'ಸುಳ್ಳು ಪಾಪಕ್ಕೆ ಸಮ': ಇಡಿ ವಿಚಾರಣೆಗೆ ಹಾಜರಾಗುವ ಮುನ್ನ ರಾಹುಲ್ ಗಾಂಧಿ ಟ್ವೀಟ್

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ವಿಚಾರಣೆ ಇಂದು ಮಂಗಳವಾರ ಕೂಡ ಜಾರಿ ನಿರ್ದೇಶನಾಲಯದಿಂದ ಮುಂದುವರಿಯಲಿದೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ವಿಚಾರಣೆ ಇಂದು ಮಂಗಳವಾರ ಕೂಡ ಜಾರಿ ನಿರ್ದೇಶನಾಲಯದಿಂದ ಮುಂದುವರಿಯಲಿದೆ.

ಇನ್ನು ಕೆಲವೇ ಹೊತ್ತಿನಲ್ಲಿ ಅವರು ದೆಹಲಿಯ ಇಡಿ ಕಚೇರಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದು ಅದಕ್ಕೂ ಮುನ್ನ ದೆಹಲಿಯ ತುಘಲಕ್ ಲೇನ್ ರಸ್ತೆಯಲ್ಲಿರುವ ರಾಹುಲ್ ಗಾಂಧಿ ನಿವಾಸಕ್ಕೆ ಸೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಆಗಮಿಸಿ ಸೋದರನ ಜೊತೆ ಚರ್ಚೆ ನಡೆಸಿದ್ದಾರೆ.

ಇಂದು ಬೆಳಗ್ಗೆ ಕಬೀರ್ ದಾಸ್ ಜಯಂತಿ ಪ್ರಯುಕ್ತ  ಅವರ ದ್ವಿಪದಿ ಉಲ್ಲೇಖಿಸಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಸುಳ್ಳು ಪಾಪಕ್ಕೆ ಸಮ, ಸತ್ಯ ತಪಸ್ಸಿಗೆ ಸಮ, ಹೃದಯಕ್ಕೆ ಸರಿಯಾದ ಸತ್ಯ ಹೇಳಿದರೆ ಮನಸ್ಸು, ಹೃದಯ ನಿಮ್ಮದಾಗುತ್ತದೆ. ಸಮಾಜಕ್ಕೆ ಸಮಾನತೆ, ಸೇವೆ, ಪರಸ್ಪರ ಸೌಹಾರ್ದತೆ ಮತ್ತು ಪ್ರೀತಿಯ ಪಾಠವನ್ನು ಕಲಿಸಿದ ಸಂತ ಕಬೀರ್ ದಾಸ್ ಜೀ ಅವರ ಜನ್ಮದಿನದಂದು ಅವರಿಗೆ ನಮನಗಳು ಎಂದು ಬರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com