ದೆಹಲಿಯಲ್ಲಿ ದಟ್ಟ ವಾಯುಮಾಲಿನ್ಯ, ಪ್ರಾಥಮಿಕ ಶಾಲೆಗಳಿಗೆ ಅನಿರ್ದಿಷ್ಟಾವಧಿ ರಜೆ, ಕೇಂದ್ರ ತುರ್ತು ಕ್ರಮ ಕೈಗೊಳ್ಳಬೇಕು: ಸಿಎಂ ಅರವಿಂದ್ ಕೇಜ್ರಿವಾಲ್

ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಅಪಾಯದ ಮಟ್ಟ ಮೀರಿದೆ. ಜನರು ಮನೆಯಿಂದ ಹೊರಗೆ ಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆಯಿಂದ ದೆಹಲಿಯಲ್ಲಿ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್
Updated on

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ (Delhi pollution) ಅಪಾಯದ ಮಟ್ಟ ಮೀರಿದೆ. ಜನರು ಮನೆಯಿಂದ ಹೊರಗೆ ಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆಯಿಂದ ದೆಹಲಿಯಲ್ಲಿ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು ರಾಜಧಾನಿಯಲ್ಲಿ ಮಾಲಿನ್ಯ ಸಹಜ ಸ್ಥಿತಿಗೆ ಬರುವವರೆಗೆ ಶಾಲೆಗಳಿಗೆ ರಜೆ ಮುಂದುವರಿಯಲಿದೆ.

ಮಾಲಿನ್ಯ ಪರಿಸ್ಥಿತಿ ಸುಧಾರಿಸುವವರೆಗೆ ದೆಹಲಿಯ ಪ್ರಾಥಮಿಕ ಶಾಲೆಗಳನ್ನು (Primary schools) ನಾಳೆಯಿಂದ ಮುಚ್ಚಲಾಗುವುದು. ಮಾಲಿನ್ಯ ನಿಯಂತ್ರಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ನಾಳೆಯಿಂದ ದೆಹಲಿಯ ಎಲ್ಲಾ ಪ್ರಾಥಮಿಕ ಶಾಲೆಗಳನ್ನು ಮುಚ್ಚುತ್ತಿದ್ದೇವೆ, 5 ನೇ ತರಗತಿ ನಂತರದ ವಿದ್ಯಾರ್ಥಿಗಳಿಗೆ ಪರಿಸ್ಥಿತಿ ಸುಧಾರಿಸುವವರೆಗೆ ಶಾಲೆಗಳಲ್ಲಿ ಹೊರಾಂಗಣ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗುತ್ತದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್(Aravind Kejriwal) ಇಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagawanth mann) ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. 

"ವಾಹನಗಳಿಗೆ ಬೆಸ-ಸಮ ಯೋಜನೆಯನ್ನು ಜಾರಿಗೊಳಿಸಬೇಕೆ ಎಂದು ಯೋಚಿಸುತ್ತಿದ್ದೇವೆ. ಇದು ಆಪಾದನೆ ಮಾಡುತ್ತಾ ಕೂರುವ, ಬೇರೆಯವರ ಮೇಲೆ ಬೆರಳು ತೋರಿಸುವ ಸಮಯವಲ್ಲ. ರಾಜಕೀಯ ಮಾಡುತ್ತಾ ಕಾಲಹರಣ ಮಾಡುವುದು ಬೇಡ, ಉತ್ತರ ಭಾರತವನ್ನು ಮಾಲಿನ್ಯ ಸಮಸ್ಯೆಯಿಂದ ರಕ್ಷಿಸಲು ಕೇಂದ್ರ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪಂಜಾಬ್ ರಾಜ್ಯದಲ್ಲಿ ಪೈರಿನ ಕೂಳೆ ಸುಡುವಿಕೆಯಿಂದ ಇಷ್ಟೊಂದು ಮಾಲಿನ್ಯ ಹೆಚ್ಚಾಗಿದ್ದು ಇದಕ್ಕೆ ಹಿಂದಿನ ಸರ್ಕಾರದ ನೀತಿಯೇ ಕಾರಣ. ಇದನ್ನು ಮುಂದಿನ ವರ್ಷದಿಂದ ಗಣನೀಯ ಪ್ರಮಾಣದಲ್ಲಿ ತಗ್ಗಿಸಲಾಗುವುದು ಎಂದರು.

ಈ ಮಧ್ಯೆ, ದೆಹಲಿ ವಾಯುಮಾಲಿನ್ಯಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಇಂದು ಒಪ್ಪಿಕೊಂಡಿದೆ.

ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್‌ನ ಅಂತಿಮ ಹಂತದ ಅಡಿಯಲ್ಲಿ ಮಾಲಿನ್ಯಕಾರಕ ಚಟುವಟಿಕೆಗಳ ಮೇಲಿನ ನಿರ್ಬಂಧಗಳ ಅನುಷ್ಠಾನದ ಕುರಿತು ಚರ್ಚಿಸಲು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಇಂದು ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ.ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಸುಧಾರಿಸುವವರೆಗೆ ಶಾಲೆಗಳನ್ನು ಮುಚ್ಚುವಂತೆ ಮಕ್ಕಳ ಹಕ್ಕುಗಳ ರಾಷ್ಟ್ರೀಯ ಆಯೋಗ (NCPCR) ದೆಹಲಿ ಸರ್ಕಾರಕ್ಕೆ ಸೂಚಿಸಿತ್ತು.

SAFAR (ಸಿಸ್ಟಮ್ ಆಫ್ ಏರ್ ಕ್ವಾಲಿಟಿ ಮತ್ತು ಹವಾಮಾನ ಮುನ್ಸೂಚನೆ ಮತ್ತು ಸಂಶೋಧನೆ), ದೆಹಲಿಯ PM 2.5 ಮಾಲಿನ್ಯದಲ್ಲಿ ಸ್ಟಬಲ್ ಸುಡುವಿಕೆಯಿಂದ ಶೇಕಡಾ 34ರಷ್ಟು ಮಾಲಿನ್ಯ ಉಂಟಾಗುತ್ತಿದೆ ಎಂದು ಹೇಳಿದೆ. 

ಇಂದು ದೆಹಲಿಯಲ್ಲಿ ತಾಪಮಾನ 16.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿಅಂಶಗಳ ಪ್ರಕಾರ, ದೆಹಲಿಯ ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕ (AQI) 426 ರಷ್ಟಿದೆ. ಬೆಳಿಗ್ಗೆ 8.30 ಕ್ಕೆ ಸಾಪೇಕ್ಷ ಆರ್ದ್ರತೆಯು ಶೇಕಡಾ 92 ರಷ್ಟಿತ್ತು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ದೆಹಲಿಯ ಆನಂದ್ ವಿಹಾರ್ ಮತ್ತು ಜಹಾಂಗೀರ್ಪುರಿ ರಾಜಧಾನಿಯಲ್ಲಿ ಅತ್ಯಂತ ಕಲುಷಿತ ಸ್ಥಳಗಳಾಗಿದ್ದು, AQI ಕ್ರಮವಾಗಿ 471 ಮತ್ತು 485 ರಷ್ಟಿದೆ. ತೀವ್ರ AQI ದಾಖಲಾಗಿರುವ ಪ್ರದೇಶಗಳೆಂದರೆ ಅಲಿಪುರ್ (475), ಅಶೋಕ್ ವಿಹಾರ್ (470), ಬವಾನಾ (482), ಬುರಾರಿ (460), DTU (446), ದ್ವಾರಕಾ (474), ITO (438), ಮುಂಡ್ಕಾ (476), ನರೇಲಾ ( 477), ನೆಹರು ನಗರ (482), ಪತ್ಪರ್‌ಗಂಜ್ (435), ರೋಹಿಣಿ (474), ಸೋನಿಯಾ ವಿಹಾರ್ (472), ವಿವೇಕ್ ವಿಹಾರ್ (471) ಮತ್ತು ವಜೀರ್‌ಪುರ (475).

400 ಕ್ಕಿಂತ ಹೆಚ್ಚಿನ AQI ಅನ್ನು ತೀವ್ರವೆಂದು ಪರಿಗಣಿಸಲಾಗುತ್ತದೆ ಇದು ಜನರ ಆರೋಗ್ಯ ಮೇಲೆ ಪರಿಣಾಮ ಬೀರಬಹುದು. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಪಂಜಾಬ್‌ನಲ್ಲಿ ಹೊಲಗಳಲ್ಲಿ ಹೂಳಲು 1.20 ಲಕ್ಷ ಯಂತ್ರಗಳಿವೆ. ಗ್ರಾಮ ಪಂಚಾಯತಿಗಳು ಹೊಲಸುಗಳನ್ನು ಸುಡದಂತೆ ನಿರ್ಣಯಗಳನ್ನು ಅಂಗೀಕರಿಸಿವೆ.ಪಂಜಾಬ್‌ನಲ್ಲಿ ಬಂಪರ್ ಭತ್ತದ ಬೆಳೆಯಿಂದಾಗಿ ಹೆಚ್ಚಿನ ಪ್ರಮಾಣದ ಕಡ್ಡಿಗಳು ಉಂಟಾಗಿವೆ. ಮುಂದಿನ ವರ್ಷ ನವೆಂಬರ್ ವೇಳೆಗೆ ಕೂಳೆ ಸುಡುವಿಕೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. 

ಪಂಜಾಬ್ ರಾಜ್ಯದಲ್ಲಿ ಕೂಳೆ ಸುಡುವಿಕೆ ಮತ್ತು ಅದರಿಂದುಂಟಾಗುವ ಮಾಲಿನ್ಯ ಸಮಸ್ಯೆ ಬಗೆಹರಿಸಲು ಮುಖ್ಯಮಂತ್ರಿಗಳು ಹಾಗೂ ವಿಶೇಷ ತಜ್ಞರ ಅಭಿಪ್ರಾಯಗಳನ್ನು ಪಡೆಯಲು ಜಂಟಿ ಸಭೆ ಕರೆಯಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com