ಶ್ರದ್ಧಾ ವಾಕರ್ ಹತ್ಯೆ: ಬೇಟಿ ಬಚಾವೋ ಸಭೆಯಲ್ಲಿ ವ್ಯಕ್ತಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ, ವಿಡಿಯೋ ವೈರಲ್!

ಭೀಕರ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಕುರಿತು ನಗರದಲ್ಲಿ ಆಯೋಜಿಸಿದ್ದ 'ಬೇಟಿ ಬಚಾವೋ ಮಹಾಪಂಚಾಯತ್' ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಮಹಿಳೆಯೊಬ್ಬರು ವ್ಯಕ್ತಿಯೋರ್ವನಿಗೆ ಚಪ್ಪಲಿಯಿಂದ ಹೊಡೆದಿದ್ದಾರೆ. 
ಚಪ್ಪಲಿಯಿಂದ ಹೊಡೆದ ಮಹಿಳೆ
ಚಪ್ಪಲಿಯಿಂದ ಹೊಡೆದ ಮಹಿಳೆ
Updated on

ನವದೆಹಲಿ: ಭೀಕರ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಕುರಿತು ನಗರದಲ್ಲಿ ಆಯೋಜಿಸಿದ್ದ 'ಬೇಟಿ ಬಚಾವೋ ಮಹಾಪಂಚಾಯತ್' ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಮಹಿಳೆಯೊಬ್ಬರು ವ್ಯಕ್ತಿಯೋರ್ವನಿಗೆ ಚಪ್ಪಲಿಯಿಂದ ಹೊಡೆದಿದ್ದಾರೆ. 

ಕಾರ್ಯಕ್ರಮದ ಮಧ್ಯೆ ವೇದಿಕೆಗೆ ಬಂದ ಮಹಿಳೆ ಮೈಕ್ ನಲ್ಲಿ ತನ್ನ ಕಷ್ಟಗಳನ್ನು ಹೇಳಿಕೊಳ್ಳುತ್ತಿದ್ದರು. ಈ ವೇಳೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಗೆ ಚಪ್ಪಲಿಯಿಂದ ಹೊಡೆದಿದ್ದಾರೆ.

ಈತನ ಮಗ ನನ್ನ ಮಗಳನ್ನು ಕರೆದುಕೊಂಡು ಓಡಿ ಹೋಗಿದ್ದಾನೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಮೈಕ್‌ನಲ್ಲಿ ಆಕೆ ನಾನು ಐದು ದಿನಗಳಿಂದ ದೂರು ಕೊಡಲು ಪೊಲೀಸ್ ಠಾಣೆ ಅಲೆಯುತ್ತಿದ್ದೇನೆ. ಆದರೆ ಪೊಲೀಸರು ನಿಷ್ಕ್ರಿಯತೆ ತೋರುತ್ತಿದ್ದಾರೆ ಎಂದು ಆರೋಪಿಸಿದರು.

ಇನ್ನು ವಿಡಿಯೋದಲ್ಲಿ ಚಪ್ಪಲಿಯಿಂದ ಒದೆ ತಿಂದ ವ್ಯಕ್ತಿ ಮಹಿಳೆಯ ಮೈಕ್ ನಲ್ಲಿ ತನ್ನ ಮಗನ ವಿರುದ್ಧ ಏನು ಹೇಳದಂತೆ ತಡೆಯುತ್ತಿದ್ದುದ್ದನ್ನು ಕಾಣಬಹುದಾಗಿದೆ. 

ದೆಹಲಿಯಲ್ಲಿ ನಡೆದ ಆಘಾತಕಾರಿ ಕೊಲೆ ಪ್ರಕರಣ ಸಂಬಂಧ ಸಭೆಯನ್ನು ಕರೆಯಲಾಗಿತ್ತು. ಶ್ರದ್ಧಾ ವಾಕರ್ ಳನ್ನು ಕತ್ತು ಹಿಸುಕಿ ಕೊಂದಿದ್ದ ಅಫ್ತಾಬ್ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ್ದು ದೇಶದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com