'ಮಹಾ' ಸಂಘರ್ಷ; ರೆಬೆಲ್ ಶಾಸಕರ ಅನರ್ಹತೆಗೆ ಮನವಿ ಸಲ್ಲಿಕೆಗೆ ಠಾಕ್ರೆ ಬಣದ ಸಿದ್ಧತೆ

ಮಹಾರಾಷ್ಟ್ರದಲ್ಲಿ ಭುಗಿಲೆದ್ದಿರುವ ರಾಜಕೀಯ ಸಂಘರ್ಷ ತಾರಕಕ್ಕೇರಿದ್ದು, ಇದೀಗೆ ರೆಬೆಲ್ ಶಾಸಕರನ್ನು ಹಣಿಯಲು ಸಿಎಂ ಉದ್ಧವ್ ಠಾಕ್ರೆ ಬಣ ಶಾಸಕತ್ವ ಅನರ್ಹತೆ ಬಾಣ ಹೂಡಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ.
ಶಿವಸೇನೆ ಬಂಡಾಯ ಶಾಸಕರು
ಶಿವಸೇನೆ ಬಂಡಾಯ ಶಾಸಕರು

ಮುಂಬೈ: ಮಹಾರಾಷ್ಟ್ರದಲ್ಲಿ ಭುಗಿಲೆದ್ದಿರುವ ರಾಜಕೀಯ ಸಂಘರ್ಷ ತಾರಕಕ್ಕೇರಿದ್ದು, ಇದೀಗೆ ರೆಬೆಲ್ ಶಾಸಕರನ್ನು ಹಣಿಯಲು ಸಿಎಂ ಉದ್ಧವ್ ಠಾಕ್ರೆ ಬಣ ಶಾಸಕತ್ವ ಅನರ್ಹತೆ ಬಾಣ ಹೂಡಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಪ್ರಸ್ತುತ ರೆಬೆಲ್ ಶಾಸಕರ ನಾಯಕತ್ವ ವಹಿಸಿರುವ ಏಕನಾಥ್ ಶಿಂಡೆ ಅವರ ಬಣದಲ್ಲಿರುವ 15 ಶಾಸಕರನ್ನು ಅನರ್ಹಗೊಳಿಸುವಂತೆ ಮನವಿ ಮಾಡಲು ಉದ್ಧವ್ ಠಾಕ್ರೆ ಬಣ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ರೆಬೆಲ್ ಬಣದಲ್ಲಿ ಗುರುತಿಸಿಕೊಂಡಿರುವ ಸುಮಾರು 15 ಬಂಡಾಯ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಮಹಾರಾಷ್ಟ್ರ ವಿಧಾನಸಭೆ ಉಪಸಭಾಪತಿಗೆ ಶಿವಸೇನೆ ಮನವಿ ಸಲ್ಲಿಸಲಿದೆ ಎಂದು ಮೂಲಗಳು ತಿಳಿಸಿವೆ. 

ಇಂದೇ ಅನರ್ಹತೆ ಅರ್ಜಿ ಸಲ್ಲಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರದ ಕಾನೂನು ತಂಡದ ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಆಡಳಿತಾರೂಢ ಶಿವಸೇನೆ ಪಕ್ಷ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಇದಕ್ಕೆ ಇಂಬು ನೀಡುವಂತೆ ಇತ್ತ ಶಿವಸೇನೆ ವಕ್ತಾರ ಸಂಜಯ್ ರಾವತ್ ಅವರು ಬಂಡಾಯ ಶಾಸಕರಿಗೆ 24 ಗಂಟೆಗಳ ಗಡುವು ನೀಡಿ ಮುಂಬೈಗೆ ವಾಪಸ್ ಆಗುವಂತೆ ಎಚ್ಚರಿಕೆ ನೀಡಿದ್ದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com