ರಾಜೀವ್ ಗಾಂಧಿ ಹತ್ಯೆ ಪ್ರಕರಣ: ಅಪರಾಧಿ ಪೇರಾರಿವಾಳನ್ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ
ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎ.ಜಿ. ಪೇರಾರಿವಾಳನ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ.
Published: 18th May 2022 12:51 PM | Last Updated: 18th May 2022 01:35 PM | A+A A-

ಪೇರಾರಿವಾಳನ್
ನವದೆಹಲಿ: ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎ.ಜಿ. ಪೇರಾರಿವಾಳನ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ.
ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಮತ್ತು ಬಿ. ಆರ್. ಗವಾಯಿ ಅವರನ್ನೊಳಗೊಂಡ ಪೀಠವು ಈ ಆದೇಶವನ್ನು ನೀಡಿದೆ.
ಕ್ಷಮಾಪಣೆ ಅರ್ಜಿಯನ್ನು ನಿರ್ಧರಿಸುವಲ್ಲಿ ಸುಪ್ರೀಂ ಕೋರ್ಟ್ ಆರ್ಟಿಕಲ್ 142 ಅಂದರೆ ಸುಪ್ರೀಂ ಕೋರ್ಟ್ಗೆ ಸಂವಿಧಾನವು ನೀಡಿರುವ ಅನಿರ್ದಿಷ್ಟ ಅಧಿಕಾರವನ್ನು ಚಲಾಯಿಸಿದೆ,
ರಾಜ್ಯಪಾಲರ ವಿಳಂಬದ ನಂತರ ಎಜಿ ಪೆರಾರಿವಾಳನ್ ಅವರನ್ನು ಬಿಡುಗಡೆ ಮಾಡಲು ನ್ಯಾಯಾಲಯ ಆದೇಶಿಸಿದೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಮೇ 21, 1991 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಹಿಳಾ ಆತ್ಮಾಹುತಿ ಬಾಂಬರ್ನಿಂದ ಹತ್ಯೆಗೀಡಾಗಿದ್ದರು. ಈ ಹತ್ಯೆ ಪ್ರಕರಣದಲ್ಲಿ ಪೇರಾರಿವಾಳನ್ ಕಳೆದ 31 ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.
ಹತ್ಯೆಯ ಸಮಯದಲ್ಲಿ 19 ವರ್ಷ ವಯಸ್ಸಿನವನಾಗಿದ್ದ ಪೇರಾರಿವಾಳನ್ ರಾಜೀವ್ ಹತ್ಯೆಯ ಮಾಸ್ಟರ್ಮೈಂಡ್ನ ಎಲ್ಟಿಟಿಇ ವ್ಯಕ್ತಿ ಶಿವರಸನ್ಗಾಗಿ ಎರಡು 9-ವೋಲ್ಟ್ ಬ್ಯಾಟರಿಗಳನ್ನು ಖರೀದಿಸಿದ್ದನೆಂದು ಆರೋಪಿಸಲಾಗಿತ್ತು.
ರಾಜೀವ್ ಗಾಂಧಿ ಹತ್ಯೆಗೆ ಬಾಂಬ್ ನಲ್ಲಿ ಬ್ಯಾಟರಿಗಳನ್ನು ಬಳಸಲಾಗಿತ್ತು. 1998 ರಲ್ಲಿ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಪೆರಾರಿವಾಳನ್ಗೆ ಮರಣದಂಡನೆ ವಿಧಿಸಿತು. ಅದರ ಮುಂದಿನ ವರ್ಷ, ಸುಪ್ರೀಂ ಕೋರ್ಟ್ ಶಿಕ್ಷೆಯನ್ನು ಎತ್ತಿಹಿಡಿಯಿತು. ಆದರೆ 2014 ರಲ್ಲಿ ಅದನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿತು. ಈ ವರ್ಷದ ಮಾರ್ಚ್ನಲ್ಲಿ, ಉನ್ನತ ನ್ಯಾಯಾಲಯವು ಅವರಿಗೆ ಜಾಮೀನು ನೀಡಿತ್ತು.
ಸ್ವಲ್ಪ ಸಮಯದ ನಂತರ, ಪೇರಾರಿವಾಳನ್ ಜೈಲಿನಿಂದ ಬೇಗನೆ ಬಿಡುಗಡೆ ಕೋರಿ ಮನವಿ ಸಲ್ಲಿಸಿದ್ದರು. ಪೇರಾರಿವಾಳನ್ ಅವರ ಮನವಿಯನ್ನು ವಿರೋಧಿಸಿದ ಕೇಂದ್ರ ಸರ್ಕಾರವು. ತಮಿಳುನಾಡು ರಾಜ್ಯಪಾಲರು ಈ ವಿಷಯವನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಉಲ್ಲೇಖಿಸಿದ್ದಾರೆ ಎಂದು ಹೇಳಿದ್ದು, ಅವರು ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದಿತ್ತು. ಪ್ರಕರಣದ ವಿಳಂಬ ಹಾಗೂ ರಾಜ್ಯಪಾಲರ ಕ್ರಮವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿತ್ತು.