social_icon

ಉದ್ಧವ್ ಠಾಕ್ರೆ ಮೇಲೆ ಯಾವುದೇ ದೂರುಗಳಿಲ್ಲ; ಎನ್‌ಸಿಪಿ, ಕಾಂಗ್ರೆಸ್ ಕಾರ್ಯವೈಖರಿಯಿಂದ ಅಸಮಾಧಾನ: ಶಿವಸೇನೆ ಬಂಡಾಯ ಶಾಸಕರು

ಶಿವಸೇನೆ ನಾಯಕ ಏಕನಾಥ್ ಶಿಂಧೆ ನೇತೃತ್ವದ ಭಿನ್ನಮತೀಯರ ಪೈಕಿ ಒಬ್ಬರಾಗಿರುವ ಮಹಾರಾಷ್ಟ್ರದ ಶಿವಸೇನೆ ಸಚಿವರೊಬ್ಬರು, ಶಿವಸೇನಾ ನಾಯಕತ್ವದ ವಿರುದ್ಧ ನಮಗೆ ಯಾವುದೇ ದೂರುಗಳಿಲ್ಲ, ಆದರೆ ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಕಾರ್ಯವೈಖರಿಯಿಂದ ಅಸಮಾಧಾನವಾಗಿದೆ ಎಂದು ಅವರು ಬುಧವಾರ ಹೇಳಿದ್ದಾರೆ.

Published: 22nd June 2022 12:20 PM  |   Last Updated: 22nd June 2022 01:23 PM   |  A+A-


Rebel MLA

ಬಂಡಾಯ ಶಾಸಕರು

Posted By : manjula
Source : The New Indian Express

ಮುಂಬೈ: ಶಿವಸೇನೆ ನಾಯಕ ಏಕನಾಥ್ ಶಿಂಧೆ ನೇತೃತ್ವದ ಭಿನ್ನಮತೀಯರ ಪೈಕಿ ಒಬ್ಬರಾಗಿರುವ ಮಹಾರಾಷ್ಟ್ರದ ಶಿವಸೇನೆ ಸಚಿವರೊಬ್ಬರು, ಶಿವಸೇನಾ ನಾಯಕತ್ವದ ವಿರುದ್ಧ ನಮಗೆ ಯಾವುದೇ ದೂರುಗಳಿಲ್ಲ, ಆದರೆ ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಕಾರ್ಯವೈಖರಿಯಿಂದ ಅಸಮಾಧಾನವಾಗಿದೆ ಎಂದು ಅವರು ಬುಧವಾರ ಹೇಳಿದ್ದಾರೆ.

ಬಂಡಾಯ ಶಾಸಕರ ನಡುವೆ ಇರುವ ಮಹಾರಾಷ್ಟ್ರ ಸಚಿವ ಸಂದೀಪನ್ ಭೂಮಾರೆ ಅವರು ದೂರವಾಣಿ ಮೂಲಕ ಟಿವಿ ಚಾನೆಲ್‌ನೊಂದಿಗೆ ಮಾತನಾಡಿದ್ದು, ಶಿವಸೇನೆ ನಾಯಕತ್ವದ ವಿರುದ್ಧ ನಮಗೆ ಯಾವುದೇ ದೂರುಗಳಿಲ್ಲ. ಎನ್‌ಸಿಪಿ ಮತ್ತು ಕಾಂಗ್ರೆಸ್ ಸಚಿವರೊಂದಿಗೆ ಕೆಲಸ ಮಾಡುವುದು ಕಷ್ಟವಾಗುತ್ತಿದೆ ಎಂದು ಈ ಕುರಿತು ನಾವು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೂ ದೂರು ನೀಡಿದ್ದೆವು ಎಂದು ಹೇಳಿದ್ದಾರೆ.

ಎನ್'ಸಿಪಿ ಹಾಗೂ ಕಾಂಗ್ರೆಸ್ ಸಚಿವರಿಂದ ನಮ್ಮ ಪ್ರಸ್ತಾವನೆಗಳು ಹಾಗೂ ಕೆಲಸ ಕಾರ್ಯಗಳಿಗೆ ಅನುಮೋದನೆ ಪಡೆದುಕೊಳ್ಳುವುದು ಬಹಳ ಕಷ್ಟಕರವಾಗುತ್ತಿದೆ. ನನಗೆ ಸಚಿವ ಸ್ಥಾನ ನೀಡಿದ್ದಾರೆ. ಅದಕ್ಕೆ ನನಗೆ ತೃಪ್ತಿಯಿದೆ. ಜೀವನದಲ್ಲಿ ಇದಕ್ಕಿಂತಲೂ ಇನ್ನೇನು ಬೇಕು. ಆದರೆ, ಜನಪ್ರತಿನಿಧಿಯಾಗಿ ನನ್ನ ಜನರ ಕುಂದುಕೊರತೆಗಳನ್ನು ಪರಿಹರಿಸಬೇಕಾಗಿದೆ. ಈ ಎರಡು ಮೈತ್ರಿ ಪಾಲುದಾರರಿಂದ ನಾನು ಅದನ್ನು ಸರಿಯಾಗಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ವಿಧಾನಸಭೆ ವಿಸರ್ಜನೆಯತ್ತ ಸಾಗುತ್ತಿದೆ: ಸರ್ಕಾರ ಪತನದ ಸುಳಿವು ನೀಡಿದ ಸಂಜಯ್ ರಾವತ್

ಇದೇ ವೇಳೆ ಬಂಡಾಯ ಶಾಸಕರದಲ್ಲಿ ಇರುವ ಮತ್ತೊಬ್ಬ ನಾಯಕ ಸಂಜಯ್ ಶಿರ್ಸಾತ್ ಅವರು ಮಾತನಾಡಿ, ಪಕ್ಷದ 35 ಶಾಸಕರು ಗುವಾಹಟಿಯಲ್ಲಿದ್ದಾರೆ. ಮತ್ತಷ್ಟು ಶಾಸಕರು ಇಂದು ಸಂಜೆ ನಮ್ಮ ಜೊತೆಗೂಡಲಿದ್ದಾರೆ. ಇದಷ್ಟೇ ಅಲ್ಲದೆ, ಮೂರು ಸ್ವತಂತ್ರ ಶಾಸಕರೂ ನಮಗೆ ಬೆಂಬಲ ನೀಡಿದ್ದಾರೆ. ಎನ್'ಸಿಪಿ ಹಾಗೂ ಕಾಂಗ್ರೆಸ್ ಮಂತ್ರಿಗಳ ಹಗೆತನದ ವರ್ತನೆಯೇ ಶಾಸಕರು ಬಂಡಾಯವೇಳಲು ಕಾರಣವಾಗಿದೆ ಎಂದು ಹೇಳಿದ್ದಾರೆ.


Stay up to date on all the latest ದೇಶ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp