social_icon

ಬಿಲ್ಕಿಸ್ ಬಾನೋ ಕೇಸು: 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ. 29ಕ್ಕೆ

2002ರ ಬಿಲ್ಕಿಸ್ ಬಾನೋ  ಸಾಮೂಹಿಕ ಅತ್ಯಾಚಾರ ಪ್ರಕರಣ ಮತ್ತು ಗುಜರಾತ್ ಗಲಭೆಯಲ್ಲಿ ಸಂತ್ರಸ್ತೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣದಲ್ಲಿ 11 ಅಪರಾಧಿಗಳ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ನವೆಂಬರ್ 29 ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

Published: 18th October 2022 01:57 PM  |   Last Updated: 18th October 2022 02:25 PM   |  A+A-


Bilkis Bano with her family.

ತನ್ನ ಕುಟುಂಬಸ್ಥರೊಂದಿಗೆ ಬಿಲ್ಕಿಸ್ ಬಾನೋ

Posted By : Sumana Upadhyaya
Source : PTI

ನವದೆಹಲಿ: 2002ರ ಬಿಲ್ಕಿಸ್ ಬಾನೋ  ಸಾಮೂಹಿಕ ಅತ್ಯಾಚಾರ ಪ್ರಕರಣ ಮತ್ತು ಗುಜರಾತ್ ಗಲಭೆಯಲ್ಲಿ ಸಂತ್ರಸ್ತೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣದಲ್ಲಿ 11 ಅಪರಾಧಿಗಳ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ನವೆಂಬರ್ 29 ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಸಿ ಟಿ ರವಿಕುಮಾರ್ ಅವರಿದ್ದ ನ್ಯಾಯಪೀಠವು ಗುಜರಾತ್ ಸರ್ಕಾರ ಸಲ್ಲಿಸಿದ ಅಫಿಡವಿಟ್ಟನ್ನು ಎಲ್ಲರಿಗೂ ಸಿಗುವಂತೆ ಆದೇಶ ನೀಡಿದರು. ಗುಜರಾತ್ ಸರ್ಕಾರ ಸಲ್ಲಿಸಿರುವ ಅಫಿಡವಿಟ್‌ಗೆ ಉತ್ತರ ನೀಡಲು ಅರ್ಜಿದಾರರಿಗೆ ಕಾಲಾವಕಾಶ ನೀಡಲಾಗಿದೆ.

ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಗುಜರಾತ್ ಸರ್ಕಾರ ಪ್ರತಿಅರ್ಜಿ ಸಲ್ಲಿಸಿದೆ. ಸರ್ಕಾರದ ಅಫಿಡವಿಟ್ಟು ಎಲ್ಲಾ ಸಂಬಂಧಪಟ್ಟವರಿಗೆ ಸಿಗುವಂತೆ ನ್ಯಾಯಾಲಯ ಆದೇಶ ನೀಡಿದೆ. 

ಇದನ್ನೂ ಓದಿ: ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಶೀಘ್ರ ಬಿಡುಗಡೆಗೆ ಕೇಂದ್ರ ಅನುಮೋದನೆ ನೀಡಿತ್ತು; ಸುಪ್ರೀಂ ವಿಚಾರಣೆಗೂ ಮುನ್ನ ವಕೀಲ

ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಿದ್ದರಿಂದ, ಅಪರಾಧಿಗಳ ಕ್ಷಮಾಪಣೆಗಾಗಿ ಕೇಂದ್ರದಿಂದ ಸೂಕ್ತ ಆದೇಶಗಳನ್ನು ಪಡೆದುಕೊಂಡಿದೆ ಎಂದು ಅದು ಹೇಳಿದೆ. 

2002ರಲ್ಲಿ ಗೋಧ್ರಾ ರೈಲು ದಹನ ಘಟನೆಯ ನಂತರ ಭುಗಿಲೆದ್ದ ಗಲಭೆ ಹಿಂಸಾಚಾರದಲ್ಲಿ ತಪ್ಪಿಸಿಕೊಂಡು ಓಡಿಹೋಗುವಾಗ ಬಿಲ್ಕಿಸ್ ಬಾನೋಗೆ 21 ವರ್ಷಗಳಾಗಿದ್ದು ಐದು ತಿಂಗಳ ಗರ್ಭಿಣಿಯಾಗಿದ್ದರು. ಗಲಭೆಯಲ್ಲಿ ಕೊಲೆಯಾದ ಏಳು ಕುಟುಂಬ ಸದಸ್ಯರಲ್ಲಿ ಆಕೆಯ ಮೂರು ವರ್ಷದ ಮಗಳೂ ಸೇರಿದ್ದಳು.

ಗುಜರಾತ್ ಸರ್ಕಾರವು ತನ್ನ ನೀತಿಯಡಿಯಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡಲು ಅನುಮತಿ ನೀಡಿದ ನಂತರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ 11 ಮಂದಿ ಈ ವರ್ಷ ಆಗಸ್ಟ್ 15 ರಂದು ಗೋಧ್ರಾ ಉಪ-ಜೈಲಿನಿಂದ ಹೊರಗೆಬಂದಿದ್ದರು. ಅವರು 15 ವರ್ಷಗಳಿಗೂ ಹೆಚ್ಚು ಕಾಲ ಜೈಲು ವಾಸವನ್ನು ಪೂರ್ಣಗೊಳಿಸಿದ್ದರು.


Stay up to date on all the latest ದೇಶ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp