ಅಮೃತಸರ: ಶಿವಸೇನಾ ಮುಖಂಡ ಸುಧೀರ್ ಸೂರಿ ಗುಂಡೇಟಿಗೆ ಬಲಿ, ಆರೋಪಿ ವಶಕ್ಕೆ

ಪಂಜಾಬಿನ ಅಮೃತಸರದಲ್ಲಿ ಇಂದು ಹಾಡಹಗಲೇ ಶಿವಸೇನಾ ಮುಖಂಡ ಸುಧೀರ್ ಸೂರಿ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.
ಗುಂಡೇಟಿಗೆ ಬಲಿಯಾದ ಶಿವಸೇನಾ ಮುಖಂಡ ಸುಧೀರ್ ಸೂರಿ
ಗುಂಡೇಟಿಗೆ ಬಲಿಯಾದ ಶಿವಸೇನಾ ಮುಖಂಡ ಸುಧೀರ್ ಸೂರಿ

ಅಮೃತಸರ: ಪಂಜಾಬಿನ ಅಮೃತಸರದಲ್ಲಿ ಇಂದು ಹಾಡಹಗಲೇ ಶಿವಸೇನಾ ಮುಖಂಡ ಸುಧೀರ್ ಸೂರಿ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.

ಸೂರಿ ಮತ್ತಿತರ ಪಕ್ಷದ ಕೆಲವು ಮುಖಂಡರು ದೇವಾಲಯವೊಂದರ ಬಳಿ ಪ್ರತಿಭಟನೆ ನಡೆಸುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ. ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಸೂರಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು  ಬದುಕುಳಿಯಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. 

ಘಟನೆಗೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಬಂಧಿಸಲಾಗಿದ್ದು, ಆತನಿಂದ ಬಂದೂಕನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ. ಪಂಜಾಬ್ ನಲ್ಲಿ ಈ ಹಿಂದೆ ಗಾಯಕ, ಕಾಂಗ್ರೆಸ್ ಮುಖಂಡ ಸಿಧು ಮೂಸೆವಾಲ ಅವರನ್ನು ತಂಡವೊಂದು ಗುಂಡಿಕ್ಕಿ ಹತ್ಯೆ ಮಾಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com