social_icon

ರಾಷ್ಟ್ರಪತಿ ಚುನಾವಣೆ: ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಇಂದು ಅಪರಾಹ್ನ ಸಭೆ; ಹೆಚ್ ಡಿಡಿ, ಹೆಚ್ ಡಿಕೆ ಭಾಗಿ

ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣಾ (Presidential poll) ಕಣ ರಂಗೇರುತ್ತಿದೆ. ರಾಮನಾಥ್ ಕೋವಿಂದ್ (Ramanath Kovind) ಅವರ ಅಧಿಕಾರವಧಿ ಜುಲೈ 24ಕ್ಕೆ ಮುಗಿಯುತ್ತಿದ್ದು ಅವರ ಉತ್ತರಾಧಿಕಾರಿ ಯಾರಾಗುತ್ತಾರೆ ಎಂಬ ಕುತೂಹಲ ಮನೆಮಾಡಿದೆ. 

Published: 15th June 2022 09:47 AM  |   Last Updated: 15th June 2022 02:35 PM   |  A+A-


Rashtrapati Bhavan and Mamata Banerjee

ರಾಷ್ಟ್ರಪತಿ ಭವನ, ಒಳಚಿತ್ರದಲ್ಲಿ ಮಮತಾ ಬ್ಯಾನರ್ಜಿ

Posted By : sumana
Source : The New Indian Express

ನವದೆಹಲಿ: ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣಾ (Presidential poll) ಕಣ ರಂಗೇರುತ್ತಿದೆ. ರಾಮನಾಥ್ ಕೋವಿಂದ್ (Ramanath Kovind) ಅವರ ಅಧಿಕಾರವಧಿ ಜುಲೈ 24ಕ್ಕೆ ಮುಗಿಯುತ್ತಿದ್ದು ಅವರ ಉತ್ತರಾಧಿಕಾರಿ ಯಾರಾಗುತ್ತಾರೆ ಎಂಬ ಕುತೂಹಲ ಮನೆಮಾಡಿದೆ. 

ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳಿಂದ ಯಾವ ಅಭ್ಯರ್ಥಿಯನ್ನು ರಾಷ್ಟ್ರಪತಿ ಕಣಕ್ಕೆ ನಿಲ್ಲಿಸುತ್ತಾರೆ, ಪ್ರಾದೇಶಿಕ ಪಕ್ಷಗಳೆಲ್ಲ ಒಂದಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆಯೇ ಎಂಬ ಚರ್ಚೆ ದಟ್ಟವಾಗಿದೆ. ಇಂದು ಅಪರಾಹ್ನ 3 ಗಂಟೆಗೆ ದೆಹಲಿಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದಲ್ಲಿ ಪ್ರಾದೇಶಿಕ ಪಕ್ಷಗಳ ಮುಖ್ಯಸ್ಥರ ಸಭೆ ನಡೆಯಲಿದ್ದು 22 ವಿರೋಧ ಪಕ್ಷಗಳನ್ನು ಅವರು ಸಭೆಗೆ ಕರೆದಿದ್ದಾರೆ.ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ನಲ್ಲಿ ಸಭೆ ನಡೆಯಲಿದ್ದು, ಎಲ್ಲರ ಚಿತ್ತ ದೆಹಲಿಯತ್ತ ಮನೆಮಾಡಿದೆ.

ಸಭೆಯಲ್ಲಿ ಭಾಗವಹಿಸಲು ಕರ್ನಾಟಕದಿಂದ ಪ್ರಾದೇಶಿಕ ಪಕ್ಷ ಜೆಡಿಎಸ್ ನ ನಾಯಕರಾದ ಹೆಚ್ ಡಿ ದೇವೇಗೌಡ ಮತ್ತು ಹೆಚ್ ಡಿ ಕುಮಾರಸ್ವಾಮಿ ಈಗಾಗಲೇ ದೆಹಲಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ತೆರಳಿದ್ದಾರೆ.

ಸಹಮತದ ವಿರೋಧ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮನವೊಲಿಸಲು ಮಮತಾ ಬ್ಯಾನರ್ಜಿಯವರು ಈಗಾಗಲೇ ಎನ್ ಸಿಪಿ ನಾಯಕ ಶರದ್ ಪವಾರ್(Sharad Pawar) ಅವರನ್ನು ನಿನ್ನೆ ಭೇಟಿ ಮಾಡಿದ್ದರು. ಬಲಿಷ್ಠ ಮರಾಠ ರಾಜಕೀಯ ಮುಖಂಡನಾಗಿರುವ ಶರದ್ ಪವಾರ್ ಅವರಿಗೆ ಹಲವು ರಾಜಕೀಯ ಪಕ್ಷಗಳ ನಾಯಕರ ಜೊತೆ ನಿಕಟ ಸಂಪರ್ಕವಿದೆ. ಆದರೆ ಅವರು ಮಮತಾ ಬ್ಯಾನರ್ಜಿಯವರ ಮನವಿಯನ್ನು ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಶರದ್ ಪವಾರ್ ಭೇಟಿ ಮಾಡಿದ ಮಮತಾ; ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಲು ಎನ್ ಸಿಪಿ ಮುಖ್ಯಸ್ಥ ನಕಾರ

ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ಕಾಂಗ್ರೆಸ್, ಎಡಪಕ್ಷಗಳು ಕೂಡ ಮಮತಾ ಸಭೆಗೆ ಗೈರಾಗಲಿದ್ದಾರೆ. ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಮತ್ತು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಅವರು ಉನ್ನತ ನಾಯಕತ್ವ ಸಭೆಗೆ ಹಾಜರಾಗುವುದಿಲ್ಲ ಎಂದು ಹೇಳಿದ್ದಾರೆ. ಸಭೆಯಲ್ಲಿ ಸಿಪಿಐ(ಎಂ) ಪಕ್ಷವನ್ನು ನಾಯಕ ಇ ಕರೀಂ ಪ್ರತಿನಿಧಿಸಲಿದ್ದಾರೆ.

ತಮ್ಮ ಪಕ್ಷದ ಸಂಸದರನ್ನು ಸಭೆಗೆ ಕರೆಯುವ ಮೊದಲು, ಯೆಚೂರಿ ಅವರು ಬ್ಯಾನರ್ಜಿಗೆ ಪತ್ರ ಬರೆದು ಸಭೆಯನ್ನು ಆಯೋಜಿಸುವ ನಿರ್ಧಾರವನ್ನು ಇದು ತಮ್ಮ ಏಕಪಕ್ಷೀಯ ನಿರ್ಧಾರ ಎಂದು ಕರೆದಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಸಭೆಗೆ ಡಿಎಂಕೆಯ ಟಿಆರ್ ಬಾಲು, ಶಿವಸೇನೆಯ ಸುಭಾಷ್ ದೇಸಾಯಿ, ಆರ್‌ಎಲ್‌ಡಿಯ ಜಯಂತ್ ಚೌಧರಿ ಮತ್ತು ಮೆಹಬೂಬಾ ಮುಫ್ತಿ ಅವರು ಭಾಗವಹಿಸಲಿದ್ದಾರೆ. ಜಾರ್ಖಂಡ್ ಮುಕ್ತಿ ಮೋರ್ಚಾ ಮುಖ್ಯಸ್ಥ ಮತ್ತು ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾಗವಹಿಸಲಿದ್ದಾರೆ.

ಕಳೆದ ವರ್ಷದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬೃಹತ್ ವಿಜಯ ಸಾಧಿಸಿದ ನಂತರ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸಿ ಮುನ್ನಲೆಗೆ ಬರಲು ಮಮತಾ ಬ್ಯಾನರ್ಜಿ ತೀವ್ರ ಉತ್ಸುಕವಾಗಿದ್ದಾರೆ. ಕೇಂದ್ರದಲ್ಲಿ ಬಿಜೆಪಿಗೆ ಪರ್ಯಾಯವಾಗಿ ಪ್ರಬಲ ವಿರೋಧ ಪಕ್ಷ ತಯಾರು ಮಾಡಬೇಕೆಂಬುದು ಅವರ ಉದ್ದೇಶವಾಗಿದ್ದು ಇದಕ್ಕೆ ಪ್ರಾದೇಶಿಕ ಪಕ್ಷಗಳು ಒಗ್ಗೂಡುವಂತೆ ಮನವಿ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಗೆ ಸಹ ಆಹ್ವಾನ ನೀಡಿದ್ದು ಈ ಹಿಂದೆ ಸುದ್ದಿಯಾಗಿತ್ತು. 


Stay up to date on all the latest ದೇಶ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp