ಸೆಪ್ಟೆಂಬರ್ 5ರಂದು ದೆಹಲಿಗೆ ನಿತೀಶ್ ಕುಮಾರ್, ಬಿಜೆಪಿಯೇತರ ನಾಯಕರ ಭೇಟಿ ಸಾಧ್ಯತೆ

ಬಿಜೆಪಿ ನೇತೃತ್ವದ ಎನ್ ಡಿಎನಿಂದ ಹೊರನಡೆದಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೆಪ್ಟೆಂಬರ್ 5 ರಂದು ದೆಹಲಿಗೆ ತೆರಳಲಿದ್ದು, ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿರುವ ಅವರು ಈ ಸಂಬಂಧ ವಿವಿಧ ಪಕ್ಷಗಳ ರಾಜಕೀಯ...
ನಿತೀಶ್ ಕುಮಾರ್
ನಿತೀಶ್ ಕುಮಾರ್

ಪಾಟ್ನಾ: ಬಿಜೆಪಿ ನೇತೃತ್ವದ ಎನ್ ಡಿಎನಿಂದ ಹೊರನಡೆದಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೆಪ್ಟೆಂಬರ್ 5 ರಂದು ದೆಹಲಿಗೆ ತೆರಳಲಿದ್ದು, ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿರುವ ಅವರು ಈ ಸಂಬಂಧ ವಿವಿಧ ಪಕ್ಷಗಳ ರಾಜಕೀಯ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ಜೆಡಿಯು ಹಿರಿಯ ಮುಖಂಡರು ತಿಳಿಸಿದ್ದಾರೆ.

ಎರಡು ದಿನಗಳ ನಂತರ ನಿತೀಶ್ ಕುಮಾರ್ ಅವರು ದೆಹಲಿಯಿಂದ ಹಿಂತಿರುಗಲಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಅವರ ಮಿತ್ರ ಪಕ್ಷವಾಗಿರುವ ಕಾಂಗ್ರೆಸ್‌ನ ಹಿರಿಯ ನಾಯಕರನ್ನು ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.

ಕಳೆದ ತಿಂಗಳು ಬಿಜೆಪಿ ಜತ ಮೈತ್ರಿ ಕಡಿದುಕೊಂಡ ನಂತರ ನಿತೀಶ್ ಕುಮಾರ್ ಅವರು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಸಂಪರ್ಕದಲ್ಲಿದ್ದರು ಎಂಬುದು ಗಮನಾರ್ಹ. ಇನ್ನು ದೆಹಲಿ ಪ್ರವಾಸದ ವೇಳೆ ಆಮ್ ಆದ್ಮಿ ಪಕ್ಷದ ಮುಖ್ಯಸ್ಥರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಸಂವಾದ ನಡೆಸುವ ಸಾಧ್ಯತೆಯಿದೆ.

ಇದೇ ವೇಳೆ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌತಾಲಾ ಅವರನ್ನು ಭೇಟಿಯಾಗುವ ಸಾಧ್ಯತೆಯಿದ್ದು, ಅವರಿಬ್ಬರೂ ಲೋಕದಳದಲ್ಲಿದ್ದಾಗಿನಿಂದ ಪರಿಚಿತರು.

ಉತ್ತರ ರಾಜ್ಯದಲ್ಲಿ ಸತತ ಎರಡನೇ ಅವಧಿಗೆ ಆಡಳಿತ ನಡೆಸುತ್ತಿರುವ ಬಿಜೆಪಿಗೆ ಸವಾಲೆಸೆಯುವ ಮೂಲಕ ಚೌತಾಲಾ ಅವರು ತಮ್ಮ ಭಾರತೀಯ ರಾಷ್ಟ್ರೀಯ ಲೋಕದಳವನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿದ್ದಾರೆ.

ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಣಿ ನಡೆಯುತ್ತಿರುವ ಇಲ್ಲಿನ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್ ಕುಮಾರ್, ಬಿಜೆಪಿ ಪ್ರತಿಪಕ್ಷಗಳ ಶಾಸಕರನ್ನು ಖರೀದಿಸುವ ಬಗ್ಗೆ ಮತ್ತು ಸಾಂವಿಧಾನಿಕತೆಯನ್ನು ಪ್ರಶ್ನಿಸಿದರು.

"ಇದು ಸರಿನಾ? ಇದು ಸಾಂವಿಧಾನಿಕವೇ? ಇದು ಸ್ಥಾಪಿತ ಮಾನದಂಡಗಳಿಗೆ ಅನುಗುಣವಾಗಿದೆಯೇ? ಅವರು ಎಲ್ಲೆಡೆ ಹೀಗೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

2024 ರಲ್ಲಿ ಸಕಾರಾತ್ಮಕ ಜನಾದೇಶಕ್ಕಾಗಿ ಎಲ್ಲಾ ಪ್ರತಿಪಕ್ಷಗಳು ಬಿಜೆಪಿ ವಿರುದ್ಧ ಒಂದಾಗಬೇಕು ಎಂದು ಬಿಹಾರ ಸಿಎಂ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com