80 ಜನರನ್ನು ಬಲಿ ಪಡೆದ ಗುಜರಾತ್ ನ ಕೇಬಲ್ ಸೇತುವೆ ದುರಂತಕ್ಕೆ ಕಾರಣ?

ಗುಜರಾತ್ ನಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಮೊರ್ಬಿ ಪ್ರದೇಶದಲ್ಲಿ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕೇಬಲ್ ಸೇತುವೆ ಕುಸಿದು ಸದ್ಯ 80 ಮಂದಿ ಮೃತಪಟ್ಟಿದ್ದು ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ.
ಸೇತುವೆ ಮೇಲೆ ಕಿಕ್ಕಿರಿಸಿದ್ದ ಜನರು
ಸೇತುವೆ ಮೇಲೆ ಕಿಕ್ಕಿರಿಸಿದ್ದ ಜನರು
Updated on

ಅಹಮದಾಬಾದ್: ಗುಜರಾತ್ ನಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಮೊರ್ಬಿ ಪ್ರದೇಶದಲ್ಲಿ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕೇಬಲ್ ಸೇತುವೆ ಕುಸಿದು ಸದ್ಯ 80 ಮಂದಿ ಮೃತಪಟ್ಟಿದ್ದು ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ.

ಸಂಜೆ 6.30ರ ಸುಮಾರಿಗೆ ಈ ದುರಂತ ಸಂಭವಿಸಿದ್ದು ಈ ವೇಳೆ ಸೇತುವೆ ಮೇಲೆ ಮಕ್ಕಳು, ವೃದ್ಧರೂ ಸೇರಿದಂತೆ 400ಕ್ಕೂ ಹೆಚ್ಚು ಜನರು ನೆರೆದಿದ್ದರು. ಸೇತುವೆ ಕುಸಿತದಿಂದಾಗಿ ಹಲವಾರು ಜನರು ನದಿಗೆ ಬಿದ್ದಿದ್ದಾರೆ. ಸದ್ಯ 250ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದ್ದು ಕಾರ್ಯಾಚರಣೆ ಭರದಿಂದ ಸಾಗಿದೆ. ಪೊಲೀಸರು, ಅಗ್ನಿಶಾಮಕ ತುರ್ತು ಸೇವೆಗಳು ಮತ್ತು ಮೂರು ಎನ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿವೆ. 

ಇನ್ನು ಮೋರ್ಬಿ ಕೇಬಲ್ ಸೇತುವೆಯ ವಿಡಿಯೋವೊಂದು ವೈರಲ್ ಆಗಿದೆ. ವಿಡಿಯೋದಲ್ಲಿ ಸೇತುವೆ ಮೇಲೆ ಜನರು ಕಿಕ್ಕಿರಿದು ತುಂಬಿರುವುದು ಕಾಣಬಹುದಾಗಿದೆ. ಇನ್ನು ಕೆಲ ಯುವಕರು ಹುಚ್ಚಾಟ ಮೆರೆದಿದ್ದಾರೆ. ಸೇತುವೆಗೆ ಅಳವಡಿಸಿದ್ದ ಕಬ್ಬಿಣದ ಸರಳುಗಳನ್ನು ಕಾಲಿನಿಂದ ಒದೆಯುತ್ತಿರುವುದು ಮೊಬೈಲ್ ನಲ್ಲಿ ಸೆರೆಯಾಗಿದೆ.

ಘಟನೆ ಕುರಿತಂತೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಗುಜರಾತ್ ಸಿಎಂ ಭುಪೇಂದ್ರ ಸಿಂಗ್ ಆಘಾತ ವ್ಯಕ್ತಪಡಿಸಿದ್ದು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಸೇತುವೆಯ ನವೀಕರಣ ಕಾಮಗಾರಿ ಕೇವಲ ಒಂದು ವಾರದ ಹಿಂದೆ ಮುಕ್ತಾಯಗೊಂಡಿತ್ತು. ಮೂರು ದಿನಗಳ ಹಿಂದೆ ಸೇತುವೆಯನ್ನು ಮತ್ತೊಮ್ಮೆ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿತ್ತು. ಹೀಗಾಗಿ ನೂರಾರು ಜನರು ಸೇತುವೆಯನ್ನು ವೀಕ್ಷಿಸಲು ಬಂದಿದ್ದಾಗ ಈ ದುರುಂತ ಸಂಭವಿಸಿದೆ.

ಇನ್ನು ಅಧಿಕಾರಿಗಳು ವಿವರಿಸುವಂತೆ ಸೇತುವೆ ಮೇಲೆ ಮಿತಿಮೀರಿದ ಜನಸಂದಣಿ ಇತ್ತು. ಹೀಗಾಗಿ ಅದರ ಭಾರದಿಂದ ಈ ಅನಾಹುತ ಸಂಭವಿಸಿರಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com