social_icon

ಇಡಿ ದಾಳಿ ವೇಳೆ 19.31 ಕೋಟಿ ರೂ. ನಗದು ಪತ್ತೆ; ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಗೆ 'ಇಡಿ' ಡ್ರಿಲ್!!

ಜಾರಿ ನಿರ್ದೇಶನಾಲಯ(ಇಡಿ) ದಾಳಿ ವೇಳೆ ಬರೊಬ್ಬರಿ 19.31 ಕೋಟಿ ರೂ. ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ನ ಹಿರಿಯ ಐಎಎಸ್ ಅಧಿಕಾರಿ ಮತ್ತು ಜಾರ್ಖಂಡ್ ನ ಗಣಿ ಇಲಾಖೆ ಕಾರ್ಯದರ್ಶಿ ಪೂಜಾ ಸಿಂಘಾಲ್ ರನ್ನು ನಾಳೆಯಿಂದ ಅಧಿಕಾರಿಗಳು ವಿಚಾರಣೆಗೊಳಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

Published: 09th May 2022 03:27 PM  |   Last Updated: 09th May 2022 03:30 PM   |  A+A-


Pooja-Singhal01

ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್

ANI

ರಾಂಚಿ: ಜಾರಿ ನಿರ್ದೇಶನಾಲಯ(ಇಡಿ) ದಾಳಿ ವೇಳೆ ಬರೊಬ್ಬರಿ 19.31 ಕೋಟಿ ರೂ. ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ನ ಹಿರಿಯ ಐಎಎಸ್ ಅಧಿಕಾರಿ ಮತ್ತು ಜಾರ್ಖಂಡ್ ನ ಗಣಿ ಇಲಾಖೆ ಕಾರ್ಯದರ್ಶಿ ಪೂಜಾ ಸಿಂಘಾಲ್ ರನ್ನು ನಾಳೆಯಿಂದ ಅಧಿಕಾರಿಗಳು ವಿಚಾರಣೆಗೊಳಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ) ಜಾರ್ಖಂಡ್ ನ ಹಿರಿಯ ಐಎಎಸ್ ಅಧಿಕಾರಿ ಮತ್ತು ಜಾರ್ಖಂಡ್ ನ ಗಣಿ ಇಲಾಖೆ ಕಾರ್ಯದರ್ಶಿ ಪೂಜಾ ಸಿಂಘಾಲ್, ಅವರ ಪತಿ ಮತ್ತು ಇತರ ನಿಕಟ ಸಂಬಂಧಿಗಳ ಮನೆ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಸುಮಾರು 19.31 ಕೋಟಿ ರೂಪಾಯಿ ನಗದು ಪತ್ತೆಯಾಗಿತ್ತು. ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿತ್ತು. 

ಇದನ್ನೂ ಓದಿ: ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಮನೆ ಮೇಲೆ ಇಡಿ ದಾಳಿ; ಬರೋಬ್ಬರಿ 19.31 ಕೋಟಿ ರೂ. ನಗದು ಪತ್ತೆ

ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆಯಿಂದ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್, ಮತ್ತು ಅವರ ಪತಿ ಮತ್ತು ಇತರ ನಿಕಟ ಸಂಬಂಧಿಗಳನ್ನು ಅಧಿಕಾರಿಗಳು ವಿಚಾರಣೆಗೊಳಪಡಿಸುವ ಸಾಧ್ಯತೆ ಎಂದು ತಿಳಿದುಬಂದಿದೆ. ರಾಂಚಿಯ ಪಲ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ, ಪೂಜಾ ಸಿಂಘಾಲ್ ಪತಿ ಅಭಿಷೇಕ್ ಝಾ, ಸಹೋದರ ಸಿದ್ಧಾರ್ಥ್ ಸಿಂಘಾಲ್, ಕೋಲ್ಕತ್ತಾದಲ್ಲಿ ಆಕೆಯ ಅತ್ತೆ, ಪೋಷಕರು ಮತ್ತು ಇತರ ಸಂಬಂಧಿಕರ ಮನೆ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ರಾಂಚಿ, ಚಂಡೀಗಢ, ಫರಿದಾಬಾದ್, ಗುರುಗ್ರಾಮ್, ನೋಯ್ಡಾ, ಮುಂಬೈ, ಕೊಲ್ಲಾಟ, ಮುಜ್ಜಫರ್‌ಪುರ್, ಸಹರ್ಸಾ ಮತ್ತು ಎನ್‌ಸಿಆರ್ ನ ಹಲವಾರು ಭಾಗಗಳಲ್ಲಿ, ಫರಿದಾಬಾದ್ ಮತ್ತು ಗುರುಗ್ರಾಮ್‌ನಲ್ಲಿ ದಾಳಿಗಳನ್ನು ನಡೆಸಲಾಗಿತ್ತು. ಹೀಗಾಗಿ ನಾಳಿನ ವಿಚಾರಣೆಗೆ ಅವರನ್ನೂ ಕರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಜಾರ್ಖಾಂಡ್: ಅಕ್ರಮ ಗಣಿಗಾರಿಕೆ, ಶೆಲ್ ಕಂಪನಿಗಳ 18 ಪ್ರದೇಶಗಳ ಮೇಲೆ ಇಡಿ ದಾಳಿ

ವರದಿಗಳ ಪ್ರಕಾರ, ಹಣವನ್ನು ಎಣಿಸಲು ಮೂರು ನೋಟು ಎಣಿಕೆ ಯಂತ್ರಗಳನ್ನು ಬಳಸಲಾಗಿದೆ. 2000, 500, 200 ಮತ್ತು 100 ರೂಪಾಯಿಗಳ ಬೃಹತ್ ನೋಟಿನ ಕಂತೆಗಳು ಪತ್ತೆಯಾಗಿವೆ. 2008 ಮತ್ತು 2011 ರ ನಡುವೆ 18.06 ಕೋಟಿ ರೂಪಾಯಿ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಕಿರಿಯ ಎಂಜಿನಿಯರ್ ರಾಮ್ ಬಿನೋದ್ ಪ್ರಸಾದ್ ಸಿನ್ಹಾ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳವು 2017 ರಲ್ಲಿ ದಾಖಲಿಸಿದ ಎಫ್‌ಐಆರ್ ಅನ್ನು ಆಧರಿಸಿ ಇಡಿ ಈ ದಾಳಿ ನಡೆಸಿದೆ. ತರುವಾಯ, ಇಡಿ ಸಿನ್ಹಾಗೆ ಸೇರಿದ 4.8 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿತ್ತು ಮತ್ತು 2020ರಲ್ಲಿ ಅವರ ವಿರುದ್ಧ ಎರಡು ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿತು. ತನಿಖೆ ಸಮಯದಲ್ಲಿ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಹೆಸರು ಕೂಡ ಕೇಳಿಬಂದಿತ್ತು.

18 ಸ್ಥಳಗಳಲ್ಲಿ ದಾಳಿ
ಜಾರ್ಖಂಡ್ ಮಾತ್ರವಲ್ಲದೇ ಬಿಹಾರ, ದೆಹಲಿ ಹಾಗೂ ಇತರ ನಗರಗಳ 18 ಸ್ಥಳಗಳಲ್ಲಿ ದಾಳಿ ನಡೆಸಿದ್ದ ಇಡಿ, ಒಟ್ಟು 19.31 ಕೋಟಿ ನಗದನ್ನು ವಶಪಡಿಸಿಕೊಂಡಿದೆ. ಅದರಲ್ಲಿ 17 ಕೋಟಿ ರೂ ನಗದು ಪೂಜಾ ಸಿಂಘಾಲ್ ಅವರ ಚಾರ್ಟೆರ್ಡ್ ಅಕೌಂಟೆಂಟ್ ಸುಮನ್ ಕುಮಾರ್ ಅವರಮನೆಯಿಂದ ವಶಪಡಿಸಿಕೊಳ್ಳಲಾಗಿದೆ. ಮತ್ತೊಂದು ಸ್ಥಳದಲ್ಲಿ ದಾಳಿ ಮಾಡಿ 1.8 ಕೋಟಿ ರೂ ವಶಕ್ಕೆ ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ.
 


Stay up to date on all the latest ದೇಶ news
Poll
Dk shivakumar

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 65 ಸ್ಥಾನಗಳ ಗಡಿ ದಾಟುವುದಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.


Result
ಒಪ್ಪುತ್ತೇನೆ
ಒಪ್ಪುವುದಿಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp