ಮುಂಬೈ: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟು ದಿನಕಳೆಯುತ್ತಿದ್ದಂತೆಯೇ ಕುತೂಹಲ ಹೆಚ್ಚಾಗುವಂತೆ ಮಾಡಿದ್ದು, ಈ ನಡುವಲ್ಲೇ ಶಿವಸೇನೆ ನಾಯಕ ಏಕನಾಥ್ ಶಿಂದೆ ಅವರು, ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರೊಂದಿಗೆ ಎರಡು ಬಾರಿ ದೂರವಾಣಿಯಲ್ಲಿ ಮಾತನಾಡಿದ್ದಾರೆಂದು ಹೇಳಲಾಗುತ್ತಿದೆ. ಈ ಬೆಳವಣಿಗೆಯು ಸಾಕಷ್ಟು ಕುತೂಹಲವನ್ನುಂಟು ಮಾಡಿದೆ.
ಮಹಾರಾಷ್ಟ್ರದ ಇತ್ತೀಚಿನ ರಾಜಕೀಯ ಪರಿಸ್ಥಿತಿಯ ಬಗ್ಗೆ ಶಿಂದೆ ಅವರು, ಠಾಕ್ರೆ ಅವರೊಂದಿಗೆ ಮಾತನಾಡಿದ್ದು, ಇದೇ ವೇಳೆ, ಅವರ ಆರೋಗ್ಯದ ಬಗ್ಗೆಯೂ ವಿಚಾರಿಸಿದ್ದಾರೆ ಎಂದು ಎಂಎನ್ಎಸ್ ನಾಯಕರೊಬ್ಬರು ಎಎನ್ಐ ಸುದ್ದಿಸಂಸ್ಥೆಗೆ ಹೇಳಿಕೆ ನೀಡಿದ್ದಾರೆ.
ಈ ನಡುವೆ ಬಂಡಾಯವೆದ್ದಿರುವ ನಾಯಕರ ವಿರುದ್ಧ ಶಿವಸೇನೆ, ಎನ್ಸಿಪಿ, ಕಾಂಗ್ರೆಸ್ ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಮೂರು ಪಕ್ಷಗಳು ಬಂಡಾಯ ಶಾಸಕರನ್ನು ಅನರ್ಹತೆ ಮಾಡುವುದು ಮತ್ತು ಪಕ್ಷದಿಂದ ಅಮಾನತು ಮಾಡಲು ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.
Advertisement