಂತೆ ಸೋನಿಯಾಗೂ ಪತ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿಗೆ ಮಹಿಳಾ ಆಯೋಗ ನೋಟಿಸ್ ನೀಡಿದ್ದು ಇದರ ಜೊತೆಗೆ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಸೋನಿಯಾ ಗಾಂಧಿಗೂ ಪತ್ರ ಬರೆಯಲಾಗಿದೆ.
ಅಧೀರ್ ರಂಜನ್ ಚೌಧರಿ
ಅಧೀರ್ ರಂಜನ್ ಚೌಧರಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿಗೆ ಮಹಿಳಾ ಆಯೋಗ ನೋಟಿಸ್ ನೀಡಿದ್ದು ಇದರ ಜೊತೆಗೆ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಸೋನಿಯಾ ಗಾಂಧಿಗೂ ಪತ್ರ ಬರೆಯಲಾಗಿದೆ.

ಅಧೀರ್ ರಂಜನ್ ತಮ್ಮ ಹೇಳಿಕೆಗೆ ಖುದ್ದು ಹಾಜರಾಗಿ ಲಿಖಿತ ಉತ್ತರ ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ನೀಡಿದ್ದು ಆಗಸ್ಟ್ 3ರಂದು ಬೆಳಿಗ್ಗೆ 11:30ಕ್ಕೆ ವಿಚಾರಣೆ ನಿಗದಿಪಡಿಸಲಾಗಿದೆ.

ವಾಸ್ತವವಾಗಿ, ಅಧೀರ್ ರಂಜನ್ ಚೌಧರಿ ಅಧ್ಯಕ್ಷೆ ದ್ರೌಪದಿ ಮುರ್ಮು ಅವರನ್ನು 'ರಾಷ್ಟ್ರೀಯ ಪತ್ನಿ' ಎಂದು ಕರೆದಿದ್ದರು. ಈ ಬಗ್ಗೆ ಬಿಜೆಪಿ ಕಾಂಗ್ರೆಸ್ ಮತ್ತು ಅಧೀರ್ ರಂಜನ್ ಚೌಧರಿ ಅವರನ್ನು ತೀವ್ರವಾಗಿ ಟಾರ್ಗೆಟ್ ಮಾಡುತ್ತಿದೆ. ಅದೇ ಸಮಯದಲ್ಲಿ, ಈ ವಿವಾದದ ಕುರಿತು, ಬಿಜೆಪಿಯನ್ನು ಗುರಿಯಾಗಿಸಿಕೊಂಡು ಅಧೀರ್ ರಂಜನ್ ಚೌಧರಿ ಅವರು ಕ್ಷಮೆಯಾಚಿಸಲು ನಾನು ರಾಷ್ಟ್ರಪತಿಯಿಂದ ಸಮಯ ಕೇಳಿದ್ದೇನೆ ಎಂದು ಹೇಳಿದರು.

ಅಧೀರ್ ರಂಜನ್ ಚೌಧರಿ ಮಾತನಾಡಿ ಭಾರತದ ರಾಷ್ಟ್ರಪತಿಯೇ ನಮಗೂ ರಾಷ್ಟ್ರಪತಿ. ನನ್ನ ಬಾಯಿಂದ ಒಂದು ಮಾತು ಹೊರಬಿತ್ತು. ನಾಲಿಗೆ ಜಾರಿತು. ಆದರೆ ಬಿಜೆಪಿಯವರು ಸಾಸಿವೆಯನ್ನೇ ಬೆಟ್ಟದಷ್ಟು ಮಾಡುತ್ತಿದ್ದಾರೆ. ಮತ್ತೊಂದೆಡೆ, ಸೋನಿಯಾ ಗಾಂಧಿ ಅವರು ಅಧೀರ್ ರಂಜನ್ ಚೌಧರಿ ಈಗಾಗಲೇ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com