ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಸ್ವಲ್ಪದರಲ್ಲಿಯೇ ಅಪಾಯದಿಂದ ಪಾರಾಗಿದ್ದಾರೆ. ಗಂಗಾ ನದಿಯ ದಡದಲ್ಲಿರುವ ಛತ್ ಫಾಟ್ ನ್ನು ಪರಿಶೀಲಿಸಲು ಹೋದಾಗ ಅವರಿದ್ದ ದೋಣಿ ಜೆಪಿ ಸೇತುವೆ ಪಿಲ್ಲರ್ ಗೆ ಡಿಕ್ಕಿ ಹೊಡೆದಿದೆ.
ಆದಾಗ್ಯೂ, ದೋಣಿಗೆ ಯಾವುದೇ ಗಮನಾರ್ಹ ರೀತಿಯಲ್ಲಿ ಹಾನಿಯಾಗಿಲ್ಲ. ದೋಣಿಯಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಪಾಟ್ನಾದ ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರಶೇಖರ್ ಸಿಂಗ್ ತಿಳಿಸಿದ್ದಾರೆ.
ಕೆಲವು ತಾಂತ್ರಿಕ ತೊಂದರೆಗಳು ಕಾಣಿಸಿಕೊಂಡು ನಿತೀಶ್ ಕುಮಾರ್ ಅವರಿದ್ದ ಸ್ಟೀಮರ್ ಜೆಪಿ ಸೇತುವೆಯ ಪಿಲ್ಲರ್ಗೆ ಡಿಕ್ಕಿ ಹೊಡೆದಿದೆ. ತಕ್ಷಣ ಮುಖ್ಯಮಂತ್ರಿ ಮತ್ತು ಇತರರನ್ನು ಸುರಕ್ಷಿತವಾಗಿ ಮತ್ತೊಂದು ಸ್ಟೀಮರ್ಗೆ ಸ್ಥಳಾಂತರಿಸಲಾಯಿತು ಮತ್ತು ಪರಿಶೀಲನೆಯನ್ನು ಅವರು ಮುಂದುವರೆಸಿದರು ಎಂದು ಸಿಂಗ್ ಹೇಳಿದರು.
ರಾಜ್ಯದ ಅತಿದೊಡ್ಡ ಹಬ್ಬಗಳಲ್ಲಿ ಒಂದಾದ ಛತ್ ಪೂಜೆಯನ್ನು ಗಮನದಲ್ಲಿಟ್ಟುಕೊಂಡು ನಿತೀಶ್ ಕುಮಾರ್ ಪರಿಶೀಲಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.
Advertisement