ಪ್ರವಾದಿ ಕುರಿತ ಹೇಳಿಕೆ ವಿವಾದ: ಬಂಗಾಳದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಸೆಕ್ಷನ್ 144 ಮುಂದುವರಿಕೆ, ಇಂಟರ್ನೆಟ್ ಸ್ಥಗಿತ

ಪ್ರವಾದಿ ಕುರಿತ ಹೇಳಿಕೆ ವಿವಾದ ಸಂಬಂಧ ಬಂಗಾಳದಲ್ಲಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರ ಪ್ರಸ್ತುತ ನಿಯಂತ್ರಣದಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಮುಂದುವರಿಸಲಾಗಿದೆ.
ಹೌರಾ ಪ್ರತಿಭಟನೆ
ಹೌರಾ ಪ್ರತಿಭಟನೆ
Updated on

ಕೋಲ್ಕತ್ತಾ: ಪ್ರವಾದಿ ಕುರಿತ ಹೇಳಿಕೆ ವಿವಾದ ಸಂಬಂಧ ಬಂಗಾಳದಲ್ಲಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರ ಪ್ರಸ್ತುತ ನಿಯಂತ್ರಣದಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಮುಂದುವರಿಸಲಾಗಿದೆ.

ಅಮಾನತುಗೊಂಡ ಬಿಜೆಪಿ ವಕ್ತಾರರ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಶುಕ್ರವಾರ ಹಿಂಸಾತ್ಮಕ ಪ್ರತಿಭಟನೆಗಳಿಗೆ ಸಾಕ್ಷಿಯಾದ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಪರಿಸ್ಥಿತಿ ಶನಿವಾರ ಬೆಳಿಗ್ಗೆ ಶಾಂತಿಯುತವಾಗಿತ್ತು, ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಮೆರವಣಿಗೆಯಲ್ಲಿ ಸೇರುವುದು ಅಥವಾ ಯಾವುದೇ ಅಪಾಯಕಾರಿ ಆಯುಧ ಅಥವಾ ಸಾರ್ವಜನಿಕ ನೆಮ್ಮದಿಗೆ ಭಂಗ ಮತ್ತು ಶಾಂತಿ ಭಂಗವನ್ನು ಉಂಟುಮಾಡುವ ಯಾವುದೇ ಕೃತ್ಯವನ್ನು ಜೂನ್ 10ರಿಂದ15 ವರೆಗೆ ಉಲುಬೇರಿಯಾ, ಪಂಚಲಾ ಮತ್ತು ಜಗತ್ಬಲ್ಲವಪುರ ಪ್ರದೇಶಗಳಲ್ಲಿ ಮತ್ತು ಈ ಪ್ರದೇಶಗಳಲ್ಲಿನ ರೈಲು ನಿಲ್ದಾಣಗಳು ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಷೇಧಿಸಲಾಗಿದೆ.  

ಜಿಲ್ಲೆಯಾದ್ಯಂತ ಇಂಟರ್ನೆಟ್ ಸೇವೆಗಳನ್ನು ಜೂನ್ 13 ರವರೆಗೆ ಸ್ಥಗಿತಗೊಳಿಸಲಾಗಿದೆ. ಹೌರಾ ಜಿಲ್ಲೆಯಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ. ಶುಕ್ರವಾರ ರಾತ್ರಿಯಿಂದ ಯಾವುದೇ ಪ್ರತಿಭಟನೆ ಅಥವಾ ಹಿಂಸಾಚಾರದ ಘಟನೆ ವರದಿಯಾಗಿಲ್ಲ. ನಾವು ಸೂಕ್ಷ್ಮ ಪ್ರದೇಶಗಳಲ್ಲಿ ಭಾರಿ ಪೊಲೀಸ್ ತುಕಡಿಯನ್ನು ನಿಯೋಜಿಸಿದ್ದೇವೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಯಾವುದೇ ಹಿಂಸಾಚಾರ, ಪ್ರತಿಭಟನೆ ಅಥವಾ ರಸ್ತೆಗಳನ್ನು ನಿರ್ಬಂಧಿಸುವ ಅಥವಾ ಸಾಮಾನ್ಯ ಜೀವನಕ್ಕೆ ಅಡ್ಡಿಪಡಿಸುವ ಪ್ರಯತ್ನಗಳನ್ನು "ಅತ್ಯಂತ ಕಟ್ಟುನಿಟ್ಟಾಗಿ" ವ್ಯವಹರಿಸಲಾಗುವುದು. ಜಿಲ್ಲೆಯಲ್ಲಿ ಗಲಭೆ ಸೃಷ್ಟಿಸಿ ಶಾಂತಿ ನೆಲೆಸುವಂತೆ ಯಾರಿಗೂ ಅವಕಾಶ ನೀಡುವುದಿಲ್ಲ, ಪರಿಸ್ಥಿತಿಯ ಮೇಲೆ ತೀವ್ರ ನಿಗಾ ಇರಿಸಿದ್ದೇವೆ.  ರಾಷ್ಟ್ರೀಯ ಹೆದ್ದಾರಿ 16 ಮತ್ತು ರೈಲು ಸೇವೆಗಳು ಸಾಮಾನ್ಯವಾಗಿದ್ದು, ಮಾರುಕಟ್ಟೆಗಳು ಮತ್ತು ಇತರ ವ್ಯಾಪಾರ ಸಂಸ್ಥೆಗಳು ತೆರೆದಿರುತ್ತವೆ. ನಾವು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಮತ್ತು ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ಸಿದ್ಧರಿದ್ದೇವೆ ಎಂದು ಐಪಿಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರವಾದಿ ಮೊಹಮ್ಮದ್ ಕುರಿತು ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಮತ್ತು ಉಚ್ಛಾಟಿತ ನಾಯಕ ನವೀನ್ ಜಿಂದಾಲ್ ಅವರ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಶುಕ್ರವಾರ ಹೌರಾ ಜಿಲ್ಲೆಯ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದವು. ಹೌರಾ ಜಿಲ್ಲೆಯಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ಮತ್ತು ಪೊಲೀಸರೊಂದಿಗೆ ಘರ್ಷಣೆಯ ಸಂದರ್ಭದಲ್ಲಿ ಪ್ರತಿಭಟನಾಕಾರರು ಕಲ್ಲು ತೂರಾಟ, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದರು ಮತ್ತು ಸಾರ್ವಜನಿಕ ಆಸ್ತಿಯನ್ನು ಹಾನಿಗೊಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com