
ದರ್ಶನಕ್ಕೆ ತೆರೆದ ಕೇದಾರನಾಥ ದೇವಾಲಯ (ಸಂಗ್ರಹ ಚಿತ್ರ)
ಡೆಹ್ರಾಡೂನ್: ಉತ್ತರಾಖಂಡದ ಚಾರ್ ಧಾಮ್ ಯಾತ್ರೆಯಲ್ಲಿ ಈ ವರೆಗೂ ಮೃತಪಟ್ಟವರ ಸಂಖ್ಯೆ 57ಕ್ಕೆ ಏರಿಕೆಯಾಗಿದೆ.
Uttarakhand | 57 pilgrims have died since the Char Dham Yatra 2022 started on May 3. Health screening of pilgrims is being done on Yatra travel routes: DG Health Dr Shailja Bhatt
— ANI UP/Uttarakhand (@ANINewsUP) May 22, 2022
ಉತ್ತರಾಖಂಡದಲ್ಲಿ ಈ ವರ್ಷದ ಚಾರ್ ಧಾಮ್ ಯಾತ್ರೆ ಇದೇ ಮೇ 3ರಂದು ಆರಂಭವಾಗಿತ್ತು. ಈ ಪೈಕಿ ಯಾತ್ರೆ ಕೈಗೊಂಡಿರುವ ಯಾತ್ರಾರ್ಥಿಗಳ ಪೈಕಿ ಈವರೆಗೆ 57 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಸೇವೆಗಳ ನಿರ್ದೇಶನಾಲಯದ ಡಾ. ಶೈಲಜಾ ಭಟ್ ಅವರು, ಮೇ 3ರಿಂದ ಚಾರ್ ಧಾಮ್ ಯಾತ್ರೆ ಆರಂಭವಾಗಿದ್ದು, ಈವರೆಗೆ 57 ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ. ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿತ ಸಮಸ್ಯೆ ಹಾಗೂ ಮೌಂಟೇನ್ ಸಿಕ್ನೆಸ್ ತೊಂದರೆಗಳು ಇಂತಹ ಸಾವಿಗೆ ಕಾರಣ ಎಂದು ತಿಳಿಸಿದ್ದಾರೆ.