ದೆಹಲಿಯಲ್ಲಿ ಮಿತಿಮೀರಿದ ವಾಯು ಮಾಲಿನ್ಯ: ನವೆಂಬರ್ 10 ರಂದು ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆ

ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ (NCR) ಹೆಚ್ಚುತ್ತಿರುವ ವಾಯು ಮಾಲಿನ್ಯಕ್ಕೆ ಮುಖ್ಯ ಕಾರಣವಾಗಿರುವ ಹುಲ್ಲು ಸುಡುವಿಕೆಗೆ ಹೊಸ ಮಾರ್ಗಸೂಚಿಗಳನ್ನು ಸೂಚಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನವೆಂಬರ್ 10 ರಂದು ವಿಚಾರಣೆಗೆ ಕೈಗೆತ್ತಿಗೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಕೊಂಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ (NCR) ಹೆಚ್ಚುತ್ತಿರುವ ವಾಯು ಮಾಲಿನ್ಯಕ್ಕೆ ಮುಖ್ಯ ಕಾರಣವಾಗಿರುವ ಹುಲ್ಲು ಸುಡುವಿಕೆಗೆ ಹೊಸ ಮಾರ್ಗಸೂಚಿಗಳನ್ನು ಸೂಚಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನವೆಂಬರ್ 10 ರಂದು ವಿಚಾರಣೆಗೆ ಕೈಗೆತ್ತಿಗೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಮತ್ತು ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರನ್ನೊಳಗೊಂಡ ನ್ಯಾಯಪೀಠವು, ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ವಕೀಲ ಶಶಾಂಕ್ ಶೇಖರ್ ಝಾ ಅವರ ಅರ್ಜಿಯನ್ನು ವಿಚಾರಣೆ ನಡೆಸಲು ಒಪ್ಪಿಕೊಂಡಿತು. 

ದೆಹಲಿಯ ಸಮೀಪವಿರುವ ಪಂಜಾಬ್ ರಾಜ್ಯದಲ್ಲಿ ಕೋಲುಗಳನ್ನು ಸುಡುವುದರಿಂದ ವಾಯುಮಾಲಿನ್ಯ ಪರಿಸ್ಥಿತಿಯು ಹದಗೆಟ್ಟಿದೆ. ಇಂತಹ ಪರಿಸ್ಥಿತಿಯಲ್ಲಿ ಸಾಮಾನ್ಯ ಜನರು ನಡೆದುಕೊಂಡು ಹೋಗಲು ಸಹ ಸಾಧ್ಯವಿಲ್ಲ ಎಂದು ವಕೀಲರು ಹೇಳಿದರು, ಕೋಲು ಸುಡುವುದರಿಂದ ವಾಯು ಗುಣಮಟ್ಟ ಸೂಚ್ಯಂಕ (AQI) ಮಟ್ಟ ಹೆಚ್ಚಾಗಿದೆ ಎಂದು ಹೇಳಿದರು.

ಅದಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ನವೆಂಬರ್ 10ರಂದು ವಿಚಾರಣೆ ಕೈಗೆತ್ತಿಕೊಳ್ಳಿ ಎಂದು ಸೂಚಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com