social_icon

ಪ್ರಧಾನಿ ಮೋದಿಗೆ ರಾವಣನಂತೆ 100 ತಲೆಗಳಿವೆಯೇ?: ಮಲ್ಲಿಕಾರ್ಜುನ್ ಖರ್ಗೆ

ಗುಜರಾತ್ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ನಿಮಗೆ ರಾವಣನಂತೆ 100 ತಲೆಗಳಿವೆಯೇ? ಎಂದು ಪ್ರಶ್ನಿಸಿದ್ದಾರೆ.

Published: 29th November 2022 06:46 PM  |   Last Updated: 16th December 2022 12:18 PM   |  A+A-


Mallikarjun Kharge

ಮಲ್ಲಿಕಾರ್ಜುನ ಖರ್ಗೆ

Posted By : Lingaraj Badiger
Source : PTI

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ನಿಮಗೆ ರಾವಣನಂತೆ 100 ತಲೆಗಳಿವೆಯೇ? ಎಂದು ಪ್ರಶ್ನಿಸಿದ್ದಾರೆ.

ಅಹಮದಾಬಾದ್‌ನಲ್ಲಿ ಕಾಂಗ್ರೆಸ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಪ್ರಧಾನಿ ಮೋದಿ ತಮ್ಮ ಕೆಲಸವನ್ನು ಮರೆತು, ಕಾರ್ಪೊರೇಷನ್ ಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲೂ ಪ್ರಚಾರ ಮಾಡುತ್ತಾರೆ ಮತ್ತು ತಮ್ಮ ಮುಖ ನೋಡಿ ಮತ ಹಾಕಿ ಎಂದು ಹೇಳುತ್ತೀರಾ. ಆದರೆ ನಾವು ನಿಮ್ಮ ಮುಖವನ್ನು ಎಷ್ಟು ಬಾರಿ ನೋಡಬೇಕು? ನಿಮಗೆ ಎಷ್ಟು ರೂಪಗಳಿವೆ? ನಿಮಗೆ ರಾವಣನಂತೆ 100 ತಲೆಗಳಿವೆಯೇ? ಎಂದು ಪ್ರಶ್ನಿಸಿದ್ದಾರೆ.

ನೀವು ಮೋದಿ ಹೆಸರಿನಲ್ಲಿ ಮತ ಕೇಳುವುದನ್ನು ನಾನು ನೋಡಿದ್ದೇನೆ, ಕಾರ್ಪೊರೇಷನ್ ಅಥವಾ ವಿಧಾನ ಸಭೆ ಚುನಾವಣೆಗಳಲ್ಲಿ ನಿಮ್ಮ ಅಭ್ಯರ್ಥಿಯ ಹೆಸರಿನಲ್ಲಿ ಮತ ಕೇಳಿ. ಮೋದಿ ಅವರು ಪುರಸಭೆಗೆ ಬಂದು ಕೆಲಸ ಮಾಡುತ್ತಾರೆಯೇ? ನಿಮ್ಮ ಕಷ್ಟದ ಸಮಯದಲ್ಲಿ ಅವರು ನಿಮಗೆ ಸಹಾಯ ಮಾಡುತ್ತಾರೆಯೇ? ಎಂದು ಖರ್ಗೆ ಪ್ರಶ್ನೆ ಮಾಡಿದ್ದಾರೆ.

ಇದನ್ನು ಓದಿ: ಗುಜರಾತ್ ಮಾದರಿ ಎಂದರೆ 4 ಲಕ್ಷ ಕೋವಿಡ್ ಸಾವು: ಮಲ್ಲಿಕಾರ್ಜುನ ಖರ್ಗೆ

ಖರ್ಗೆ ಅವರ "ರಾವಣ" ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು, ಯಾವುದೇ ಅಭಿವೃದ್ಧಿ ಅಜೆಂಡಾ ಮತ್ತು ಜನರ ಬೆಂಬಲವಿಲ್ಲದೆ, ಕಾಂಗ್ರೆಸ್ ಗುಜರಾತ್ ಮತ್ತು ಗುಜರಾತಿಗಳನ್ನು ನಿಂದಿಸಲು ಹೊರಟಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಜಿ ವಿರುದ್ಧ ಖರ್ಗೆ ಅವರು ನೀಡಿದ ಹೇಳಿಕೆ ಸಾಕ್ಷಿಯಾಗಿದೆ. ಗುಜರಾತಿಗಳ ಮೇಲಿನ ಅವರ ದ್ವೇಷಕ್ಕೆ ಇದು ಸಾಕ್ಷಿ. ಗುಜರಾತ್‌ನ ಜನರು ಈ ಬಾರಿಯೂ ಕಾಂಗ್ರೆಸ್ ಅನ್ನು ತಿರಸ್ಕರಿಸುತ್ತಾರೆ ಎಂದು ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತವಿರುವ ಗುಜರಾತ್‌ನಲ್ಲಿ 182 ಸದಸ್ಯ ಬಲದ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ.


Stay up to date on all the latest ದೇಶ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp