ಭಾರತಕ್ಕೂ ಕಾಲಿಟ್ಟ ಇರಾನ್‌ ಹಿಜಾಬ್ ವಿರುದ್ಧದ ಹೋರಾಟ ಜ್ವಾಲೆ: ಕೇರಳದಲ್ಲಿ ಹಿಜಾಬ್ ಗೆ ಬೆಂಕಿಯಿಟ್ಟ ಮುಸ್ಲಿಂ ಮಹಿಳೆಯರು!

ಕಡ್ಡಾಯ ಹಿಜಾಬ್‌ಗೆ ಸಂಬಂಧಿಸಿದಂತೆ ಇರಾನ್‌ನಲ್ಲಿ ಕೆಲ ದಿನಗಳಿಂದ ಸರ್ಕಾರದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಅನೇಕ ಜನರು ಸೈನಿಕರ ಗುಂಡೇಟಿಗೆ ಬಲಿಯಾಗಿದ್ದಾರೆ. ಹಿಜಾಬ್ ವಿರುದ್ಧ ಆರಂಭವಾದ ಈ ಪ್ರತಿಭಟನೆಯ ಜ್ವಾಲೆ ಇದೀಗ ಭಾರತದ ಕೇರಳಕ್ಕೂ ತಲುಪಿದೆ.
ಹಿಜಾಬ್ ಸುಟ್ಟ ಮಹಿಳೆಯರು
ಹಿಜಾಬ್ ಸುಟ್ಟ ಮಹಿಳೆಯರು

ಕೊಚ್ಚಿ: ಕಡ್ಡಾಯ ಹಿಜಾಬ್‌ಗೆ ಸಂಬಂಧಿಸಿದಂತೆ ಇರಾನ್‌ನಲ್ಲಿ ಕೆಲ ದಿನಗಳಿಂದ ಸರ್ಕಾರದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಅನೇಕ ಜನರು ಸೈನಿಕರ ಗುಂಡೇಟಿಗೆ ಬಲಿಯಾಗಿದ್ದಾರೆ. ಹಿಜಾಬ್ ವಿರುದ್ಧ ಆರಂಭವಾದ ಈ ಪ್ರತಿಭಟನೆಯ ಜ್ವಾಲೆ ಇದೀಗ ಭಾರತದ ಕೇರಳಕ್ಕೂ ತಲುಪಿದೆ.

ಕೇರಳದ ಕೋಝಿಕ್ಕೋಡ್ ನಲ್ಲಿ ನಿನ್ನೆ ಹಿಜಾಬ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು. ಈ ಸಮಯದಲ್ಲಿ, ಜನರು ಇರಾನ್‌ನಲ್ಲಿ ಹಿಜಾಬ್ ವಿರೋಧಿ ಚಳುವಳಿಗೆ ಒಗ್ಗಟ್ಟಿನ ಸಂದೇಶವನ್ನು ನೀಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮಹ್ಸಾ ಅಮಿನಿಯ ಮರಣದ ನಂತರ ಇರಾನ್‌ನಲ್ಲಿ ಪ್ರತಿಭಟನೆ ಶುರು
ಇರಾನ್‌ನಲ್ಲಿ ಹಿಜಾಬ್ ವಿಷಯ ಬಿಸಿಯಾಗಿದೆ. ಪ್ರತಿಭಟನೆಯಲ್ಲಿ ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವಾಸ್ತವವಾಗಿ, 22 ವರ್ಷದ ಮಹ್ಸಾ ಅಮಿನಿ ಇರಾನ್‌ನಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಹತ್ಯೆಯಾಗಿದ್ದರು. ನಂತರ ದೇಶದಾದ್ಯಂತ ಸರ್ಕಾರದ ವಿರುದ್ಧ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಹ್ಸಾ ಅವರು ಡ್ರೆಸ್ ಕೋಡ್ ಅನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದ ನೈತಿಕ ಪೊಲೀಸರು ಆಕೆಗೆ ಥಳಿಸಿದ್ದು ಆಕೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದುರ. ಈ ಘಟನೆ ನಂತರ ಇದೀಗ ಇರಾನ್ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. 

ಟೆಹ್ರಾನ್‌ನಲ್ಲಿ ಒಂದು ಸಾವಿರ ಪ್ರತಿಭಟನಾಕಾರರ ವಿಚಾರಣೆ
ಇರಾನ್‌ನಲ್ಲಿ ಹಿಜಾಬ್ ವಿರುದ್ಧ ನಡೆಯುತ್ತಿರುವ ಚಳವಳಿಯಿಂದ ಸರ್ಕಾರ ಭಯಭೀತಗೊಂಡಿದೆ. ರಾಜಧಾನಿ ಟೆಹ್ರಾನ್‌ನಲ್ಲಿ ಸುಮಾರು ಒಂದು ಸಾವಿರ ಪ್ರತಿಭಟನಾಕಾರರನ್ನು ವಿಚಾರಣೆಗೆ ಒಳಪಡಿಸಲು ಅದು ಸಿದ್ಧತೆ ನಡೆಸುತ್ತಿದೆ. ಸರ್ಕಾರಿ ಪ್ರತಿಭಟನಾಕಾರರು ವಿಧ್ವಂಸಕ ಕೃತ್ಯ, ಮೃತ ಭದ್ರತಾ ಸಿಬ್ಬಂದಿಯೊಂದಿಗೆ ಅನುಚಿತ ವರ್ತಿನೆ. ಸಾರ್ವಜನಿಕ ಆಸ್ತಿಗೆ ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ.

ಇರಾನ್ ನಲ್ಲಿ ಹಿಜಾಬ್ ವಿರೋಧಿ ಆಂದೋಲನವನ್ನು ತಡೆಯುವ ಎಲ್ಲಾ ಪ್ರಯತ್ನಗಳು ವಿಫಲ
ಹಿಜಾಬ್ ವಿರೋಧಿ ಪ್ರತಿಭಟನೆಗಳನ್ನು ತಡೆಯಲು ಸರ್ಕಾರ ನಡೆಸಿದ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. ಪ್ರತಿಭಟನಾಕಾರರು ಇನ್ನೂ ಪ್ರತಿಭಟನೆಗಳನ್ನು ಮುಂದುವರೆಸಿದ್ದಾರೆ. ಸರ್ಕಾರ ಈ ಆಂದೋಲನವನ್ನು ಶತ್ರು ದೇಶಗಳ ಪಿತೂರಿ ಎಂದು ಕರೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com