ಪ್ರವಾದಿ ನಿಂದಿಸಿದವರಿಗೆ ಕ್ಷಮೆ ಇಲ್ಲ; ಕೇಸರಿ ಭಯೋತ್ಪಾದಕರು ತಮ್ಮ ಅಂತ್ಯಕ್ಕಾಗಿ ಕಾಯಬೇಕು: ಭಾರತದಲ್ಲಿ ಆತ್ಮಾಹುತಿ ದಾಳಿಯ ಬೆದರಿಯೊಡ್ಡಿದ ಅಲ್-ಖೈದಾ
ಮಾನವೀಯತೆಯ ಹೆಮ್ಮೆ ಪ್ರವಾದಿ ಮೊಹಮ್ಮದ್, ಅವರನ್ನು ನಿಂದಿಸಿದವರಿಗೆ ಕ್ಷಮೆಯಿಲ್ಲ. ಇನ್ನು ಕೇಸರಿ ಭಯೋತ್ಪಾದಕರು ತಮ್ಮ ಅಂತ್ಯಕ್ಕಾಗಿ ಮುಂಬೈ, ದೆಹಲಿ, ಉತ್ತರಪ್ರದೇಶದಲ್ಲಿ ಕಾಯಬೇಕೆಂದು ಹೇಳುವ ಮೂಲಕ ಉಗ್ರ ಸಂಘಟನೆಯಾಗಿರುವ ಅಲ್'ಖೈದಾ ಭಾರತದಲ್ಲಿ ಆತ್ಮಾಹುತಿ ದಾಳಿ ನಡೆಸುವ ಬೆದರಿಕೆಯೊಡ್ಡಿದೆ.
Published: 08th June 2022 09:12 AM | Last Updated: 08th June 2022 01:26 PM | A+A A-

ಸಂಗ್ರಹ ಚಿತ್ರ
ನವದೆಹಲಿ: ಮಾನವೀಯತೆಯ ಹೆಮ್ಮೆ ಪ್ರವಾದಿ ಮೊಹಮ್ಮದ್, ಅವರನ್ನು ನಿಂದಿಸಿದವರಿಗೆ ಕ್ಷಮೆಯಿಲ್ಲ. ಇನ್ನು ಕೇಸರಿ ಭಯೋತ್ಪಾದಕರು ತಮ್ಮ ಅಂತ್ಯಕ್ಕಾಗಿ ಮುಂಬೈ, ದೆಹಲಿ, ಉತ್ತರಪ್ರದೇಶದಲ್ಲಿ ಕಾಯಬೇಕೆಂದು ಹೇಳುವ ಮೂಲಕ ಉಗ್ರ ಸಂಘಟನೆಯಾಗಿರುವ ಅಲ್'ಖೈದಾ ಭಾರತದಲ್ಲಿ ಆತ್ಮಾಹುತಿ ದಾಳಿ ನಡೆಸುವ ಬೆದರಿಕೆಯೊಡ್ಡಿದೆ.
ಈ ಕುರಿತು ಜೂನ್.6 ರಂದು ಬೆದರಿಕೆ ಪತ್ರವೊಂದನ್ನು ಬಿಡುಗಡೆ ಮಾಡಿರುವ ಅಲ್ ಖೈದಾ, ಪ್ರವಾದಿಯ ಘನತೆಗಾಗಿ ಹೋರಾಡಲು ದೆಹಲಿ, ಮುಂಬೈ, ಗುಜರಾತ್ ಹಾಗೂ ಉತ್ತರಪ್ರದೇಶದಲ್ಲಿ ಆತ್ಮಾಹುತಿ ದಾಳಿ ನಡೆಸುವುದಾಗಿ ತಿಳಿಸಿದೆ. ಅಲ್ಲದೆ, ಹಿಂದೂ ಪರ ಹೋರಾಟಗಾರರನ್ನು ಕೇಸರಿ ಭಯೋತ್ಪಾದಕರು ಎಂದು ಹೇಳಿದೆ.
ಇದನ್ನೂ ಓದಿ: ನೂಪುರ್ ಶರ್ಮಾ, ಜಿಂದಾಲ್ ವಿರುದ್ಧ ಕ್ರಮ: ಬಿಜೆಪಿಯಲ್ಲಿ ಸಮಸ್ಯೆ? ದೆಹಲಿ ಘಟಕದಲ್ಲಿ ಅಸಮಾಧಾನ
"ಮಾನವೀಯತೆಯ ಹೆಮ್ಮೆಯ ಪ್ರವಾದಿ ಮುಹಮ್ಮದ್ ಅವರನ್ನು ನಿಂದಿಸುವವರಿಗೆ ಯಾವುದೇ ಕ್ಷಮಾದಾನ ಇರುವುದಿಲ್ಲ. ಯಾವುದೇ ಶಾಂತಿ ಮತ್ತು ಭದ್ರತೆ ಅವರನ್ನು ಉಳಿಸುವುದಿಲ್ಲ ಮತ್ತು ವಿಷಾದ ವ್ಯಕ್ತಪಡಿಸಿದರು, ಈ ವಿಚಾರ ಮುಕ್ತಾಯಗೊಳ್ಳುವುದಿಲ್ಲ. ಮನೆ ಅಥವಾ ಸೈನ್ಯದ ಕೋಟೆಯಲ್ಲಿಯೇ ಅಡಗಿದರೂ ಅವರನ್ನು ಸುಮ್ಮನೆ ಬಿಡುವುದಿಲ್ಲ. ನಮ್ಮ ಪ್ರೀತಿಯ ಪ್ರವಾದಿಯವರನ್ನು ಅವಮಾನಿಸಿದವರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳದಿದ್ದರೆ, ನಮ್ಮ ತಾಯಿಯಂದಿರು ನಮ್ಮನ್ನು ಕಳೆದುಕೊಳ್ಳಲಿ.
ಪ್ರವಾದಿಯವರನ್ನು ಅವಮಾನಿಸಿದವರ ಹತ್ಯೆ ಮಾಡುತ್ತೇವೆ. ಪ್ರವಾದಿಗಳ ಅವಮಾನಿಸಿದವರ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ನಮ್ಮ ಹಾಗೂ ನಮ್ಮ ಮಕ್ಕಳದ ದೇಹದ ಮೇಲೆ ಸ್ಫೋಟಗಳನ್ನು ಹಾಕುತ್ತೇವೆಂದು ತಿಳಿಸಿದೆ.
ಇದನ್ನೂ ಓದಿ: ಪ್ರವಾದಿ ಮೊಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ: ಮಹಾರಾಷ್ಟ್ರ ಪೊಲೀಸರಿಂದ ನೂಪುರ್ ಶರ್ಮಾಗೆ ಸಮನ್ಸ್ ಜಾರಿ
ಈ ನಡುವೆ ನೂಪುರ್ ಶರ್ಮಾ ಅವರಿಗೂ ಬೆದರಿಕೆಯೊಡ್ಡಿರುವ ಉಗ್ರ ಸಂಘಟನೆಯೊಂದು, ನೂಪುರ್ ಶರ್ಮಾ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದು, ಇಡೀ ವಿಶ್ವದ ಮುಂದ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ, ಪ್ರವಾದಿಗಳನ್ನು ಅವಹೇಳನ ಮಾಡಿದವರಿಗೆ ಏನು ಮಾಡುಲಾಗುತ್ತದೆಯೋ ಅದನ್ನೇ ನೂಪುರ್ ಅವರಿಗೆ ಮಾಡಲಾಗುತ್ತದೆ ಎಂದು ಹೇಳಿದೆ.
ಈ ಕುರಿತು ಟೆಲಿಗ್ರಾಮ್ ಆ್ಯಪ್ ನಲ್ಲಿ ಮುಜಾಹಿದೀನ್ ಫಜ್ವಾತುಲ್ ಹಿಂದ ಉಗ್ರ ಸಂಘಟನೆ ಹೇಳಿಕೆಯನ್ನು ಬಿಡುಗಡೆ ಮಾಡಿದೆ.
ಇದನ್ನೂ ಓದಿ: ಪ್ರವಾದಿ ಮೊಹಮ್ಮದ್ ಕುರಿತು ಹೇಳಿಕೆ: ಜೀವ ಬೆದರಿಕೆ ಹಿನ್ನೆಲೆ ನೂಪುರ್ ಶರ್ಮಾಗೆ ಭದ್ರತೆ ನೀಡಿದ ದೆಹಲಿ ಪೊಲೀಸರು
ಇದೇ ವೇಳೆ ಬಿಜೆಪಿ ನಾಯಕರು ನಿರಂತರವಾಗಿ ಮುಸ್ಲಿಂ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ. ಆರ್'ಎಸ್ಎಸ್, ರಾಮಸೇನೆ, ಬಜರಂಗದಳ, ಶಿವಸೇನೆಗಳು ಇಸ್ಲಾಂ ಹಾಗೂ ಮುಸ್ಲಿಮರ ವಿರುದ್ಧ ನಿರಂತರವಾಗಿ ದ್ವೇಷದ ಭಾಷಣ ಮಾಡುತ್ತಿದೆ ಎಂದು ಕಿಡಿಕಾರಿದೆ.
ಈ ಸಂಘಟನೆ ಕಾಶ್ಮೀರದಲ್ಲಿ ಸಕ್ರಿಯವಾಗಿದೆ. ಕಳೆದ ಜನವರಿ ತಿಂಗಳಿನಲ್ಲಿ ದೆಹಲಿಯ ಗಾಜಿಪುರ್ ಹೂವಿನ ಮಾರುಕಟ್ಟೆ ಸ್ಫೋಟ ಪ್ರಕರಣದಲ್ಲಿ ಇದರ ಪಾತ್ರ ಇದೆ ಎಂದು ಹೇಳಲಾಗಿತ್ತು.