social_icon

ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಉದ್ಧವ್: ಬಿಜೆಪಿ ಸಂಪರ್ಕದಲ್ಲಿದ್ದ ಮುಖ್ಯಮಂತ್ರಿ!

ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಸಿಎಂ ಉದ್ಧವ್ ಠಾಕ್ರೆ ಜೂ.22 ರಂದೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಮಾಹಿತಿ ಈಗ ಬಹಿರಂಗವಾಗಿದೆ. 

Published: 28th June 2022 12:53 PM  |   Last Updated: 28th June 2022 01:30 PM   |  A+A-


uddhav thackeray

ಉದ್ಧವ್ ಠಾಕ್ರೆ

Posted By : Srinivas Rao BV
Source : PTI

ಮುಂಬೈ: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಸಿಎಂ ಉದ್ಧವ್ ಠಾಕ್ರೆ ಜೂ.22 ರಂದೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಮಾಹಿತಿ ಈಗ ಬಹಿರಂಗವಾಗಿದೆ. 

ಅಷ್ಟೇ ಅಲ್ಲದೇ ರಾಜಕೀಯ ಬಿಕ್ಕಟ್ಟನ್ನು ಸರಿಪಡಿಸಲು ಬಿಜೆಪಿ ನಾಯಕರ ಸಂಪರ್ಕದಲ್ಲಿಯೂ ಉದ್ಧವ್ ಠಾಕ್ರೆ ಇದ್ದರು ಎಂಬ ವರದಿಯನ್ನು ಎಎನ್ಐ ಪ್ರಕಟಿಸಿದೆ. ಆದರೆ ಉದ್ಧವ್ ಠಾಕ್ರೆ ಮನವೊಲಿಕೆ ಮಾಡಿದ್ದ ಅಘಾಡಿ ಸರ್ಕಾರದ ಮಿತ್ರ ಪಕ್ಷಗಳು ರಾಜೀನಾಮೆ ನೀಡದಂತೆ ಸಲಹೆ ನೀಡಿದ್ದವು ಎಂದು ಮೂಲಗಳು ತಿಳಿಸಿವೆ. 

ಇದನ್ನೂ ಓದಿ: 'ಅವಿದ್ಯಾವಂತರು, ನಡೆದಾಡುವ ಶವಗಳು'; ರೆಬೆಲ್ ಶಾಸಕರ ವಿರುದ್ಧ ಶಿವಸೇನೆ ವಕ್ತಾರ ಸಂಜಯ್ ರಾವತ್ ವಾಗ್ದಾಳಿ

ಜೂ.22 ರಂದು ರಾಜೀನಾಮೆ ನೀಡಿ ಬಳಿಕ ಶಿವಸೇನೆ ಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ ಸ್ಮಾರಕಕ್ಕೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಅದ್ಯಾವುದೂ ಆಗಲಿಲ್ಲ. ಸಂಜೆ 5 ಗಂಟೆಗೆ ನಿಗದಿಯಾಗಿದ್ದ ಠಾಕ್ರೆ ಅವರ ಭಾಷಣ 5:30 ಗೆ ನಡೆಯುವುದಕ್ಕೂ ಯೋಜನೆಗಳಲ್ಲಿ ಉಂಟಾದ ದಿಢೀರ್ ಬದಲಾವಣೆಗಳೇ ಕಾರಣ ಎಂದು ತಿಳಿದುಬಂದಿದೆ.
 
ಜೂ.22 ರಂದು ಫೇಸ್ ಬುಕ್ ಮೂಲಕ ಮಾತನಾಡಿದ್ದ ಠಾಕ್ರೆ, ಬಂಡಾಯ ಶಾಸಕರು ಮುಂಬೈ ಗೆ ವಾಪಸ್ಸಾಗಿ ತಮ್ಮ ರಾಜೀನಾಮೆಗೆ ಬೇಡಿಕೆ ಇಡುವುದಾದರೆ ತಾವು ರಾಜೀನಾಮೆ ನೀಡುವುದಕ್ಕೂ ಸಿದ್ಧ ಎಂದು ಹೇಳಿದ್ದರು. 

ಇದನ್ನೂ ಓದಿ: 'ಮಹಾ' ಸರ್ಕಾರ ಬಿಕ್ಕಟ್ಟು: 9 ಬಂಡಾಯ ಸಚಿವರ ಖಾತೆಗಳನ್ನು ಇತರ ಶಾಸಕರಿಗೆ ಹಸ್ತಾಂತರಿಸಿದ ಸಿಎಂ ಉದ್ಧವ್ ಠಾಕ್ರೆ

ಆ ವೇಳೆ 2019 ರಲ್ಲಿ ಸರ್ಕಾರ ರಚನೆಯ ಸಂದರ್ಭದಲ್ಲಿನ ಘಟನೆಗಳನ್ನು ಸ್ಮರಿಸಿದ್ದ ಠಾಕ್ರೆ, ಶರದ್ ಪವಾರ್ ಸರ್ಕಾರವನ್ನು ಮುನ್ನಡೆಸುವಂತೆ ನನನ್ನು ಕೇಳಿದರು. ನನಗೆ ಯಾವುದೇ ಅನುಭವವೂ ಇರಲಿಲ್ಲ. ಆದರೂ ನನ್ನ ಮೇಲೆ ಸೋನಿಯಾ ಗಾಂಧಿ, ಶರದ್ ಪವಾರ್ ನಂಬಿಕೆ ಇಟ್ಟಿದ್ದರು. ಆದರ ನನ್ನವರೇ ನನ್ನ ಮೇಲೆ ನಂಬಿಕೆ ಇಡಲಿಲ್ಲ ಎಂದು ಠಾಕ್ರೆ ಬೇಸರ ವ್ಯಕ್ತಪಡಿಸಿದ್ದರು.


Stay up to date on all the latest ದೇಶ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp