social_icon

ಸಾರ್ವತ್ರಿಕ ಲಸಿಕೆ ಕಾರ್ಯಕ್ರಮದ ಉದ್ದೇಶಕ್ಕಾಗಿ CoWIN ಆಪ್ ಮರುರೂಪಿಸಲು ಸರ್ಕಾರ ಯೋಜನೆ

ಕೋವಿಡ್ ಲಸಿಕೆ ದಾಖಲೆ ಮತ್ತು ಪ್ರಮಾಣಪತ್ರಗಳನ್ನು ನೀಡುವ ಕಾರ್ಯವನ್ನು ಮುಂದುವರಿಸುವಾಗ ಭಾರತದ ಸಾರ್ವತ್ರಿಕ ಪ್ರತಿರಕ್ಷಣಾ ಕಾರ್ಯಕ್ರಮ ಮತ್ತು ಇತರ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಿಗಾಗಿ ಕೋ-ವಿನ್ ಪ್ಲಾಟ್‌ಫಾರ್ಮ್ ಅನ್ನು ಮರುಬಳಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.

Published: 27th May 2022 12:25 PM  |   Last Updated: 27th May 2022 04:04 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Sumana Upadhyaya
Source : PTI

ನವದೆಹಲಿ: ಕೋವಿಡ್ ಲಸಿಕೆ ದಾಖಲೆ ಮತ್ತು ಪ್ರಮಾಣಪತ್ರಗಳನ್ನು ನೀಡುವ ಕಾರ್ಯವನ್ನು ಮುಂದುವರಿಸುವಾಗ ಭಾರತದ ಸಾರ್ವತ್ರಿಕ ಪ್ರತಿರಕ್ಷಣಾ ಕಾರ್ಯಕ್ರಮ ಮತ್ತು ಇತರ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಿಗಾಗಿ ಕೋ-ವಿನ್ ಪ್ಲಾಟ್‌ಫಾರ್ಮ್ ಅನ್ನು ಮರುಬಳಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಸಾರ್ವತ್ರಿಕ ಲಸಿಕೆ ಕಾರ್ಯಕ್ರಮ (UIP) ಅಡಿಯಲ್ಲಿ ಲಸಿಕೆ ದಾಖಲೆಯನ್ನು ಈಗ ನಿರ್ವಹಿಸಲಾಗುತ್ತಿದೆ. ಯುಐಪಿಯನ್ನು ಸೇರಿಸಲು ಕೋ-ವಿನ್ ನ್ನು ಮರುರೂಪಿಸಿದ ನಂತರ, ಸಂಪೂರ್ಣ ಲಸಿಕೆ ವ್ಯವಸ್ಥೆಯು ಡಿಜಿಟಲೀಕರಣಗೊಳ್ಳುತ್ತದೆ, ಇದರಿಂದಾಗಿ ಫಲಾನುಭವಿಗಳ ಪತ್ತೆಹಚ್ಚುವಿಕೆ ಸುಲಭವಾಗುತ್ತದೆ ಎಂದು ಕೋವಿನ್ ಸಹ ಮುಖ್ಯಸ್ಥ ಮತ್ತು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಸಿಇಒ ಡಾ ಆರ್ ಎಸ್ ಶರ್ಮಾ ಪಿಟಿಐಗೆ ತಿಳಿಸಿದ್ದಾರೆ.

ಇದು ಭೌತಿಕ ದಾಖಲೆಯನ್ನು ಇಟ್ಟುಕೊಳ್ಳುವ ತೊಂದರೆಯನ್ನು ದೂರ ಮಾಡುತ್ತದೆ. ರೋಗನಿರೋಧಕ ಕಾರ್ಯಕ್ರಮವನ್ನು ಡಿಜಿಟಲೀಕರಣಗೊಳಿಸಿದ ನಂತರ, ಫಲಾನುಭವಿಗಳು ಸ್ಥಳದಲ್ಲೇ ಪ್ರಮಾಣಪತ್ರಗಳನ್ನು ಪಡೆಯುತ್ತಾರೆ. ಅದನ್ನು ಡೌನ್‌ಲೋಡ್ ಕೂಡ ಮಾಡಬಹುದು. ಈ ಪ್ರಮಾಣಪತ್ರಗಳನ್ನು ಡಿಜಿ-ಲಾಕರ್‌ಗಳಲ್ಲಿ ಸಂಗ್ರಹಿಸಲಾಗುವುದು ಎಂದು ವಿವರಿಸಿದರು.

ಸಾರ್ವತ್ರಿಕ ಲಸಿಕೆ ಅಭಿಯಾನದಿಂದ ತಡೆಗಟ್ಟಬಹುದಾದ ರೋಗಗಳಿಂದ ಮಕ್ಕಳು ಮತ್ತು ಗರ್ಭಿಣಿ ತಾಯಂದಿರನ್ನು ರಕ್ಷಿಸುವ ಗುರಿಯನ್ನು ಹೊಂದಿರುವ ವಿಶ್ವದ ಅತಿದೊಡ್ಡ ವ್ಯಾಕ್ಸಿನೇಷನ್ ಯೋಜನೆಗಳಲ್ಲಿ ಒಂದಾಗಿದೆ. ಇದರ ಅಡಿಯಲ್ಲಿ, ಪೋಲಿಯೊ, ಡಿಫ್ತೀರಿಯಾ, ಟೆಟನಸ್, ದಡಾರ ಮತ್ತು ಹೆಪಟೈಟಿಸ್ ಬಿ ನಂತಹ 12 ಲಸಿಕೆ-ತಡೆಗಟ್ಟಬಹುದಾದ ರೋಗಗಳಿಗೆ ಸರ್ಕಾರವು ಉಚಿತವಾಗಿ ಲಸಿಕೆ ನೀಡುತ್ತದೆ.

ಸಮಗ್ರ ರೋಗನಿರೋಧಕ ಮಾಹಿತಿ ವ್ಯವಸ್ಥೆಯ ಪ್ರಾಮುಖ್ಯತೆಯನ್ನು ತಿಳಿಸಿದ ಅಧಿಕಾರಿಯೊಬ್ಬರು, ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಲಸಿಕೆ ಕಾರ್ಯಕ್ರಮಗಳ ಪರಿಣಾಮಕಾರಿ ನಿರ್ವಹಣೆಗೆ ಸಹಾಯ ಮಾಡುತ್ತದೆ ಎಂದರು. 

ಸಾರ್ವಜನಿಕ ಆರೋಗ್ಯ ನೀತಿಗಳನ್ನು ರೂಪಿಸುವಲ್ಲಿ ತೊಡಗಿರುವವರಿಗೆ ಲಭ್ಯವಾಗುವಂತೆ ವೈಯಕ್ತಿಕ ಮಟ್ಟದಲ್ಲಿ ಲಭ್ಯವಿರುವ ದಾಖಲೆಗಳನ್ನು ಜನಸಂಖ್ಯೆಯ ಮಟ್ಟದಲ್ಲಿ ಒಟ್ಟುಗೂಡಿಸಬಹುದು ಎಂದು ಹೇಳಿದರು.


Stay up to date on all the latest ದೇಶ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp