ಅಮೃತಸರ: ಪಂಜಾಬಿನ ಅಮೃತಸರದಲ್ಲಿ ಇಂದು ಹಾಡಹಗಲೇ ಶಿವಸೇನಾ ಮುಖಂಡ ಸುಧೀರ್ ಸೂರಿ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.
ಸೂರಿ ಮತ್ತಿತರ ಪಕ್ಷದ ಕೆಲವು ಮುಖಂಡರು ದೇವಾಲಯವೊಂದರ ಬಳಿ ಪ್ರತಿಭಟನೆ ನಡೆಸುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ. ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಸೂರಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಬದುಕುಳಿಯಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಬಂಧಿಸಲಾಗಿದ್ದು, ಆತನಿಂದ ಬಂದೂಕನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ. ಪಂಜಾಬ್ ನಲ್ಲಿ ಈ ಹಿಂದೆ ಗಾಯಕ, ಕಾಂಗ್ರೆಸ್ ಮುಖಂಡ ಸಿಧು ಮೂಸೆವಾಲ ಅವರನ್ನು ತಂಡವೊಂದು ಗುಂಡಿಕ್ಕಿ ಹತ್ಯೆ ಮಾಡಿತ್ತು.
Advertisement