ಪಶ್ಚಿಮ ಬಂಗಾಳ: ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಇದ್ದಕ್ಕಿದ್ದಂತೆ ಅಸ್ವಸ್ಥ

ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದಾರೆಂದು ತಿಳಿದುಬಂದಿದೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ
ಕೇಂದ್ರ ಸಚಿವ ನಿತಿನ್ ಗಡ್ಕರಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದಾರೆಂದು ತಿಳಿದುಬಂದಿದೆ.

ಗಡ್ಕರಿ ಅವರು ಸಿಲಿಗುರಿಯ ಎನ್ಹೆಚ್10 ಉದ್ದಕ್ಕೂ ಉದ್ದೇಶಿತ 13 ಕಿಮೀ ನಾಲ್ಕು-ಲೇನ್ ಎಲಿವೇಟೆಡ್ ರಸ್ತೆಯ ನಿರ್ಮಾಣಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಗಡ್ಕರಿಯವರು ಅಸ್ವಸ್ಥರಾಗಿದ್ದಾರೆ. ಕೂಡಲೇ ಸ್ತಳಕ್ಕೆ ಬಂದ ವೈದ್ಯರು ಗಡ್ಕರಿಯವರ ಆರೋಗ್ಯ ಪರಿಶೀಲನೆ ನಡೆಸಿದ್ದಾರೆ.

ಗಡ್ಕರಿಯವರ ರಕ್ತದಲ್ಲಿನ ಸಕ್ಕರೆ ಅಂಶದಲ್ಲಿನ ಹಠಾತ್ ಕುಸಿತವಾದ ಹಿನ್ನೆಲೆಯಲ್ಲಿ ಕೇಂದ್ರ ಸಚಿವರ ಆರೋಗ್ಯದಲ್ಲಿ ಏರುಪೇರು ಕಂಡಿ ಬಂದಿತ್ತು. ವೈದ್ಯರು ಅವರಿಗೆ ಚಿಕಿತ್ಸೆ ನೀಡಿದರು ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com