ಬಿಹಾರ ಕೃಷಿ ಸಚಿವ ಸುಧಾಕರ್ ಸಿಂಗ್ ರಾಜೀನಾಮೆ

ತಮ್ಮದೇ ಸರ್ಕಾರವನ್ನು ಟೀಕಿಸುವ ಮೂಲಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಮುಜುಗರ ಉಂಟು ಮಾಡಿದ್ದ ಬಿಹಾರ ಕೃಷಿ ಸಚಿವ ಸುಧಾಕರ್ ಸಿಂಗ್ ಅವರು ರಾಜೀನಾಮೆ ನೀಡಿದ್ದಾರೆ.
ಸುಧಾಕರ್ ಸಿಂಗ್
ಸುಧಾಕರ್ ಸಿಂಗ್

ಪಾಟ್ನಾ: ತಮ್ಮದೇ ಸರ್ಕಾರವನ್ನು ಟೀಕಿಸುವ ಮೂಲಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಮುಜುಗರ ಉಂಟು ಮಾಡಿದ್ದ ಬಿಹಾರ ಕೃಷಿ ಸಚಿವ ಸುಧಾಕರ್ ಸಿಂಗ್ ಅವರು ರಾಜೀನಾಮೆ ನೀಡಿದ್ದಾರೆ.

ಸುಧಾಕರ್ ಸಿಂಗ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಅವರ ತಂದೆ ಮತ್ತು ರಾಜ್ಯ ಆರ್‌ಜೆಡಿ ಅಧ್ಯಕ್ಷ ಜಗದಾನಂದ್ ಸಿಂಗ್ ಅವರು ಹೇಳಿದ್ದಾರೆ.

"ಸದಾ ರೈತರ ಪರವಾಗಿ ಧ್ವನಿ ಎತ್ತುತ್ತಿರುವ" ಕೃಷಿ ಸಚಿವರು ಮೈತ್ರಿ ಸರ್ಕಾರದಲ್ಲಿ "ಬಿರುಕು ಹೆಚ್ಚಾಗದಂತೆ" ತಡೆಯಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಜಗದಾನಂದ್ ಸಿಂಗ್ ತಿಳಿಸಿದ್ದಾರೆ.

ತಮ್ಮದೇ ಇಲಾಖೆಯಲ್ಲಿನ ಭ್ರಷ್ಟಾಚಾರದ ಕುರಿತು ಇತ್ತೀಚೆಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸುಧಾಕರ್ ಸಿಂಗ್ ಅವರು, ನಮ್ಮ ಕೃಷಿ ಇಲಾಖೆಯಲ್ಲಿ ಕಳ್ಳತನ ಮಾಡದೇ ಇರುವ ಒಂದೇ ಒಂದು ವಿಭಾಗವೂ ಇಲ್ಲ. ನಾನು ಇಲಾಖೆಯ ಉಸ್ತುವಾರಿ ಹೊತ್ತಿರುವುದರಿಂದ ನಾನೇ ಇದರ ನಾಯಕ. ನನ್ನ ಮೇಲೆ ಇನ್ನೂ ಅನೇಕ ನಾಯಕರಿದ್ದಾರೆ ಎಂದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com