ನೀವು ಜೀವಂತವಾಗಿದ್ದರೆ ಅದರ ಕೀರ್ತಿ ಪ್ರಧಾನಿ ಮೋದಿಗೆ ಸಲ್ಲುತ್ತದೆ: ಸಚಿವ ರಾಮ್ ಸೂರತ್ ರೈ

ಕೋವಿಡ್ ವಿರುದ್ಧದ ಹೋರಾಟದಲ್ಲಿ ಲಸಿಕೆ ವಿತರಣೆಗಾಗಿ ಬಿಹಾರದ ಸಚಿವ ರಾಮ್ ಸೂರತ್ ರೈ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಾರೆ.
ಸಚಿವ ರಾಮ್ ಸೂರತ್ ರೈ
ಸಚಿವ ರಾಮ್ ಸೂರತ್ ರೈ

ಮುಜಫರ್‌ಪುರ: ಕೋವಿಡ್ ವಿರುದ್ಧದ ಹೋರಾಟದಲ್ಲಿ ಲಸಿಕೆ ವಿತರಣೆಗಾಗಿ ಬಿಹಾರದ ಸಚಿವ ರಾಮ್ ಸೂರತ್ ರೈ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತವು ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಅತಿದೊಡ್ಡ ಲಸಿಕೆ ಅಭಿಯಾನವನ್ನು ನಡೆಸಿತು ಮತ್ತು ಭಾರತೀಯರ ಜೀವಗಳನ್ನು ಉಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.

“ನೀವು ಜೀವಂತವಾಗಿದ್ದರೆ ಅದರ  ಕ್ರೆಡಿಟ್ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ. ಅವರು ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಲಸಿಕೆಯನ್ನು ಅಭಿವೃದ್ಧಿಪಡಿಸಿದರು ಮತ್ತು ದೇಶದ ಜನರಿಗೆ ಅದನ್ನು ಉಚಿತವಾಗಿ ನೀಡಿದರು” ಎಂದು ಮುಜಾಫರ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಮ್ ಸೂರತ್ ರೈ ಹೇಳಿದರು.

ಸಾಂಕ್ರಾಮಿಕ ರೋಗದ ಆರ್ಥಿಕ ಪ್ರಭಾವದ ವಿರುದ್ಧ ಹಲವಾರು ದೇಶಗಳು ಇನ್ನೂ ಹೋರಾಡುತ್ತಿವೆ, ಆದರೆ ಭಾರತದಲ್ಲಿ, ಆರ್ಥಿಕತೆಯನ್ನು ಬಲಪಡಿಸುವ ಕೆಲಸವನ್ನು ತ್ವರಿತ ಗತಿಯಲ್ಲಿ ಮಾಡಲಾಗುತ್ತಿದೆ ಎಂದು ಹೇಳಿದರು.

ದೇಶದಲ್ಲಿ ವ್ಯಾಕ್ಸಿನೇಷನ್ ಡ್ರೈವ್ ಪ್ರಾರಂಭವಾದ 18 ತಿಂಗಳ ನಂತರ ಈ ವರ್ಷ ಜುಲೈ 17 ರಂದು ದೇಶವು 200 ಕೋಟಿ ವ್ಯಾಕ್ಸಿನೇಷನ್ ಡೋಸ್‌ಗಳನ್ನು ನಿರ್ವಹಿಸುವ ಮೈಲಿಗಲ್ಲನ್ನು ದಾಟಿದೆ.

ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ  ಕೇಂದ್ರವು ಜುಲೈ 15 ರಿಂದ ಸೆಪ್ಟೆಂಬರ್ 30 ರವರೆಗೆ 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಜನರಿಗೆ ಉಚಿತವಾಗಿ ಬೂಸ್ಟರ್  ಡೋಸ್  ಒದಗಿಸಲು ವಿಶೇಷ ಡ್ರೈವ್ ‘ಕೋವಿಡ್ ವ್ಯಾಕ್ಸಿನೇಷನ್ ಅಮೃತ್ ಮಹೋತ್ಸವ’ವನ್ನು ಘೋಷಿಸಿದೆ.

18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಕೋವಿಡ್ ಲಸಿಕೆಯ ಉಚಿತ ಬೂಸ್ಟರ್ ಡೋಸ್‌ಗಳನ್ನು ನೀಡುವ ಸರ್ಕಾರದ ನಿರ್ಧಾರವು ಭಾರತದ ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಮತ್ತು ಆರೋಗ್ಯಕರ ದೇಶವನ್ನು ಸೃಷ್ಟಿಸುತ್ತದೆ ಎಂದು ಈ ತಿಂಗಳ ಆರಂಭದಲ್ಲಿ ಪಿಎಂ ಮೋದಿ ಹೇಳಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com