
ಅಯೋಧ್ಯೆ
ಲಖನೌ: ರಾಮ ಮಂದಿರ ನಿರ್ಮಾಣವಾಗುವ ಅಯೋಧ್ಯೆಯಲ್ಲಿ ಮದ್ಯಪಾನ ನಿಷೇಧಿಸಲು ಉತ್ತರ ಪ್ರದೇಶ ಸಿಎಂ ಯೋಗಿ ಅದಿತ್ಯಾನಾಥ್ ಸರ್ಕಾರ ಆದೇಶ ನೀಡಿದೆ.
ಉತ್ತರ ಪ್ರದೇಶದ ಅಬಕಾರಿ ಖಾತೆ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ನಿತಿನ್ ಅಗರ್ವಾಲ್ ಅವರು ಅಯೋಧ್ಯೆಯ 'ಶ್ರೀರಾಮ ಮಂದಿರ' ಪ್ರದೇಶದಲ್ಲಿನ ಎಲ್ಲಾ ಮದ್ಯದಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ಮಂಗಳವಾರ ತಿಳಿಸಿದ್ದಾರೆ.
1968ರ ಅಬಕಾರಿ ಅಂಗಡಿಗಳ ನಿಯಮಗಳಿಗೆ ಮಾಡಲಾದ ತಿದ್ದುಪಡಿಗಳ ಸ್ಥಿತಿಗತಿ ಕುರಿತು ಮಾಹಿತಿ ಕೋರಿದ ಬಹುಜನ ಸಮಾಜ ಪಕ್ಷದ ಸದಸ್ಯ ಭೀಮರಾವ್ ಅಂಬೇಡ್ಕರ್ ಅವರ ಪ್ರಶ್ನೆಗೆ ಅಗರ್ವಾಲ್ ಪ್ರತಿಕ್ರಿಯಿಸಿದರು.
ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಗರ್ಭಗುಡಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಯೋಗಿ ಆದಿತ್ಯನಾಥ್
ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ (ಈಗ ನಿವೃತ್ತ) ನೇತೃತ್ವದ ಸುಪ್ರೀಂ ಕೋರ್ಟ್ನ ಐದು ನ್ಯಾಯಾಧೀಶರ ಸಂವಿಧಾನ ಪೀಠವು ನವೆಂಬರ್ 9, 2019 ರಂದು ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಇದ್ದ ಭೂಮಿ ರಾಮ ಲಲ್ಲಾಗೆ ಸೇರಿದ್ದು ಎಂದು ಸರ್ವಾನುಮತದಿಂದ ತೀರ್ಪು ನೀಡಿತ್ತು.