ಜಮ್ಮು ಮತ್ತು ಕಾಶ್ಮೀರ: ಪಾಕ್ ನುಸುಳುಕೋರನ ಹೊಡೆದುರುಳಿಸಿದ ಭಾರತೀಯ ಸೇನೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲಕ ಓರ್ವ ನುಸುಳುಕೋರರನ್ನು ಭಾರತೀಯ ಸೇನೆ ಸೋಮವಾರ ಮುಂಜಾನೆ ಹೊಡೆದುರುಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲಕ ಓರ್ವ ನುಸುಳುಕೋರರನ್ನು ಭಾರತೀಯ ಸೇನೆ ಸೋಮವಾರ ಮುಂಜಾನೆ ಹೊಡೆದುರುಳಿಸಿದೆ.

ಬೆಳಗಿನ ಜಾವ 4 ಗಂಟೆಗೆ ಆರ್‌ಎಸ್ ಪುರ ಸೆಕ್ಟರ್‌ನ ಅಂತರಾಷ್ಟ್ರೀಯ ಗಡಿಯುದ್ದಕ್ಕೂ ಬಾದರ್‌ಪುರ ಬಾರ್ಡರ್ ಔಟ್ ಪೋಸ್ಟ್ (ಬಿಒಪಿ) ಬಳಿ ನುಸುಳುಕೋರರ ಚಲನವಲನವನ್ನು ಪತ್ತೆಹಚ್ಚಿ ಸೇನಾಪಡೆ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಓರ್ವ ಪಾಕಿಸ್ತಾನ ಮೂಲದ ನುಸುಳುಕೋರ ಹತ್ಯೆಯಾಗಿದ್ದಾನೆಂದು ಅಧಿಕಾರಿಗಳು ತಿಳಿಸಿದ್ದಾರೆ. 

ಹತ್ಯೆಯಾದ ನುಸುಳುಕೋರನ ಮೃತದೇಹ ಈಗಲೂ ಗಡಿ ಬಳಿಯೇ ಇದ್ದು, ಸ್ಥಳಕ್ಕೆ ತೆರಳಿರುವ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com