ಪಶ್ಚಿಮ ಬಂಗಾಳ: ಟಿಎಂಸಿ ಮುಖಂಡನ ಹತ್ಯೆ ಬೆನ್ನಲ್ಲೇ ಸುಟ್ಟ ಕರಕಲಾದ ಸ್ಥಿತಿಯಲ್ಲಿ ಏಳು ಶವಗಳ ಪತ್ತೆ!
ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ರಾಮ್ಪುರಹತ್ನಲ್ಲಿ ಕೆಲವು ಸುಟ್ಟ ಮನೆಗಳಿಂದ ಏಳು ಮೃತದೇಹಗಳನ್ನು ಮಂಗಳವಾರ ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Published: 22nd March 2022 01:31 PM | Last Updated: 22nd March 2022 01:31 PM | A+A A-

ಮನೆಯಿಂದ ಮೃತದೇಹಗಳನ್ನು ಹೊರತಂದ ಪೊಲೀಸರು
ಬಿರ್ ಭೂಮ್: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ರಾಮ್ಪುರಹತ್ನಲ್ಲಿ ಕೆಲವು ಸುಟ್ಟ ಮನೆಗಳಿಂದ ಏಳು ಮೃತದೇಹಗಳನ್ನು ಮಂಗಳವಾರ ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೋಮವಾರದಂದು ಟಿಎಂಸಿ ಪಂಚಾಯತ್ ಮುಖಂಡನ ಹತ್ಯೆ ನಂತರ ಈ ಘಟನೆ ನಡೆದಿದೆ. ರಾಮ್ಪುರಹತ್ ಪಟ್ಟಣದ ಹೊರವಲಯದಲ್ಲಿರುವ ಬೊಗ್ಟುಯಿ ಗ್ರಾಮದ ಮನೆಗಳಿಂದ ಇದುವರೆಗೆ ಏಳು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಆದಾಗ್ಯೂ, 10 ಸುಟ್ಟ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಬರ್ಶಾಲ್ ಗ್ರಾಮದ ಟಿಎಂಸಿ ಪಂಚಾಯತ್ ಉಪಮುಖ್ಯಸ್ಥ ಭದು ಶೇಖ್ ಅವರ ಶವ ಸೋಮವಾರ ಈ ಪ್ರದೇಶದಲ್ಲಿ ಪತ್ತೆಯಾಗಿತ್ತು ತನಿಖೆಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.
West Bengal | Around 10-12 houses were set on fire last night. A total of 10 dead bodies have been recovered, 7 dead bodies were retrieved from a single house: Fire officials on death of several people after a mob allegedly set houses on fire and killed a TMC leader in Birbhum. pic.twitter.com/KOW2ldlCgy
— ANI (@ANI) March 22, 2022