social_icon

ಭಾರತದ ಆರ್ಥಿಕತೆಯ ಮೂಲಭೂತ ಅಂಶಗಳು ಉತ್ತಮ ಸ್ಥಿತಿಯಲ್ಲಿವೆ: ನಿರ್ಮಲಾ ಸೀತಾರಾಮನ್

ಅಂತಾರಾಷ್ಟ್ರೀಯ ಮಾರುಕಟ್ಟೆ ವ್ಯವಹಾರದಲ್ಲಿ ಡಾಲರ್ ಮೌಲ್ಯ ವರ್ಧನೆಯಾಗುತ್ತಿರುವಾಗ ಭಾರತೀಯ ರೂಪಾಯಿ ಮೌಲ್ಯ ಕೂಡ ವರ್ಧನೆಯಾಗುತ್ತಿದೆ. ಭಾರತದ ಆರ್ಥಿಕತೆಯ ಬುಡ ಗಟ್ಟಿಯಾಗಿದೆ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಹಣದುಬ್ಬರ ಕಡಿಮೆಯಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಪಾದಿಸಿದ್ದಾರೆ.

Published: 16th October 2022 11:20 AM  |   Last Updated: 16th October 2022 11:25 AM   |  A+A-


Nirmala Sitharaman

ನಿರ್ಮಲಾ ಸೀತಾರಾಮನ್

PTI

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆ ವ್ಯವಹಾರದಲ್ಲಿ ಡಾಲರ್ ಮೌಲ್ಯ ವರ್ಧನೆಯಾಗುತ್ತಿರುವಾಗ ಭಾರತೀಯ ರೂಪಾಯಿ ಮೌಲ್ಯ ಕೂಡ ವರ್ಧನೆಯಾಗುತ್ತಿದೆ. ಭಾರತದ ಆರ್ಥಿಕತೆಯ ಬುಡ ಗಟ್ಟಿಯಾಗಿದೆ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಹಣದುಬ್ಬರ ಕಡಿಮೆಯಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಪಾದಿಸಿದ್ದಾರೆ.

ವಾಷಿಂಗ್ಟನ್ ನಲ್ಲಿ ವಿಶ್ವ ಬ್ಯಾಂಕ್ ಮತ್ತು ಅಂತಾರಾಷ್ಟ್ರೀಯ ಹಣಕಾಸು ನಿಧಿಯ ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಸ್ವದೇಶಕ್ಕೆ ಮರಳಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ ಹಣದುಬ್ಬರ ನಿರ್ವಹಣೆ ಮಟ್ಟದಲ್ಲಿದೆ. ಭಾರತದ ಆರ್ಥಿಕತೆಯ ಮೂಲ ಉತ್ತಮವಾಗಿದೆ. ಸೂಕ್ಷ್ಮ ಆರ್ಥಿಕತೆ ಮೂಲಭೂತತೆ ಉತ್ತಮವಾಗಿದೆ. ವಿದೇಶಿ ವಿನಿಮಯ ಕೂಡ ಚೆನ್ನಾಗಿದೆ ಎಂದರು.

ಅಂತಾರಾಷ್ಟ್ರೀಯ ಸಭೆಯ ಹೊರಗೆ ಸಚಿವೆ ನಿರ್ಮಲಾ ಸೀತಾರಾಮನ್ 24 ದ್ವಿಪಕ್ಷೀಯ ಮತ್ತು 12ಕ್ಕೂ ಅಧಿಕ ಬಹುಹಂತೀಯ ಸಭೆಗಳನ್ನು ನಡೆಸಿದ್ದರು. ದೇಶದ ಹಣದುಬ್ಬರವನ್ನು ಶೇಕಡಾ 6ಕ್ಕಿಂತಲೂ ಕಡಿಮೆ ತರುವ ಉದ್ದೇಶವಿದ್ದು ಸರ್ಕಾರ ಈ ನಿಟ್ಟಿನಲ್ಲಿ ಪ್ರಯತ್ನಪಡುತ್ತಿದೆ ಎಂದರು.

ಟರ್ಕಿಯಂತಹ ದೇಶಗಳು ಎರಡಂಕಿಯ ಹಣದುಬ್ಬರದ ಸಮಸ್ಯೆಯನ್ನು ಹೊಂದಿದೆ ಎಂದ ಸಚಿವೆ ಬಾಹ್ಯ ಕಾರಣಗಳಿಂದ ಹಲವು ದೇಶಗಳು ತೀವ್ರ ಹೊಡೆತಕ್ಕೆ ಸಿಲುಕಿವೆ. ಆದ್ದರಿಂದ, ಪ್ರಪಂಚದ ಉಳಿದ ಭಾಗಗಳಿಗೆ ಹೋಲಿಸಿದರೆ ನಾವು ಇರುವ ಸ್ಥಾನದ ಬಗ್ಗೆ ನಾವು ಜಾಗೃತರಾಗಿರಬೇಕು. ವಿಶೇಷವಾಗಿ ವಿತ್ತೀಯ ಕೊರತೆಯ ಬಗ್ಗೆ ಬಹಳ ಜಾಗೃತವಾಗಿದ್ದೇವೆ ಎಂದರು. 

ಭಾರತೀಯ ರೂಪಾಯಿಗಳ ಕುಸಿತದ ಕುರಿತು ಮತ್ತೊಂದು ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಡಾಲರ್ ಬಲಗೊಳ್ಳುತ್ತಿರುವುದೇ ಇದಕ್ಕೆ ಕಾರಣ ಎಂದು ಹೇಳಿದರು. ಎಲ್ಲ ಇತರ ಕರೆನ್ಸಿಗಳು ಡಾಲರ್ ವಿರುದ್ಧ ಕಾರ್ಯನಿರ್ವಹಿಸುತ್ತಿವೆ. ನಾನು ತಾಂತ್ರಿಕತೆಗಳ ಬಗ್ಗೆ ಮಾತನಾಡುವುದಿಲ್ಲ, ಆದರೆ ಭಾರತದ ರೂಪಾಯಿ ಬಹುಶಃ ಈ ಡಾಲರ್ ದರವನ್ನು ತಡೆದುಕೊಂಡಿದೆ ಎಂಬುದು ಸತ್ಯ, ಡಾಲರ್ ಬಲವರ್ಧನೆಯ ಪರವಾಗಿ ವಿನಿಮಯ ದರವಿದೆ ಭಾರತೀಯ ರೂಪಾಯಿ ಇತರ ಅನೇಕ ಉದಯೋನ್ಮುಖ ಮಾರುಕಟ್ಟೆ ಕರೆನ್ಸಿಗಳಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. 


Stay up to date on all the latest ದೇಶ news
Poll
BJP_Casual_Images1

ವಿಧಾನಸಭೆ ಚುನಾವಣೆ: ಆಡಳಿತ ವಿರೋಧಿ ಅಲೆಯನ್ನು ಎದುರಿಸಿ ಬಿಜೆಪಿ ಕರ್ನಾಟಕದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp