ಗಾಂಧಿಯಂತೆ, ನಾವು ಅನ್ಯಾಯದ ವಿರುದ್ಧ ಭಾರತವನ್ನು ಒಗ್ಗೂಡಿಸಲು ಪ್ರತಿಜ್ಞೆ ಮಾಡುತ್ತೇವೆ: ರಾಹುಲ್ ಗಾಂಧಿ

'ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಅನ್ಯಾಯದ ವಿರುದ್ಧ ದೇಶವನ್ನು ಒಗ್ಗೂಡಿಸಿದ ರೀತಿಯಲ್ಲಿಯೇ ಭಾರತವನ್ನು ಒಗ್ಗೂಡಿಸಲು ಪ್ರತಿಜ್ಞೆ ಮಾಡುತ್ತೇವೆ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದರು.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: 'ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಅನ್ಯಾಯದ ವಿರುದ್ಧ ದೇಶವನ್ನು ಒಗ್ಗೂಡಿಸಿದ ರೀತಿಯಲ್ಲಿಯೇ ಭಾರತವನ್ನು ಒಗ್ಗೂಡಿಸಲು ಪ್ರತಿಜ್ಞೆ ಮಾಡುತ್ತೇವೆ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದರು. ಮಹಾತ್ಮ ಗಾಂಧಿ ಅವರ ಜನ್ಮದಿನದಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

'ಬಾಪು ನಮಗೆ ಸತ್ಯ ಮತ್ತು ಅಹಿಂಸೆಯ ಹಾದಿಯಲ್ಲಿ ನಡೆಯಲು ಕಲಿಸಿದರು. ಅವರು ಪ್ರೀತಿ, ಸಹಾನುಭೂತಿ, ಸಾಮರಸ್ಯ ಮತ್ತು ಮಾನವೀಯತೆಯ ಅರ್ಥವನ್ನು ವಿವರಿಸಿದರು' ಎಂದು ಕಾಂಗ್ರೆಸ್ ನಾಯಕ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

'ಇಂದು ಗಾಂಧಿ ಜಯಂತಿ, ಅವರು ಅನ್ಯಾಯದ ವಿರುದ್ಧ ದೇಶವನ್ನು ಒಗ್ಗೂಡಿಸಿದಂತೆ ನಾವು ನಮ್ಮ ಭಾರತವನ್ನು ಒಂದುಗೂಡಿಸುತ್ತೇವೆ ಎಂದು ನಾವು ಪ್ರತಿಜ್ಞೆ ಮಾಡುತ್ತೇವೆ' ಎಂದು ಮಾಜಿ ಕಾಂಗ್ರೆಸ್ ಮುಖ್ಯಸ್ಥರು ಹೇಳಿದರು.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆಯ ದೃಶ್ಯ ಸೇರಿದಂತೆ ಮಹಾತ್ಮ ಗಾಂಧಿಯವರ ವಿಡಿಯೋ ತುಣುಕನ್ನು ಸಹ ಹಂಚಿಕೊಂಡಿದ್ದಾರೆ. ಭಾರತ್ ಜೋಡೋ ಯಾತ್ರೆ ಸದ್ಯ ಕರ್ನಾಟಕವನ್ನು ಪ್ರವೇಶಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com