ಶಾಲೆಗೆ ತಡವಾಗಿ ಬಂದ ಶಿಕ್ಷಕಿಗೆ ಬೂಟಿನಿಂದ ಹೊಡೆದ ಪ್ರಾಂಶುಪಾಲ; ವಿಡಿಯೋ ವೈರಲ್

ಶಾಲೆಗೆ ತಡವಾಗಿ ಬಂದ ಶಿಕ್ಷಕಿಗೆ ಪ್ರಾಂಶುಪಾಲರೊಬ್ಬರು ಬೂಟಿನಿಂದ ಹೊಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.
ಶಿಕ್ಷಕಿಗೆ ಬೂಟಿನಿಂದ ಹೊಡೆದ ಪ್ರಾಂಶುಪಾಲ
ಶಿಕ್ಷಕಿಗೆ ಬೂಟಿನಿಂದ ಹೊಡೆದ ಪ್ರಾಂಶುಪಾಲ

ಲಖಿಂಪುರ ಖೇರಿ: ಶಾಲೆಗೆ ತಡವಾಗಿ ಬಂದ ಶಿಕ್ಷಕಿಗೆ ಪ್ರಾಂಶುಪಾಲರೊಬ್ಬರು ಬೂಟಿನಿಂದ ಹೊಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಮಹಂಗು ಖೇರಾ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿ ಶಾಲೆಗೆ 10 ನಿಮಿಷ ತಡವಾಗಿ ಬಂದಿದ್ದಕ್ಕೆ ಪ್ರಾಂಶುಪಾಲ ಶಿಕ್ಷಕಿಗೆ ಬೂಟಿನಿಂದ ಹೊಡೆದಿದ್ದಾರೆ. ಈ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. 

ಶಿಕ್ಷಕಿ ಶಾಲೆಗೆ ತಡವಾಗಿ ಬಂದಿದ್ದರಿಂದ ಕುಪಿತಗೊಂಡ ಪ್ರಾಂಶುಪಾಲ ಮೊದಲು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ವೇಳೆ ಶಿಕ್ಷಕಿ ಮತ್ತು ಪ್ರಾಂಶುಪಾಲನ ನಡುವೆ ವಾಗ್ವಾದ ನಡೆದಿದ್ದು ನೋಡನೋಡುತ್ತಲೇ ಪ್ರಾಂಶುಪಾಲ ಶೂಗಳಿಂದ ಅವರನ್ನು ಥಳಿಸಿದ್ದಾರೆ. 20 ಸೆಕೆಂಡುಗಳ ಈ ವಿಡಿಯೊವನ್ನು ಎಎನ್‌ಐ ಸುದ್ದಿಸಂಸ್ಥೆ ಹಂಚಿಕೊಂಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೊವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ.

ಈ ಘಟನೆ ಕುರಿತು ಪ್ರಾಂಶಪಾಲರ ಮೇಲೆ ಶಿಕ್ಷಕಿ ಸ್ಥಳೀಯ ಠಾಣೆಗೆ ದೂರು ನೀಡಿದ್ದು, ಸದ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಾಂಶುಪಾಲನನ್ನು ಸೇವೆಯಿಂದ ಅಮಾನತು ಮಾಡಿ ತನಿಖೆಗೆ ಆದೇಶಿಸಿದ್ದಾರೆ ಎನ್ನಲಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com