ಕಾಶ್ಮೀರಿಗಳ ಹತ್ಯೆಗೆ 'ದಿ ಕಾಶ್ಮೀರ್ ಫೈಲ್ಸ್' ಚಿತ್ರ ಕಾರಣ; ನಿರ್ಮಾಪಕರಿಗೂ, ಉಗ್ರರಿಗೂ ನಂಟು: ಬಿಹಾರ ಮಾಜಿ ಸಿಎಂ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂದೂ ಕಾಶ್ಮೀರಿಗಳ ಹತ್ಯೆಗೆ 'ದಿ ಕಾಶ್ಮೀರ್ ಫೈಲ್ಸ್' ಚಿತ್ರ ಕಾರಣ ಎಂದು ಬಿಹಾರ ಮಾಜಿ ಸಿಎಂ ಜೀತನ್ ರಾಮ್ ಮಾಂಜಿ ಹೇಳಿದ್ದಾರೆ.
Published: 03rd June 2022 05:02 PM | Last Updated: 03rd June 2022 06:31 PM | A+A A-

ಜಿತನ್ ರಾಮ್ ಮಾಂಝಿ
ಪಾಟ್ನಾ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂದೂ ಕಾಶ್ಮೀರಿಗಳ ಹತ್ಯೆಗೆ 'ದಿ ಕಾಶ್ಮೀರ್ ಫೈಲ್ಸ್' ಚಿತ್ರ ಕಾರಣ ಎಂದು ಬಿಹಾರ ಮಾಜಿ ಸಿಎಂ ಜೀತನ್ ರಾಮ್ ಮಾಂಜಿ ಹೇಳಿದ್ದಾರೆ.
'ದಿ ಕಾಶ್ಮೀರ್ ಫೈಲ್ಸ್' ಚಿತ್ರದ ಕಾರಣದಿಂದಾಗಿ ಕಾಶ್ಮೀರದಲ್ಲಿ ಉದ್ದೇಶಪೂರ್ವಕ ಹತ್ಯೆಗಳು ನಡೆಯುತ್ತಿದ್ದು, ನಾಗರಿಕರಲ್ಲಿ ಭಯ ಹುಟ್ಟಿಸಲು ಉಗ್ರಗಾಮಿಗಳೇ ಈ ಚಿತ್ರ ನಿರ್ಮಾಣ ಮಾಡಿರಬಹುದು ಎಂದು ನಾನು ಹಿಂದೆಯೂ ಹೇಳಿದ್ದೆ, ಈಗಲೂ ಹೇಳುತ್ತಿದ್ದೇನೆ’ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಜಿ ಹೇಳಿದ್ದಾರೆ.
ಇದನ್ನೂ ಓದಿ: ಕಾಶ್ಮೀರಕ್ಕೆ ಮರಳಿ ಬರುವುದಿಲ್ಲ: ಪ್ರತಿಭಟನಾ ನಿರತ ಸರ್ಕಾರಿ ಸಿಬ್ಬಂದಿ
‘ಚಿತ್ರಕ್ಕೆ ಬಿಹಾರದಲ್ಲಿಯೂ ತೆರಿಗೆ ವಿನಾಯಿತಿ ನೀಡಬೇಕು ಎಂದು ಬಿಜೆಪಿಯು ನಿತೀಶ್ ಕುಮಾರ್ ಸರ್ಕಾರವನ್ನು ಒತ್ತಾಯಿಸಿತ್ತು. ಹಲವು ಸಚಿವರು ಮತ್ತು ಶಾಸಕರು ಸರ್ಕಾರದ ದುಡ್ಡಿನಲ್ಲಿ ಸಿನಿಮಾ ವೀಕ್ಷಿಸಲು ಥಿಯೇಟರ್ಗೆ ಹೋಗಿದ್ದರು. ಕೇಂದ್ರ ಸರ್ಕಾರವು ಸಿನಿಮಾ ನಿರ್ಮಾಪಕರ ಉಗ್ರ ನಂಟಿನ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ದಿ ಕಾಶ್ಮೀರ್ ಫೈಲ್ಸ್’ ತಯಾರಿಕೆಯ ಉದ್ದೇಶವು 'ಕಾಶ್ಮೀರಿ ಬ್ರಾಹ್ಮಣ'ರಲ್ಲಿ (ಪಂಡಿತರು) ಭಯವನ್ನು ಉಂಟುಮಾಡುವುದಾಗಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ: ಕಾಶ್ಮೀರ: ಬದ್ಗಾಮ್ನಲ್ಲಿ ಉಗ್ರರ ದಾಳಿ; ಓರ್ವ ವಲಸೆ ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯ
ಹೀಗೆ ಮಾಡಿದರೆ ಅವರು ಮರಳಿ ಕಣಿವೆಗೆ ಹಿಂತಿರುಗುವುದಿಲ್ಲ. ಕಣಿವೆಯಲ್ಲಿ ವಾಸಿಸುವ ಹಿಂದೂಗಳು ಸಹ ಭೀತಿಯಲ್ಲೇ ಬದುಕಬೇಕಾಗುತ್ತದೆ. ಬಿಹಾರಿ ಕಾರ್ಮಿಕರ ಉದ್ದೇಶಿತ ಹತ್ಯೆಗಳೂ ಕೂಡ ಇದೇ ಸಂಚಿನ ಭಾಗವಾಗಿದೆ. ನನ್ನ ಮಾತುಗಳು ಈಗ ನಿಜವಾಗಿದೆ. ಕಾಶ್ಮೀರದಲ್ಲಿ ಶಾಂತಿ ನೆಲೆಸಬೇಕಿದ್ದರೆ, ಅದನ್ನು ಬಿಹಾರಿಗಳಿಗೆ ಹಸ್ತಾಂತರಿಸಬೇಕು. ಅಲ್ಲಿ ನಾವು ಶಾಂತಿಯನ್ನು ಪುನಃಸ್ಥಾಪಿಸುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರ: ಕುಲ್ಗಾಮ್ ನಲ್ಲಿ ಉಗ್ರರಿಂದ ರಾಜಸ್ಥಾನ ಮೂಲದ ಬ್ಯಾಂಕ್ ಮ್ಯಾನೇಜರ್ ಗುಂಡಿಕ್ಕಿ ಹತ್ಯೆ!
ಗುರುವಾರ ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಬಿಹಾರ ಮೂಲದ ಕಾರ್ಮಿಕನೊಬ್ಬನನ್ನು ಕೊಂದಿದ್ದರು. ಮೃತ ದಿಲ್ಖಾಸ್, ಇಟ್ಟಿಗೆಗೂಡಿನಲ್ಲಿ ದಿನಗೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಆತನ ಜೊತೆಗೆ ಮತ್ತೊಬ್ಬ ವಲಸೆ ಕಾರ್ಮಿಕನಿಗೂ ಗುಂಡೇಟು ಬಿದ್ದಿತ್ತು. ಅದಕ್ಕೂ ಮೊದಲು, ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ರಾಜಸ್ಥಾನ ಮೂಲದ ಬ್ಯಾಂಕ್ ಮ್ಯಾನೇಜರ್ ಒಬ್ಬರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.