14 ಭಾರತೀಯ ಮೀನುಗಾರರ ಬಂಧಿಸಿದ ಶ್ರೀಲಂಕಾ ನೌಕಾಪಡೆ

ಸಮುದ್ರ ಗಡಿ ಉಲ್ಲಂಘನೆ ಆರೋಪದ ಮೇಲೆ ಶ್ರೀಲಂಕಾ ನೌಕಾಪಡೆಯು 14 ಭಾರತೀಯ ಮೀನುಗಾರರನ್ನು ಬಂಧನಕ್ಕೊಳಪಡಿಸಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ರಾಮೇಶ್ವರಂ: ಸಮುದ್ರ ಗಡಿ ಉಲ್ಲಂಘನೆ ಆರೋಪದ ಮೇಲೆ ಶ್ರೀಲಂಕಾ ನೌಕಾಪಡೆಯು 14 ಭಾರತೀಯ ಮೀನುಗಾರರನ್ನು ಬಂಧನಕ್ಕೊಳಪಡಿಸಿದೆ ಎಂದು ತಿಳಿದುಬಂದಿದೆ.

ಶ್ರೀಲಂಕಾ ನೌಕಾಪಡೆಯ ಯೋಧರು ಅಮಾನುಷವಾಗಿ ವರ್ತಿಸಿದ್ದು ಭಾರತೀಯ ಮೀನುಗಾರನೊಬ್ಬನ ಕಣ್ಣಿಗೆ ಗಾಯವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಾಯಾಳು ಮೀನುಗಾರನನ್ನು ರಾಮೇಶ್ವರಂನ ಜಾನ್ಸನ್ ಎಂದು ಗುರುತಿಸಲಾಗಿದ್ದು, ತಡರಾತ್ರಿ ಲಂಕಾ ನೌಕಾ ಸಿಬ್ಬಂದಿ ದಾಳಿ ನಡೆಸಿದಾಗ ಆತನ ಕಣ್ಣಿಗೆ ಗಾಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ನಾಗಪಟ್ಟಣಂ ಜಿಲ್ಲೆಗೆ ಸೇರಿದ 14 ಮೀನುಗಾರರನ್ನು ಲಂಕಾ ನೌಕಾಪಡೆ ಬಂಧಿಸಿದೆ. ಅವರ ದೋಣಿಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಘಟನೆಗಳು ಮೀನುಗಾರರಲ್ಲಿ ಹೆಚ್ಚಿನ ಆತಂಕವನ್ನು ಉಂಟುಮಾಡಿದೆ ಎಂದು ಮೀನುಗಾರರ ಪ್ರತಿನಿಧಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com