ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಚಿಲ್ ಸೆಕ್ಟರ್ನಲ್ಲಿ ಶುಕ್ರವಾರ ಹಿಮಪಾತಕ್ಕೆ ಸಿಲುಕಿ ಮೂವರು ಯೋಧರು ಹುತಾತ್ಮರಾಗಿದ್ದಾರೆ ಎಂದು ಶ್ರೀನಗರದಲ್ಲಿ ಅಧಿಕಾರಿಗಳು ತಿಳಿಸಿದ್ದಾರೆ.
56 ಆರ್ ಆರ್ ನ ಮೂವರು ಸೈನಿಕರು ಗಡಿ ನಿಯಂತ್ರಣ ರೇಖೆಯ ಬಳಿ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್ನಲ್ಲಿ ಹಿಮಪಾತಕ್ಕೆ ಸಿಲುಕಿದರು ಎಂದು ಅವರು ಹೇಳಿದ್ದಾರೆ.
ಶೋಧ ಕಾರ್ಯಾಚರಣೆಯ ನಂತರ ಅವರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.
Advertisement