social_icon

ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕರ್ನಾಟಕ ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ಅವರ ನಿಧನಕ್ಕೆ ಭಾನುವಾರ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಾಮಾಜಿಕ ಸಬಲೀಕರಣಕ್ಕಾಗಿ ವ್ಯಾಪಕವಾಗಿ ಶ್ರಮಿಸಿದ ಅಸಾಧಾರಣ ನಾಯಕ ಎಂದು ಹೇಳಿದ್ದಾರೆ.

Published: 23rd October 2022 12:45 PM  |   Last Updated: 23rd October 2022 12:50 PM   |  A+A-


PM Narendra Modi

ಪ್ರಧಾನಿ ನರೇಂದ್ರ ಮೋದಿ

PTI

ನವದೆಹಲಿ: ಕರ್ನಾಟಕ ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ಅವರ ನಿಧನಕ್ಕೆ ಭಾನುವಾರ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಾಮಾಜಿಕ ಸಬಲೀಕರಣಕ್ಕಾಗಿ ವ್ಯಾಪಕವಾಗಿ ಶ್ರಮಿಸಿದ ಅಸಾಧಾರಣ ನಾಯಕ ಎಂದು ಹೇಳಿದ್ದಾರೆ.

ಸವದತ್ತಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದ ಮಾಮನಿ ಅವರು ತೀವ್ರ ಅನಾರೋಗ್ಯದಿಂದ ಶನಿವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 56 ವರ್ಷ ವಯಸ್ಸಾಗಿತ್ತು.

'ಕರ್ನಾಟಕ ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ಅವರ ನಿಧನದಿಂದ ನೋವಾಗಿದೆ. ಅವರು ಸಾಮಾಜಿಕ ಸಬಲೀಕರಣಕ್ಕಾಗಿ ವ್ಯಾಪಕವಾಗಿ ಶ್ರಮಿಸಿದ ಅಸಾಧಾರಣ ನಾಯಕರಾಗಿದ್ದರು. ಅವರು ಕರ್ನಾಟಕದಾದ್ಯಂತ ಬಿಜೆಪಿಯನ್ನು ಬಲಪಡಿಸಲು ಶ್ರಮಿಸಿದರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸಂತಾಪಗಳು. ಓಂ ಶಾಂತಿ ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ನಿಧನ: ಸಿಎಂ ಬೊಮ್ಮಾಯಿ ಸಂತಾಪ

ಆನಂದ ಮಾಮನಿ ಅವರು ಕ್ಯಾನ್ಸರ್ ಕಾಯಿಲೆಯಿಂದಾಗಿ ಕೆಲ ದಿನಗಳಿಂದ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಅಲ್ಲದೆ, ಇತ್ತೀಚೆಗಷ್ಟೇ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ಅವರು, ಶೀಘ್ರದಲ್ಲೇ ಗುಣಮುಖವಾಗಿ ಜನ ಸೇವೆಗೆ ಬರುತ್ತೇನೆ. ಯಾರು ಆತಂಕಪಡಬೇಡಿ. ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಚೆನ್ನಾಗಿದ್ದೇನೆ ಎಂದು ಹೇಳಿದ್ದರು.


Stay up to date on all the latest ದೇಶ news
Poll
Dk shivakumar

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 65 ಸ್ಥಾನಗಳ ಗಡಿ ದಾಟುವುದಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.


Result
ಒಪ್ಪುತ್ತೇನೆ
ಒಪ್ಪುವುದಿಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp