ಕಲ್ಲಿದ್ದಲು ಕಳ್ಳತನ ಪ್ರಕರಣ: ಮಮತಾ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ವಿಚಾರಣೆಗೆ ಇಡಿಗೆ ಸುಪ್ರೀಂ ಅನುಮತಿ
ಪಶ್ಚಿಮ ಕಲ್ಲಿದ್ದಲು ಕಳ್ಳತನ ಪ್ರಕರಣಬಂಗಾಳದ ಸಂಬಂಧ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
Published: 17th May 2022 02:20 PM | Last Updated: 17th May 2022 02:30 PM | A+A A-

ಮಮತಾ ಬ್ಯಾನರ್ಜಿ-ಅಭಿಶೇಕ್ ಬ್ಯಾನರ್ಜಿ
ನವದೆಹಲಿ: ಪಶ್ಚಿಮ ಕಲ್ಲಿದ್ದಲು ಕಳ್ಳತನ ಪ್ರಕರಣಬಂಗಾಳದ ಸಂಬಂಧ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಬ್ಯಾನರ್ಜಿ ಅವರನ್ನು ಪ್ರಶ್ನಿಸಲು, ಕೇಂದ್ರ ತನಿಖಾ ಸಂಸ್ಥೆಯೊಂದಿಗೆ ಸಹಕರಿಸಲು ಮತ್ತು ಅದರ ಅಧಿಕಾರಿಗಳು ರಾಜ್ಯದಲ್ಲಿದ್ದಾಗ ಅವರಿಗೆ ರಕ್ಷಣೆ ನೀಡುವಂತೆ ಸುಪ್ರೀಂ ಕೋರ್ಟ್ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ.
ಸುಪ್ರೀಂ ಕೋರ್ಟ್ನ ಪ್ರಕಾರ, ರಾಜ್ಯ ರಾಜಧಾನಿ ಕೋಲ್ಕತ್ತಾದಲ್ಲಿ ಅಭಿಷೇಕ್ ಬ್ಯಾನರ್ಜಿಯನ್ನು ಪ್ರಶ್ನಿಸಲು ಉದ್ದೇಶಿಸುವ ಕನಿಷ್ಠ 24 ಗಂಟೆಗಳ ಮೊದಲು ತನಿಖಾ ಸಂಸ್ಥೆಯು ಅಭಿಷೇಕ್ ಬ್ಯಾನರ್ಜಿ ಅವರಿಗೆ ತಿಳಿಸಬೇಕು.
ಇದನ್ನೂ ಓದಿ: 'ಅವಮಾನ': ಮಮತಾ ಬ್ಯಾನರ್ಜಿಗೆ ಸಾಹಿತ್ಯ ಪ್ರಶಸ್ತಿ ವಿರೋಧಿಸಿ ಅವಾರ್ಡ್ ಹಿಂದಿರುಗಿಸಿದ ಲೇಖಕಿ
ತನಿಖಾಧಿಕಾರಿಗಳು ಬಂಗಾಳ ಸರ್ಕಾರಕ್ಕೆ ಸಂಬಂಧಿಸಿದ ಯಾವುದೇ ಅಡೆತಡೆ ಬಂದರೆ, ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಕೋರ್ಟ್ಗೆ ಬರಲು ಅವಕಾಶ ನೀಡಲಾಗಿದೆ. ನ್ಯಾಯಮೂರ್ತಿ ಯುಯು ಲಲಿತ್ ಅವರ ಸುಪ್ರೀಂ ಕೋರ್ಟ್ ಪೀಠವು ರಾಜ್ಯದ ಯಾವುದೇ ರೀತಿಯ ಅಡಚಣೆ ಮತ್ತು ಹಸ್ತಕ್ಷೇಪವನ್ನು ಸಹಿಸುವುದಿಲ್ಲ ಎಂದು ಹೇಳಿದೆ.