ಅಹಮದಾಬಾದ್: ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಈಸುದನ್ ಗಧ್ವಿ ಅವರು ತಮ್ಮ ತವರು ಜಿಲ್ಲೆ ದೇವಭೂಮಿ ದ್ವಾರಕಾದ ಖಂಭಾಲಿಯಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದಾರೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಟ್ವೀಟ್ ಮೂಲಕ ಈ ಘೋಷಣೆ ಮಾಡಿದ್ದಾರೆ.
'ರೈತರು, ನಿರುದ್ಯೋಗಿ ಯುವಕರು, ಮಹಿಳೆಯರು, ಉದ್ಯಮಿಗಳ ಪರ ಹಲವು ವರ್ಷಗಳಿಂದ ಧ್ವನಿ ಎತ್ತಿದ ಈಸುದನ್ ಗಧ್ವಿ ಅವರು ಖಂಭಾಲಿಯಾದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ! ಶ್ರೀಕೃಷ್ಣನ ಪುಣ್ಯಭೂಮಿಯಿಂದ ಗುಜರಾತ್ಗೆ ಹೊಸ ಮತ್ತು ಉತ್ತಮ ಮುಖ್ಯಮಂತ್ರಿ ಸಿಗುತ್ತಾರೆ' ಎಂದು ದೆಹಲಿ ಮುಖ್ಯಮಂತ್ರಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಗಧ್ವಿ, 'ನೀವು ಮತ್ತು ಗುಜರಾತ್ನ ಜನ ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ನನ್ನ ಕೊನೆಯ ಉಸಿರು ಇರುವವರೆಗೂ ಉಳಿಸಿಕೊಳ್ಳುತ್ತೇನೆ ಮತ್ತು ಗುಜರಾತ್ನ ಜನರ ಸೇವೆ ಮಾಡುತ್ತೇನೆ ಎಂದು ಭರವಸೆ ನೀಡುವುದಾಗಿ ಹೇಳಿದ್ದಾರೆ.
Advertisement