ನವದೆಹಲಿ: ಹಿಂದೂ ದೇವತೆಗಳನ್ನು ನಿಂದಿಸಲಾಗಿದೆ ಎಂದು ಹೇಳಲಾದ ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ದೆಹಲಿ ಮಾಜಿ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರಿಗೆ ದೆಹಲಿ ಪೊಲೀಸರು ಸೋಮವಾರ ಸಮನ್ಸ್ ನೀಡಿದ್ದು, ಮಂಗಳವಾರ ಅವರನ್ನು ವಿಚಾರಣೆ ನಡೆಸಲಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಕೆಲವರೊಂದಿಗೆ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮಾಜಿ ಸಚಿವರಿಗೆ ನೋಟಿಸ್ ನೀಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಹಾಜರಿದ್ದ ಬಗ್ಗೆ ಮಾಜಿ ಸಚಿವರನ್ನು ಪ್ರಶ್ನಿಸಲಾಗುವುದು ಮತ್ತು ಅಲ್ಲಿ ನಿಜವಾಗಿ ಏನಾಯಿತು ಎಂಬುದರ ಕುರಿತು ಅವರಿಂದ ವಿವರಗಳನ್ನು ಪಡೆಯಲಾಗುವುದು ಎಂದು ಅವರು ಹೇಳಿದ್ದಾರೆ.
ಗೌತಮ್ ಅವರು ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಅವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿತ್ತು. ವಿವಾದದ ನಂತರ ಅವರು ಭಾನುವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಗುಜರಾತ್ ಚುನಾವಣಾ ಪ್ರಚಾರದ ವೇಳೆ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಲು ಭಾರತೀಯ ಜನತಾ ಪಕ್ಷ ಈ ವಿಷಯವನ್ನು ಬಳಸಿಕೊಂಡಿತು ಮತ್ತು ಅವರನ್ನು 'ಹಿಂದೂ ವಿರೋಧಿ' ಎಂದು ಆರೋಪಿಸಿತ್ತು.
Advertisement