
ಸಾಂದರ್ಭಿಕ ಚಿತ್ರ
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಅಟ್ಟಹಾಸ ಮುಂದುವರೆದಿದ್ದು, ಇಂದು ಕುಲ್ಗಾಮ್ ನಲ್ಲಿ ಹಿಂದೂ ಶಿಕ್ಷೆಕಿಯೊಬ್ಬರನ್ನು ಹತ್ಯೆ ಮಾಡಿದ್ದಾರೆ.
ಹೌದು.. ಹಿಂದೂಗಳನ್ನು ಗುರಿಯಾಗಿಸಿ ಹತ್ಯೆ ಮಾಡುವ ಪ್ರಕರಣಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದುವರಿದಿದ್ದು, ಇಂದು ಕುಲ್ಗಾಂ ಜಿಲ್ಲೆಯ ಗೋಪಾಲ್ ಪೋರಾ ಪ್ರದೇಶದಲ್ಲಿ ಮಂಗಳವಾರ (ಮೇ 31) ಹಿಂದೂ ಧರ್ಮಕ್ಕೆ ಸೇರಿದ ಶಿಕ್ಷಕಿಯನ್ನು ಗುಂಡಿಕ್ಕಿ ಕೊಂದಿದ್ದಾರೆ. ಮೃತರನ್ನು ರಾಜ್ನಿ ಬಲ್ಲಾ ಎಂದು ಗುರುತಿಸಲಾಗಿದೆ.
#KulgamTerrorIncidentUpdate: Injured lady teacher, a #Hindu & resident of Samba (Jammu division) #succumbed to her injuries. #Terrorists involved in this #gruesome #terror crime will be soon identified & neutralised.@JmuKmrPolice https://t.co/8rZR3dMmLY
— Kashmir Zone Police (@KashmirPolice) May 31, 2022
ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಶಿಕ್ಷಕಿಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ತಕ್ಷಣ ಚಿಕಿತ್ಸೆ ಕೊಡುವ ಪ್ರಯತ್ನ ಮಾಡಿದರಾದರೂ ಶಿಕ್ಷಕಿಯ ಜೀವ ಉಳಿಯಲಿಲ್ಲ. ಈ ನೀಚ ಕೃತ್ಯ ಎಸಗಿದ ಉಗ್ರರನ್ನು ಶೀಘ್ರ ಪತ್ತೆ ಹಚ್ಚಿ, ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ: ಅಫ್ಘಾನಿಸ್ತಾನದಿಂದ ಕಾಶ್ಮೀರದತ್ತ ಅಲ್-ಖೈದಾ ಗಮನ: ಭಾರತದ ಚಿಂತೆಗೆ ಕಾರಣವಾಯ್ತಾ ವಿಶ್ವಸಂಸ್ಥೆ ವರದಿ!
ಕುಲ್ಗಾಮ್ನ ಗೋಪಾಲಪುರ ಪ್ರದೇಶದಲ್ಲಿರುವ ಪ್ರೌಢಶಾಲೆಯಲ್ಲಿ ಈ ಪ್ರಕರಣ ನಡೆದಿದೆ. ಸದ್ಯಕ್ಕೆ ಪೊಲೀಸರು ಈ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಇತ್ತೀಚೆಗೆ, ಕೇಂದ್ರ ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಸರ್ಕಾರಿ ನೌಕರ ರಾಹುಲ್ ಭಟ್ ಅವರನ್ನು ಅವರ ಕಚೇರಿಯೊಳಗೆ ನುಗ್ಗಿ ಭಯೋತ್ಪಾದಕರು ಗುಂಡಿಕ್ಕಿ ಕೊಂದು ಹಾಕಿದ್ದರು. ಬಳಿಕ ಈ ಪ್ರದೇಶದಲ್ಲಿ ಭಾರೀ ಪ್ರತಿಭಟನೆಗಳು ನಡೆದಿತ್ತು. ಮೂರು ವಾರಗಳ ಹಿಂದೆ ಚಾದೂರ ಪಟ್ಟಣದ ತಹಸಿಲ್ ಕಚೇರಿಯೊಳಗೆ ಭಯೋತ್ಪಾದಕರು ಶ್ರೀ ಭಟ್ ಎಂಬುವವವರನ್ನು ಗುಂಡಿಕ್ಕಿ ಕೊಂದಿದ್ದರು. 2010-11ರಲ್ಲಿ ವಲಸಿಗರಿಗೆ ವಿಶೇಷ ಉದ್ಯೋಗ ಪ್ಯಾಕೇಜ್ ಅಡಿಯಲ್ಲಿ ಅವರಿಗೆ ಗುಮಾಸ್ತ ಹುದ್ದೆ ಸಿಕ್ಕಿತ್ತು.